/newsfirstlive-kannada/media/post_attachments/wp-content/uploads/2024/10/TEAM-INDIA-1.jpg)
ಇತ್ತೀಚೆಗೆ ಮೆಲ್ಬೋರ್ನ್ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಡೆದ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದಲ್ಲಿ ಕ್ಯಾಪ್ಟನ್ ರೋಹಿತ್ ಶರ್ಮಾ ನಾಯಕತ್ವದ ಟೀಮ್ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ 184 ರನ್ಗಳಿಂದ ಸೋಲು ಕಂಡಿದೆ.
ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್ನಲ್ಲಿ 474 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಟೀಮ್ ಇಂಡಿಯಾ ಮೊದಲ ಇನಿಂಗ್ಸ್ನಲ್ಲಿ 369 ರನ್ಗಳಿಗೆ ಆಲೌಟ್ ಆಗಿದೆ. ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್ನಲ್ಲಿ 105 ರನ್ಗಳ ಮುನ್ನಡೆ ಸಾಧಿಸಿತು. 2ನೇ ಇನ್ನಿಂಗ್ಸ್ನಲ್ಲಿ ಆಸ್ಟ್ರೇಲಿಯಾ 234 ರನ್ ಗಳಿಸಿ 340 ರನ್ಗಳ ಗೆಲುವಿನ ಗುರಿ ನೀಡಿತು. ಈ ಗುರಿ ಬೆನ್ನಟ್ಟಿದ ಭಾರತ 155 ರನ್ ಗಳಿಸಿ 184 ರನ್ಗಳಿಂದ ಹೀನಾಯವಾಗಿ ಸೋತಿರುವುದು ಎಲ್ಲರಿಗೂ ಗೊತ್ತಿರೋ ವಿಚಾರ.
ಭಾರತ ತಂಡ ಮೆಲ್ಬೋರ್ನ್ ಟೆಸ್ಟ್ ಪಂದ್ಯ ಗೆಲ್ಲಲೇಬೇಕಾದ ಒತ್ತಡದಲ್ಲಿತ್ತು. ಆದರೆ, ಟೀಮ್ ಇಂಡಿಯಾ ಪರ ಕೆಲವು ಆಟಗಾರರು ನಿರೀಕ್ಷಿತ ಪ್ರದರ್ಶನ ನೀಡಲಿಲ್ಲ. ಆಸ್ಟ್ರೇಲಿಯಾ ವಿರುದ್ಧ 4ನೇ ಟೆಸ್ಟ್ ಪಂದ್ಯ ಸೋಲುವ ಮೂಲಕ ಟೀಮ್ ಇಂಡಿಯಾ ವಿಶ್ವಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ರೇಸ್ನಿಂದ ಹೊರಬೀಳುವ ಸಾಧ್ಯತೆ ಇದೆ. ರೇಸ್ನಲ್ಲಿರಲು ಟೀಮ್ ಇಂಡಿಯಾ ಕೊನೆಯ ಸಿಡ್ನಿ ಟೆಸ್ಟ್ ಗೆಲ್ಲಲೇಬೇಕು. ಇದರ ಮಧ್ಯೆ ಟೀಮ್ ಇಂಡಿಯಾ ಮುಖ್ಯ ಕೋಚ್ ಗೌತಮ್ ಗಂಭೀರ್ ಸ್ಟಾರ್ ಬೌಲರ್ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟಿದ್ದಾರೆ.
ತಂಡದಿಂದ ಆಕಾಶ್ ದೀಪ್ ಔಟ್
ಬಾರ್ಡರ್ ಗವಾಸ್ಕರ್ ಸರಣಿಯಲ್ಲಿ ಟೀಮ್ ಇಂಡಿಯಾ ಪರ ಬುಮ್ರಾ ನಂತರ ಅತ್ಯುತ್ತಮ ಪ್ರದರ್ಶನ ನೀಡಿದ್ದು ಆಕಾಶ್ ದೀಪ್. ಇವರು ಸಿಡ್ನಿ ಟೆಸ್ಟ್ಗೆ ಮುನ್ನ ಇಂಜುರಿಗೆ ಒಳಗಾಗಿದ್ದಾರೆ. ಹಾಗಾಗಿ ಮುಂದಿನ ಪಂದ್ಯ ಆಕಾಶ್ ದೀಪ್ ಆಡುತ್ತಿಲ್ಲ ಎಂದು ಗಂಭೀರ್ ತಿಳಿಸಿದ್ದಾರೆ.
ಗಂಭೀರ್ ಏನಂದ್ರು?
ಪ್ರತಿಯೊಬ್ಬ ಆಟಗಾರನಿಗೆ ತಾನು ಎಲ್ಲಿ ಸುಧಾರಿಸಬೇಕು ಅನ್ನೋದು ತಿಳಿದಿದೆ. ಟೆಸ್ಟ್ ಪಂದ್ಯಗಳನ್ನು ಗೆಲ್ಲುವುದು ಹೇಗೆ ಎಂಬ ಬಗ್ಗೆ ಮಾತ್ರ ಮಾತಾಡುತ್ತೇನೆ. ಆಕಾಶ್ ದೀಪ್ ಬೆನ್ನಿನ ಬಿಗಿತದಿಂದಾಗಿ ಕೊನೆಯ ಟೆಸ್ಟ್ ಆಡುವುದಿಲ್ಲ ಎಂದರು ಗಂಭೀರ್.
ಇದನ್ನೂ ಓದಿ:ನಮ್ಮ ಮೆಟ್ರೋದಲ್ಲಿ ಯುವತಿ ಖಾಸಗಿ ಅಂಗ ಫೋಟೋ ತೆಗೆದ ಕಾಮುಕ ಅರೆಸ್ಟ್
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ