ಕಾರ್ಯಕರ್ತರು, ಮುಖಂಡರ ಜೊತೆ ಆಗಮಿಸಿ ನಾಮಪತ್ರ ಸಲ್ಲಿಸಿದ್ದ ಕೆ. ಅಣ್ಣಾಮಲೈ
ಕೊಯಮತ್ತೂರು ಜಿಲ್ಲಾಧಿಕಾರಿ ಟ್ವೀಟರ್ ಖಾತೆಯಲ್ಲಿ ಈ ಬಗ್ಗೆ ಹೇಳಿದ್ದೇನು?
ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ ಅಣ್ಣಾಮಲೈ ವಿಡಿಯೋ
ಚೆನ್ನೈ: ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ಏ. 19ರಂದು ನಡೆಯಲಿದ್ದು ಹೀಗಾಗಿ ಪಕ್ಷದ ಅಭ್ಯರ್ಥಿಗಳು ಫುಲ್ ಅಲರ್ಟ್ ಆಗಿದ್ದಾರೆ. ಇದರ ಮಧ್ಯೆ ಕೊಯಮತ್ತೂರು ಲೋಕಸಭೆ ಕ್ಷೇತ್ರದ ಅಭ್ಯರ್ಥಿಯಾಗಿ ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ ಕೆ ಅಣ್ಣಾಮಲೈ ನಾಮಪತ್ರ ಸಲ್ಲಿಸಿದ್ದಾರೆ. ಸದ್ಯ ಬಿರು ಬಿಸಿಲಿನಲ್ಲಿ ಕೆ ಅಣ್ಣಾಮಲೈ ಅವರು ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. ಇದರ ಮಧ್ಯೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದು ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.
ಇದನ್ನೂ ಓದಿ: ಕೊಯಮತ್ತೂರು ಅಗ್ನಿ ಪರೀಕ್ಷೆಗಿಳಿದ ಅಣ್ಣಾಮಲೈ; ಲೋಕಸಮರದ ಯುದ್ಧಕ್ಕೆ ಕೇಸರಿ ರಣಕಹಳೆ
ಹೌದು, ಆ ವಿಡಿಯೋದಲ್ಲಿ ಚುನಾವಣಾ ಪ್ರಚಾರದ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಅವರಿಗೆ ಮಹಿಳೆಯೊಬ್ಬರು ಆರತಿ ಮಾಡುತ್ತಿದ್ದರು. ಇದೇ ವೇಳೆ ಮಹಿಳೆ ಹಿಡಿದ ಆರತಿ ತಟ್ಟೆಯ ಕೆಳಗಡೆ ಹಣವನ್ನು ಬಚ್ಚಿಟ್ಟು ನೀಡಿದ್ದಾರೆ. ಇದೇ ವಿಡಿಯೋ ಈಗ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಈ ಸಂಬಂಧ ಕೊಯಮತ್ತೂರಿನ ಜಿಲ್ಲಾ ಚುನಾವಣಾಧಿಕಾರಿ ಪೊಲೀಸರಿಗೆ ತನಿಖೆ ನಡೆಸುವಂತೆ ಪ್ರತಿ ಪಕ್ಷದವರು ಆದೇಶಿಸುತ್ತಿದ್ದಾರೆ.
We have taken cognisance of the video shared. This is forwarded to the police team for verification. The enquiry is in progress. https://t.co/Pqf0AT3jUD
— District Collector, Coimbatore (@CollectorCbe) March 29, 2024
ಇನ್ನು, ಈ ಬಗ್ಗೆ ಕೊಯಮತ್ತೂರು ಜಿಲ್ಲಾಧಿಕಾರಿ X ಖಾತೆಯಲ್ಲಿ ವೈರಲ್ ಆಗುತ್ತಿರೋ ವಿಡಿಯೋವನ್ನು ನಾವು ಗಮನಿಸಿದ್ದೇ. ಈ ವಿಡಿಯೋದ ಹಿಂದಿನ ಅಸಲಿಯತ್ತು ಕಂಡುಹಿಡಿಯಲು ಪೊಲೀಸ್ ತಂಡಕ್ಕೆ ವೀಡಿಯೊವನ್ನು ಕಳುಹಿಸಲಾಗಿದೆ. ಈ ಬಗ್ಗೆ ವಿಚಾರಣೆ ನಡೆಯುತ್ತಿದೆ ಎಂದು ಬರೆದುಕೊಂಡಿದ್ದಾರೆ.
ಕರ್ನಾಟಕ ಕೇಡರ್ನ ಮಾಜಿ ಐಪಿಎಸ್ ಅಧಿಕಾರಿಯಾಗಿದ್ದ ಅಣ್ಣಾಮಲೈ ಅವರು ಸರ್ಕಾರಿ ಹುದ್ದೆಗೆ ರಾಜೀನಾಮೆ ನೀಡಿ 2020ರಲ್ಲಿ ಬಿಜೆಪಿ ಸೇರಿದ್ದರು. ಅವರನ್ನು ಗುರ್ತಿಸಿದ್ದ ಬಿಜೆಪಿ ತಮಿಳುನಾಡಿನ ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ಮಾಡಿತ್ತು. ಈ ಹಿಂದೆ ವಿಧಾನಸಭೆ ಎಲೆಕ್ಷನ್ಗೆ ಸ್ಪರ್ಧೆ ಮಾಡಿ ಸೋತು ಹೋಗಿದ್ದರು. ಆದರೆ ಪಕ್ಷ ಇದೀಗ ಅವರ ಮೇಲೆ ನಂಬಿಕೆ ಇಟ್ಟು ಲೋಕಸಭೆ ಚುನಾವಣೆಯ ಟಿಕೆಟ್ ನೀಡಿದ್ದು ಹೆಚ್ಚಿನ ಅಂತರದಿಂದ ಗೆಲುವು ಪಡೆಯುವುದು ಅವರ ಉದ್ದೇಶವಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಕಾರ್ಯಕರ್ತರು, ಮುಖಂಡರ ಜೊತೆ ಆಗಮಿಸಿ ನಾಮಪತ್ರ ಸಲ್ಲಿಸಿದ್ದ ಕೆ. ಅಣ್ಣಾಮಲೈ
ಕೊಯಮತ್ತೂರು ಜಿಲ್ಲಾಧಿಕಾರಿ ಟ್ವೀಟರ್ ಖಾತೆಯಲ್ಲಿ ಈ ಬಗ್ಗೆ ಹೇಳಿದ್ದೇನು?
ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ ಅಣ್ಣಾಮಲೈ ವಿಡಿಯೋ
ಚೆನ್ನೈ: ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ಏ. 19ರಂದು ನಡೆಯಲಿದ್ದು ಹೀಗಾಗಿ ಪಕ್ಷದ ಅಭ್ಯರ್ಥಿಗಳು ಫುಲ್ ಅಲರ್ಟ್ ಆಗಿದ್ದಾರೆ. ಇದರ ಮಧ್ಯೆ ಕೊಯಮತ್ತೂರು ಲೋಕಸಭೆ ಕ್ಷೇತ್ರದ ಅಭ್ಯರ್ಥಿಯಾಗಿ ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ ಕೆ ಅಣ್ಣಾಮಲೈ ನಾಮಪತ್ರ ಸಲ್ಲಿಸಿದ್ದಾರೆ. ಸದ್ಯ ಬಿರು ಬಿಸಿಲಿನಲ್ಲಿ ಕೆ ಅಣ್ಣಾಮಲೈ ಅವರು ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. ಇದರ ಮಧ್ಯೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದು ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.
ಇದನ್ನೂ ಓದಿ: ಕೊಯಮತ್ತೂರು ಅಗ್ನಿ ಪರೀಕ್ಷೆಗಿಳಿದ ಅಣ್ಣಾಮಲೈ; ಲೋಕಸಮರದ ಯುದ್ಧಕ್ಕೆ ಕೇಸರಿ ರಣಕಹಳೆ
ಹೌದು, ಆ ವಿಡಿಯೋದಲ್ಲಿ ಚುನಾವಣಾ ಪ್ರಚಾರದ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಅವರಿಗೆ ಮಹಿಳೆಯೊಬ್ಬರು ಆರತಿ ಮಾಡುತ್ತಿದ್ದರು. ಇದೇ ವೇಳೆ ಮಹಿಳೆ ಹಿಡಿದ ಆರತಿ ತಟ್ಟೆಯ ಕೆಳಗಡೆ ಹಣವನ್ನು ಬಚ್ಚಿಟ್ಟು ನೀಡಿದ್ದಾರೆ. ಇದೇ ವಿಡಿಯೋ ಈಗ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಈ ಸಂಬಂಧ ಕೊಯಮತ್ತೂರಿನ ಜಿಲ್ಲಾ ಚುನಾವಣಾಧಿಕಾರಿ ಪೊಲೀಸರಿಗೆ ತನಿಖೆ ನಡೆಸುವಂತೆ ಪ್ರತಿ ಪಕ್ಷದವರು ಆದೇಶಿಸುತ್ತಿದ್ದಾರೆ.
We have taken cognisance of the video shared. This is forwarded to the police team for verification. The enquiry is in progress. https://t.co/Pqf0AT3jUD
— District Collector, Coimbatore (@CollectorCbe) March 29, 2024
ಇನ್ನು, ಈ ಬಗ್ಗೆ ಕೊಯಮತ್ತೂರು ಜಿಲ್ಲಾಧಿಕಾರಿ X ಖಾತೆಯಲ್ಲಿ ವೈರಲ್ ಆಗುತ್ತಿರೋ ವಿಡಿಯೋವನ್ನು ನಾವು ಗಮನಿಸಿದ್ದೇ. ಈ ವಿಡಿಯೋದ ಹಿಂದಿನ ಅಸಲಿಯತ್ತು ಕಂಡುಹಿಡಿಯಲು ಪೊಲೀಸ್ ತಂಡಕ್ಕೆ ವೀಡಿಯೊವನ್ನು ಕಳುಹಿಸಲಾಗಿದೆ. ಈ ಬಗ್ಗೆ ವಿಚಾರಣೆ ನಡೆಯುತ್ತಿದೆ ಎಂದು ಬರೆದುಕೊಂಡಿದ್ದಾರೆ.
ಕರ್ನಾಟಕ ಕೇಡರ್ನ ಮಾಜಿ ಐಪಿಎಸ್ ಅಧಿಕಾರಿಯಾಗಿದ್ದ ಅಣ್ಣಾಮಲೈ ಅವರು ಸರ್ಕಾರಿ ಹುದ್ದೆಗೆ ರಾಜೀನಾಮೆ ನೀಡಿ 2020ರಲ್ಲಿ ಬಿಜೆಪಿ ಸೇರಿದ್ದರು. ಅವರನ್ನು ಗುರ್ತಿಸಿದ್ದ ಬಿಜೆಪಿ ತಮಿಳುನಾಡಿನ ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ಮಾಡಿತ್ತು. ಈ ಹಿಂದೆ ವಿಧಾನಸಭೆ ಎಲೆಕ್ಷನ್ಗೆ ಸ್ಪರ್ಧೆ ಮಾಡಿ ಸೋತು ಹೋಗಿದ್ದರು. ಆದರೆ ಪಕ್ಷ ಇದೀಗ ಅವರ ಮೇಲೆ ನಂಬಿಕೆ ಇಟ್ಟು ಲೋಕಸಭೆ ಚುನಾವಣೆಯ ಟಿಕೆಟ್ ನೀಡಿದ್ದು ಹೆಚ್ಚಿನ ಅಂತರದಿಂದ ಗೆಲುವು ಪಡೆಯುವುದು ಅವರ ಉದ್ದೇಶವಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ