/newsfirstlive-kannada/media/post_attachments/wp-content/uploads/2025/04/anil-kumble.jpg)
ಬೆಂಗಳೂರು: ಇಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ 18ನೇ ಆವೃತ್ತಿಯ 34ನೇ ಪಂದ್ಯ ನಡೆಯಲಿದೆ. ಇಂದು ಸಂಜೆ 7.30ಕ್ಕೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ (RCB vs PBKS) ಮಧ್ಯೆ ಹಣಾಹಣಿ ಶುರುವಾಗಲಿದೆ.
ಇದನ್ನೂ ಓದಿ: ಆರ್​ಸಿಬಿಗೆ ಯಾರೇ ಬರಲಿ, ಯಾರೇ ಹೋಗಲಿ.. ಕೊಹ್ಲಿಯ ಈ ದೊಡ್ಡ ಗುಣದ ಬಗ್ಗೆ ಗೊತ್ತಿರಲಿ..
ಇಲ್ಲಿಯವರೆಗೆ 6 ಪಂದ್ಯಗಳನ್ನು ಆಡಿರುವ ಆರ್​ಸಿಬಿ ನಾಲ್ಕರಲ್ಲಿ ಗೆಲುವು ಸಾಧಿಸಿದೆ. ಆರ್​ಸಿಬಿಯ ಅದ್ಭುತ ಆರಂಭಕ್ಕೆ ಮಾಜಿ ಕ್ರಿಕೆಟಿಗ, ಕನ್ನಡಿಗ ಅನಿಲ್ ಕುಂಬ್ಳೆ ಖುಷಿ ವ್ಯಕ್ತಪಡಿಸಿದ್ದಾರೆ. ಮಹತ್ವದ ಬೆಳವಣಿಗೆ ಒಂದರಲ್ಲಿ ಇಂದು ಡಿಕೆ ಶಿವಕುಮಾರ್ ಅವರನ್ನು ಭೇಟಿಯಾದರು. ಡಿಕೆಶಿ ಭೇಟಿ ಬಳಿಕ, ಮಾಧ್ಯಮಗಳ ಜೊತೆ ಮಾತನಾಡಿದರು.
/newsfirstlive-kannada/media/post_attachments/wp-content/uploads/2025/04/anil-dks.jpg)
ಇದೇ ವೇಳೆ ಆರ್​ಸಿಬಿ ಗೆಲುವಿನ ಬಗ್ಗೆ ಪ್ರತಿಕ್ರಿಯಿಸಿದ ಅವರು, ಆರ್​ಸಿಬಿ ಮುಂದೆಯೂ ಹೀಗೇ ಆಡಲಿ. 18ನೇ ಆವೃತ್ತಿಯ ಅರ್ಧ ಟೂರ್ನಿ ಕೂಡ ಇನ್ನೂ ಮುಗಿದಿಲ್ಲ. ನಮ್ಮ ಆರ್​ಸಿಬಿ ಇನ್ನೂ ಬೆಂಗಳೂರಿನಲ್ಲಿ ಗೆದ್ದಿಲ್ಲ. ಈ ಬಾರಿ ಆರ್​ಸಿಬಿ ಕಪ್ ಗೆಲ್ಲುವ ನಿರೀಕ್ಷೆ ಇದ್ದೇ ಇದೆ. 18 ವರ್ಷ ಆಗಿದೆ. ಇವತ್ತಿನ ಮ್ಯಾಚ್​ಗೆ ಆಲ್ ದ ಬೆಸ್ಟ್ ಹೇಳುವೆ. ನಾನು ಪಂಜಾಬ್ ಹಾಗೂ ಬೆಂಗಳೂರು ಎರಡೂ ತಂಡದಲ್ಲಿದ್ದೆ. ಅದೇ ಸಮಸ್ಯೆ ನನಗೆ ಎಂದಿದ್ದಾರೆ.
ಆರ್​ಸಿಬಿ ಪರ 42 ಪಂದ್ಯಗಳನ್ನು ಆಡಿರುವ ಅನಿಲ್ ಕುಂಬ್ಳೆ 45 ವಿಕೆಟ್ ಪಡೆದುಕೊಂಡಿದ್ದಾರೆ. ಬೌಲಿಂಗ್ ಎಕನಾಮಿ ರೇಟ್ 6.58 ಇದೆ. ಇವರ ನಾಯಕತ್ವದ ಅಡಿಯಲ್ಲಿ 2010ರಲ್ಲಿ ಆರ್​ಸಿಬಿ ಸೆಮಿ ಫೈನಲ್ ಪ್ರವೇಶ ಮಾಡಿತ್ತು. 2009ರಲ್ಲಿ ಆರ್​ಸಿಬಿ ಫೈನಲ್ ಪ್ರವೇಶ ಮಾಡಿತ್ತು, ಆರ್​ಸಿಬಿ ಫೈನಲ್ ಪ್ರವೇಶದ ಹಿಂದೆ ಕುಂಬ್ಳೆ ಪಾತ್ರ ಕೂಡ ಇದೆ. 2011ರಲ್ಲಿ ಕುಂಬ್ಳೆ ಮೆಂಟರ್ ಆಗಿದ್ದರು .
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us