SSLC ಪರೀಕ್ಷೆಯಲ್ಲಿ ಬಾಗಲಕೋಟೆಯ ಅಂಕಿತಾಗೆ 625ಕ್ಕೆ 625 ಅಂಕ
ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಓದಿರುವ ಅಂಕಿತಾ ಬಸಪ್ಪ ಕೊಣ್ಣೂರ
SSLCಯಲ್ಲಿ ಫಸ್ಟ್ ಬಂದಿದ್ದಕ್ಕೆ ಅಂಕಿತಾಗೆ ರಾಜ್ಯಾದ್ಯಂತ ಶುಭಾಶಯಗಳ ಮಹಾಪೂರ
ಬಾಗಲಕೋಟೆ: 2023-24ನೇ ಸಾಲಿನ SSLC ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಈ ಬಾರಿಯ ರಿಸಲ್ಟ್ನಲ್ಲಿ ಬಾಗಲಕೋಟೆ ಜಿಲ್ಲೆಯ ಅಂಕಿತಾ ಬಸಪ್ಪ ಕೊಣ್ಣೂರ ರಾಜ್ಯಕ್ಕೆ ಫಸ್ಟ್ ಬಂದು ಎಲ್ಲರ ಗಮನ ಸೆಳೆದಿದ್ದಾರೆ.
ಮುಧೋಳ ತಾಲ್ಲೂಕು ವಜ್ಜರಮಟ್ಟಿ ಗ್ರಾಮದ ವಿದ್ಯಾರ್ಥಿನಿ ಅಂಕಿತಾ, ಮೆಳ್ಳಿಗೇರಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಓದಿದ್ದಾರೆ. ಸರ್ಕಾರಿ ಶಾಲೆಯಲ್ಲಿ ಕಷ್ಟಪಟ್ಟು ಅಭ್ಯಾಸ ಮಾಡಿರುವ ಅಂಕಿತಾ 625ಕ್ಕೆ 625 ಅಂಕ ಪಡೆದಿದ್ದಾರೆ.
ಇದನ್ನೂ ಓದಿ: 625/625 ಬಾಗಲಕೋಟೆ ವಿದ್ಯಾರ್ಥಿನಿ ರಾಜ್ಯಕ್ಕೆ ಫಸ್ಟ್.. SSLC ಟಾಪರ್ಸ್ಗಳ ಪಟ್ಟಿ ಇಲ್ಲಿದೆ
ಅಂಕಿತಾ ಬಸಪ್ಪ ಕಣ್ಣೂರ ರಾಜ್ಯಕ್ಕೆ ಫಸ್ಟ್ ಬಂದಿರೋದಕ್ಕೆ ಇಡೀ ಬಾಗಲಕೋಟೆ ಜಿಲ್ಲೆಯಲ್ಲೇ ಸಂತಸ ಮನೆ ಮಾಡಿದೆ. ತಂದೆ, ತಾಯಿ ಅಂಕಿತಾ ಸಿಹಿ ತಿನ್ನಿಸಿ ಖುಷಿ ಹಂಚಿಕೊಂಡಿದ್ದಾರೆ. ರಾಜ್ಯಕ್ಕೆ ಫಸ್ಟ್ ಬಂದಿದ್ದಕ್ಕೆ ತುಂಬಾ ಖುಷಿಯಾಗಿದೆ ಎಂದಿರುವ ಅಂಕಿತಾ, ಭವಿಷ್ಯದಲ್ಲಿ ಐಎಎಸ್ ಮಾಡುವ ಕನಸು ಕಂಡಿದ್ದಾರೆ.
ವಜ್ಜರಮಟ್ಟಿ ಗ್ರಾಮದಲ್ಲಿರುವ ಅಂಕಿತಾ ನಿವಾಸಕ್ಕೆ ಹಲವಾರು ಮಂದಿ ಆಗಮಿಸಿ ಶುಭಾಶಯಗಳನ್ನು ಕೋರಿದ್ದಾರೆ. ಬಡತನದಲ್ಲಿ ಕಷ್ಟಪಟ್ಟು ಓದಿರುವ ಅಂಕಿತಾ ಅವರ ಸಾಧನೆ ಇಡೀ ರಾಜ್ಯವೇ ಹೆಮ್ಮೆ ಪಡುವಂತಿದೆ. ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಸೋಷಿಯಲ್ ಮೀಡಿಯಾದಲ್ಲಿ ಅಂಕಿತಾ ಅವರಿಗೆ ಶುಭಾಶಯಗಳನ್ನು ತಿಳಿಸಿದ್ದಾರೆ.
SSLC ಪರೀಕ್ಷೆಯಲ್ಲಿ ರಾಜ್ಯಕ್ಕೇ ಪ್ರಥಮ ಸ್ಥಾನ ಪಡೆದ ಬಾಗಲಕೋಟೆಯ ಮುಧೋಳ ಸರ್ಕಾರಿ ಶಾಲೆಯ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಅವರಿಗೆ, ಆಕೆಯ ಶಿಕ್ಷಕರಿಗೆ ನನ್ನ ಹೃದಯಪೂರ್ವಕ ಶುಭಾಶಯಗಳು. ಸರ್ಕಾರಿ ಶಾಲೆ ಮಕ್ಕಳು ಯಾರಿಗೂ ಕಮ್ಮಿ ಇಲ್ಲ ಎಂಬುದನ್ನು ಅಂಕಿತಾ ಅವರು ನಿರೂಪಿಸಿದ್ದಾರೆ. ನೀವು ಹಾಗೂ ನಿಮ್ಮ ಶಾಲೆ ಬಗ್ಗೆ ಇಡೀ ಕರ್ನಾಟಕವೇ… pic.twitter.com/3bf0jnjknr
— DK Shivakumar (@DKShivakumar) May 9, 2024
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
SSLC ಪರೀಕ್ಷೆಯಲ್ಲಿ ಬಾಗಲಕೋಟೆಯ ಅಂಕಿತಾಗೆ 625ಕ್ಕೆ 625 ಅಂಕ
ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಓದಿರುವ ಅಂಕಿತಾ ಬಸಪ್ಪ ಕೊಣ್ಣೂರ
SSLCಯಲ್ಲಿ ಫಸ್ಟ್ ಬಂದಿದ್ದಕ್ಕೆ ಅಂಕಿತಾಗೆ ರಾಜ್ಯಾದ್ಯಂತ ಶುಭಾಶಯಗಳ ಮಹಾಪೂರ
ಬಾಗಲಕೋಟೆ: 2023-24ನೇ ಸಾಲಿನ SSLC ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಈ ಬಾರಿಯ ರಿಸಲ್ಟ್ನಲ್ಲಿ ಬಾಗಲಕೋಟೆ ಜಿಲ್ಲೆಯ ಅಂಕಿತಾ ಬಸಪ್ಪ ಕೊಣ್ಣೂರ ರಾಜ್ಯಕ್ಕೆ ಫಸ್ಟ್ ಬಂದು ಎಲ್ಲರ ಗಮನ ಸೆಳೆದಿದ್ದಾರೆ.
ಮುಧೋಳ ತಾಲ್ಲೂಕು ವಜ್ಜರಮಟ್ಟಿ ಗ್ರಾಮದ ವಿದ್ಯಾರ್ಥಿನಿ ಅಂಕಿತಾ, ಮೆಳ್ಳಿಗೇರಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಓದಿದ್ದಾರೆ. ಸರ್ಕಾರಿ ಶಾಲೆಯಲ್ಲಿ ಕಷ್ಟಪಟ್ಟು ಅಭ್ಯಾಸ ಮಾಡಿರುವ ಅಂಕಿತಾ 625ಕ್ಕೆ 625 ಅಂಕ ಪಡೆದಿದ್ದಾರೆ.
ಇದನ್ನೂ ಓದಿ: 625/625 ಬಾಗಲಕೋಟೆ ವಿದ್ಯಾರ್ಥಿನಿ ರಾಜ್ಯಕ್ಕೆ ಫಸ್ಟ್.. SSLC ಟಾಪರ್ಸ್ಗಳ ಪಟ್ಟಿ ಇಲ್ಲಿದೆ
ಅಂಕಿತಾ ಬಸಪ್ಪ ಕಣ್ಣೂರ ರಾಜ್ಯಕ್ಕೆ ಫಸ್ಟ್ ಬಂದಿರೋದಕ್ಕೆ ಇಡೀ ಬಾಗಲಕೋಟೆ ಜಿಲ್ಲೆಯಲ್ಲೇ ಸಂತಸ ಮನೆ ಮಾಡಿದೆ. ತಂದೆ, ತಾಯಿ ಅಂಕಿತಾ ಸಿಹಿ ತಿನ್ನಿಸಿ ಖುಷಿ ಹಂಚಿಕೊಂಡಿದ್ದಾರೆ. ರಾಜ್ಯಕ್ಕೆ ಫಸ್ಟ್ ಬಂದಿದ್ದಕ್ಕೆ ತುಂಬಾ ಖುಷಿಯಾಗಿದೆ ಎಂದಿರುವ ಅಂಕಿತಾ, ಭವಿಷ್ಯದಲ್ಲಿ ಐಎಎಸ್ ಮಾಡುವ ಕನಸು ಕಂಡಿದ್ದಾರೆ.
ವಜ್ಜರಮಟ್ಟಿ ಗ್ರಾಮದಲ್ಲಿರುವ ಅಂಕಿತಾ ನಿವಾಸಕ್ಕೆ ಹಲವಾರು ಮಂದಿ ಆಗಮಿಸಿ ಶುಭಾಶಯಗಳನ್ನು ಕೋರಿದ್ದಾರೆ. ಬಡತನದಲ್ಲಿ ಕಷ್ಟಪಟ್ಟು ಓದಿರುವ ಅಂಕಿತಾ ಅವರ ಸಾಧನೆ ಇಡೀ ರಾಜ್ಯವೇ ಹೆಮ್ಮೆ ಪಡುವಂತಿದೆ. ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಸೋಷಿಯಲ್ ಮೀಡಿಯಾದಲ್ಲಿ ಅಂಕಿತಾ ಅವರಿಗೆ ಶುಭಾಶಯಗಳನ್ನು ತಿಳಿಸಿದ್ದಾರೆ.
SSLC ಪರೀಕ್ಷೆಯಲ್ಲಿ ರಾಜ್ಯಕ್ಕೇ ಪ್ರಥಮ ಸ್ಥಾನ ಪಡೆದ ಬಾಗಲಕೋಟೆಯ ಮುಧೋಳ ಸರ್ಕಾರಿ ಶಾಲೆಯ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಅವರಿಗೆ, ಆಕೆಯ ಶಿಕ್ಷಕರಿಗೆ ನನ್ನ ಹೃದಯಪೂರ್ವಕ ಶುಭಾಶಯಗಳು. ಸರ್ಕಾರಿ ಶಾಲೆ ಮಕ್ಕಳು ಯಾರಿಗೂ ಕಮ್ಮಿ ಇಲ್ಲ ಎಂಬುದನ್ನು ಅಂಕಿತಾ ಅವರು ನಿರೂಪಿಸಿದ್ದಾರೆ. ನೀವು ಹಾಗೂ ನಿಮ್ಮ ಶಾಲೆ ಬಗ್ಗೆ ಇಡೀ ಕರ್ನಾಟಕವೇ… pic.twitter.com/3bf0jnjknr
— DK Shivakumar (@DKShivakumar) May 9, 2024
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ