/newsfirstlive-kannada/media/post_attachments/wp-content/uploads/2024/12/Allu-arjun-5.jpg)
ಐಕಾನ್ ಸ್ಟಾರ್ ಅಲ್ಲು ಅರ್ಜುನ್ (Allu Arjun) ಬಂಧನ ಈಗ ತೆಲುಗು ಇಂಡಸ್ಟ್ರಿಯಲ್ಲಿ ಹಾಟ್ ಟಾಪಿಕ್ ಆಗಿದೆ. ಪುಷ್ಪ-2 ಪ್ರೀಮಿಯರ್ ಶೋ ವೇಳೆ ನಡೆದ ದುರಂತ ಪ್ರಕರಣದಲ್ಲಿ ತೆಲುಗು ಬಿಗ್ ಸ್ಟಾರ್ ಅಲ್ಲು ಅರ್ಜುನ್ ಅವರನ್ನು ಚಿಕ್ಕಡಪಲ್ಲಿ ಪೊಲೀಸರು ಬಂಧಿಸಿದ್ದಾರೆ.
ಹೈದರಾಬಾದ್ ನಿವಾಸದಲ್ಲಿ ಬಂಧಿಸಿರುವ ಚಿಕ್ಕಡಪಲ್ಲಿ ಪೊಲೀಸರು ಠಾಣೆಗೆ ಕರೆದೊಯ್ದಿದ್ದಾರೆ. ಅಲ್ಲಿ ಬಂಧನ ಪ್ರಕ್ರಿಯೆಯನ್ನು ಮುಗಿಸಿ ಕೋರ್ಟ್ಗೆ ಹಾಜರುಪಡಿಸಲು ಸಿದ್ಧತೆ ನಡೆಸ್ತಿದ್ದಾರೆ. ಅಂತೆಯೇ ಗಾಂಧಿ ಉಸ್ಮಾನಿಯಾ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಲಿದ್ದಾರೆ. ನಂತರ ನಾಂಪಳ್ಳಿ ಕೋರ್ಟ್ (Nampally court) ಮುಂದೆ ಅಲ್ಲು ಅರ್ಜುನ್ ಅವರನ್ನು ಹಾಜರುಪಡಿಸಲಿದ್ದಾರೆ.
ಇದನ್ನೂ ಓದಿ:ಅಲ್ಲು ಅರ್ಜುನ್ ಅರೆಸ್ಟ್; ನಿನ್ನೆಯೂ ಪುಷ್ಪ -2 ಕಮಾಲ್.. 8 ದಿನದ ಕಲೆಕ್ಷನ್ ಎಷ್ಟು ಕೋಟಿ..?
ನಂತರ ಪೊಲೀಸರು ವಿಚಾರಣೆಗಾಗಿ ನ್ಯಾಯಾಧೀಶರ ಮುಂದೆ ಅಲ್ಲು ಅರ್ಜುನ್ನನ್ನು ತಮ್ಮ ವಶಕ್ಕೆ ನೀಡುವಂತೆ ಮನವಿ ಮಾಡಿಕೊಳ್ಳಲಿದ್ದಾರೆ. ಒಂದು ವೇಳೆ ಕೋರ್ಟ್ ಪೊಲೀಸ್ ಕಸ್ಟಡಿಗೆ ನೀಡಿದರೆ ಜೈಲೇ ಗತಿ ಆಗಲಿದೆ. ಹೈದರಾಬಾದ್ನ ಚಂಚಲಗೂಡ (Chanchalguda jail) ಜೈಲಿಗೆ ಪೊಲೀಸರು ಕಳುಹಿಸುತ್ತಾರೆ.
ಇದನ್ನೂ ಓದಿ:ವರ್ಲ್ಡ್ ಚೆಸ್ ಚಾಂಪಿಯನ್ಶಿಪ್ ಗೆದ್ದ ಗುಕೇಶ್ ಎಲ್ಲಿಯವರು? ಇವನಮ್ಮವ, ಇವನಮ್ಮವ ಎನ್ನುತಿವೆ ಎರಡು ರಾಜ್ಯಗಳು!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ