newsfirstkannada.com

BREAKING: ಇಬ್ಬರು ಮಾಜಿ ಪ್ರಧಾನಿ, ಹಸಿರು ಕ್ರಾಂತಿಯ ಪಿತಾಮಹ ಸ್ವಾಮಿನಾಥನ್‌ಗೆ ಭಾರತ ರತ್ನ ಘೋಷಣೆ

Share :

Published February 9, 2024 at 12:59pm

Update February 9, 2024 at 1:18pm

    ಮಾಜಿ ಪ್ರಧಾನಿಗಳಾದ ಚೌಧರಿ ಚರಣ್ ಸಿಂಗ್‌, P.V ನರಸಿಂಹರಾವ್

    ಹಸಿರು ಕ್ರಾಂತಿಯ ಹರಿಕಾರ M.S ಸ್ವಾಮಿನಾಥನ್‌ಗೆ ಭಾರತ ರತ್ನ

    ಭಾರತದ ಮೂವರು ಧೀಮಂತ ನಾಯಕರಿಗೆ ಪ್ರತಿಷ್ಠಿತ ನಾಗರಿಕ ಗೌರವ

ನವದೆಹಲಿ: ಕೇಂದ್ರ ಸರ್ಕಾರ ಮಾಜಿ ಪ್ರಧಾನಿಗಳಾದ ಚೌಧರಿ ಚರಣ್ ಸಿಂಗ್‌, P.V ನರಸಿಂಹರಾವ್ ಹಾಗೂ ಹಸಿರು ಕ್ರಾಂತಿಯ ಹರಿಕಾರ M.S ಸ್ವಾಮಿನಾಥನ್‌ ಅವರಿಗೆ ಭಾರತ ರತ್ನ ಪ್ರಶಸ್ತಿ ಘೋಷಣೆ ಮಾಡಿದೆ.

ಚೌಧರಿ ಚರಣ್ ಸಿಂಗ್ ಅವರು 1979ರ ಜುಲೈ 28 ರಂದು ಪ್ರಧಾನಿ ಹುದ್ದೆಗೇರಿದ್ದರು. ಇಂದಿರಾಗಾಂಧಿ, ಸಂಜಯ್ ಗಾಂಧಿ ಅವರು ಚೌಧರಿ ಚರಣ್ ಸಿಂಗ್ ಸರ್ಕಾರಕ್ಕೆ ಬೆಂಬಲ ನೀಡುವ ಭರವಸೆ ನೀಡಿದ್ದರು. ಆದರೆ ಇಂದಿರಾಗಾಂಧಿ ಅವರು ತಮ್ಮ ವಿರುದ್ಧದ ಕೇಸ್‌ಗಳನ್ನು ಕೈ ಬಿಡಬೇಕೆಂದು ಷರತ್ತು ವಿಧಿಸಿದ್ದರು. ಚೌಧರಿ ಚರಣ್ ಸಿಂಗ್ ಅವರು ಇಂದಿರಾಗಾಂಧಿ ವಿರುದ್ಧದ ಕೇಸ್ ಕೈ ಬಿಡಲು ಒಪ್ಪಲಿಲ್ಲ. ಹೀಗಾಗಿ ಕಾಂಗ್ರೆಸ್ ಪಕ್ಷ, ಚೌಧರಿ ಚರಣ್ ಸಿಂಗ್‌ಗೆ ಬೆಂಬಲ ಹಿಂಪಡೆದಿತ್ತು. ಹೀಗಾಗಿ ಕೇವಲ 23 ದಿನಕ್ಕೆ ಚೌಧರಿ ಚರಣ್ ಸಿಂಗ್ ಅವರು ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿದ್ದರು. ಎರಡು ಬಾರಿ ಉತ್ತರಪ್ರದೇಶ ಸಿಎಂ, ಕೇಂದ್ರದ ಗೃಹ ಸಚಿವರಾಗಿದ್ದ ಚೌಧರಿ ಚರಣ್ ಸಿಂಗ್ ಅವರು ಮೊರಾರ್ಜಿ ದೇಸಾಯಿ ಸರ್ಕಾರದಲ್ಲಿ ಉಪಪ್ರಧಾನಿಯೂ ಆಗಿದ್ದರು.

ಮಾಜಿ ಪ್ರಧಾನಿ ಪಿ.ವಿ ನರಸಿಂಹ ರಾವ್ ಅವರು 1991 ರಿಂದ 1996ರ ಅವಧಿಯಲ್ಲಿ ಭಾರತದ 9ನೇ ಪ್ರಧಾನಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ. ಇದಲ್ಲದೇ ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ, ಕೇಂದ್ರ ಸಚಿವರಾಗಿ, ಹಲವು ವರ್ಷಗಳ ಕಾಲ ಸಂಸತ್ ಮತ್ತು ವಿಧಾನಸಭೆ ಸದಸ್ಯರಾಗಿದ್ದರು. ಅವರ ದೂರದೃಷ್ಟಿಯ ನಾಯಕತ್ವವು ಭಾರತವನ್ನು ಆರ್ಥಿಕವಾಗಿ ಮುನ್ನಡೆಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ನರಸಿಂಹ ರಾವ್ ಗಾರು ಅವರು ಪ್ರಧಾನ ಮಂತ್ರಿಯಾಗಿ ಭಾರತವನ್ನು ಜಾಗತಿಕ ಮಾರುಕಟ್ಟೆಗಳಿಗೆ ತೆರೆದ ಮಹತ್ವದ ಕ್ರಮಗಳನ್ನು ಕೈಗೊಂಡರು.

ಪ್ರಧಾನಿ ನರೇಂದ್ರ ಮೋದಿ ಅವರು ಸೋಷಿಯಲ್ ಮೀಡಿಯಾ Xನಲ್ಲಿ ಟ್ವೀಟ್ ಮಾಡೋ ಮೂಲಕ ಭಾರತ ರತ್ನ ಪ್ರಶಸ್ತಿಗೆ ಆಯ್ಕೆಯಾದವರ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಹಸಿರು ಕ್ರಾಂತಿಯ ಹರಿಕಾರ.. ಎಂ.ಎಸ್ ಸ್ವಾಮಿನಾಥನ್ ಅಪರೂಪದ ಫೋಟೋಗಳು ಇಲ್ಲಿದೆ ನೋಡಿ

 

ಎಂ.ಎಸ್ ಸ್ವಾಮಿನಾಥನ್ ಅವರು ಭಾರತದ ಹಸಿರು ಕ್ರಾಂತಿಯ ಪಿತಾಮಹ ಎಂದೇ ಹೆಸರುವಾಸಿಯಾಗಿದ್ದರು. ಅಧಿಕ ಇಳುವರಿಯ ಭತ್ತದ ತಳಿ ಅಭಿವೃದ್ಧಿ ಮಾಡಿದ್ದ ಸ್ವಾಮಿನಾಥನ್ ಅವರು ಭಾರತದ ಆಹಾರ ಭದ್ರತೆಯನ್ನು ಹೆಚ್ಚಿಸಲು ಅವಿರತವಾಗಿ ಹೋರಾಟ ನಡೆಸಿದ್ದರು. ಸ್ವಾಮಿನಾಥನ್ ಅವರ ಸಾಧನೆಯಿಂದ ದೇಶಾದ್ಯಂತ ಭತ್ತದ ಇಳುವರಿಯಲ್ಲಿ ಹೊಸ ಕ್ರಾಂತಿಯಾಗಿತ್ತು. 1925ರ ಆಗಸ್ಟ್‌ 7ರಂದು ತಮಿಳುನಾಡಿನ ತಂಜಾವೂರಿನ ಕುಂಭಕೋಣಂನಲ್ಲಿ ಜನಿಸಿದ್ದರು. ಕೃಷಿ ವಿಜ್ಞಾನಿ, ಹವಾಮಾನ ತಜ್ಞರೂ ಆಗಿದ್ದ ಸ್ವಾಮಿನಾಥನ್ ಅವರಿಗೆ ಪದ್ಮಶ್ರೀ, ಪದ್ಮಭೂಷಣ ಹಾಗೂ ಪದ್ಮವಿಭಾಷಣ, ಎಚ್.ಕೆ ಫಿರೋದಿಯಾ, ಲಾಲ್ ಬಹದ್ದೂರ್ ಶಾಸ್ತ್ರಿ ರಾಷ್ಟ್ರೀಯ ಪ್ರಶಸ್ತಿ ಹಾಗೂ ಇಂದಿರಾ ಗಾಂಧಿ ಪ್ರಶಸ್ತಿಗಳೂ ಸ್ವಾಮಿನಾಥನ್ ಅವರಿಗೆ ಲಭಿಸಿವೆ.

1960 ಹಾಗೂ 70ರ ದಶಕದಲ್ಲಿ ಭಾರತ ದೇಶ ಆಹಾರ ಅಭದ್ರತೆಯ ಸಮಸ್ಯೆಗೆ ಸಿಲುಕಿತ್ತು. ಆ ಸಂದರ್ಭದಲ್ಲಿ ಸ್ವಾಮಿನಾಥನ್ ಅವರ ಸಾಧನೆ ಗಮನಾರ್ಹವಾಗಿದೆ. ಕೇಂದ್ರ ಸರ್ಕಾರ ರಚಿಸಿದ್ದ ಹಸಿರು ಕ್ರಾಂತಿಯ ಯೋಜನೆಯಲ್ಲಿ ಸ್ವಾಮಿನಾಥನ್ ಅವರು ಕೆಲಸ ಮಾಡಿದ್ದರು. ರಾಸಾಯನಿಕ ಹಾಗೂ ಜೈವಿಕ ತಂತ್ರಜ್ಞಾನದ ಮೂಲಕ ಅಕ್ಕಿ ಮತ್ತು ಗೋಧಿಯ ಉತ್ಪಾದನೆ ಹೆಚ್ಚಿಸುವಲ್ಲಿ ಸ್ವಾಮಿನಾಥನ್ ಪ್ರಮುಖ ಪಾತ್ರವಹಿಸಿದ್ದರು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

BREAKING: ಇಬ್ಬರು ಮಾಜಿ ಪ್ರಧಾನಿ, ಹಸಿರು ಕ್ರಾಂತಿಯ ಪಿತಾಮಹ ಸ್ವಾಮಿನಾಥನ್‌ಗೆ ಭಾರತ ರತ್ನ ಘೋಷಣೆ

https://newsfirstlive.com/wp-content/uploads/2024/02/BHARATA_RATNA_PM.jpg

    ಮಾಜಿ ಪ್ರಧಾನಿಗಳಾದ ಚೌಧರಿ ಚರಣ್ ಸಿಂಗ್‌, P.V ನರಸಿಂಹರಾವ್

    ಹಸಿರು ಕ್ರಾಂತಿಯ ಹರಿಕಾರ M.S ಸ್ವಾಮಿನಾಥನ್‌ಗೆ ಭಾರತ ರತ್ನ

    ಭಾರತದ ಮೂವರು ಧೀಮಂತ ನಾಯಕರಿಗೆ ಪ್ರತಿಷ್ಠಿತ ನಾಗರಿಕ ಗೌರವ

ನವದೆಹಲಿ: ಕೇಂದ್ರ ಸರ್ಕಾರ ಮಾಜಿ ಪ್ರಧಾನಿಗಳಾದ ಚೌಧರಿ ಚರಣ್ ಸಿಂಗ್‌, P.V ನರಸಿಂಹರಾವ್ ಹಾಗೂ ಹಸಿರು ಕ್ರಾಂತಿಯ ಹರಿಕಾರ M.S ಸ್ವಾಮಿನಾಥನ್‌ ಅವರಿಗೆ ಭಾರತ ರತ್ನ ಪ್ರಶಸ್ತಿ ಘೋಷಣೆ ಮಾಡಿದೆ.

ಚೌಧರಿ ಚರಣ್ ಸಿಂಗ್ ಅವರು 1979ರ ಜುಲೈ 28 ರಂದು ಪ್ರಧಾನಿ ಹುದ್ದೆಗೇರಿದ್ದರು. ಇಂದಿರಾಗಾಂಧಿ, ಸಂಜಯ್ ಗಾಂಧಿ ಅವರು ಚೌಧರಿ ಚರಣ್ ಸಿಂಗ್ ಸರ್ಕಾರಕ್ಕೆ ಬೆಂಬಲ ನೀಡುವ ಭರವಸೆ ನೀಡಿದ್ದರು. ಆದರೆ ಇಂದಿರಾಗಾಂಧಿ ಅವರು ತಮ್ಮ ವಿರುದ್ಧದ ಕೇಸ್‌ಗಳನ್ನು ಕೈ ಬಿಡಬೇಕೆಂದು ಷರತ್ತು ವಿಧಿಸಿದ್ದರು. ಚೌಧರಿ ಚರಣ್ ಸಿಂಗ್ ಅವರು ಇಂದಿರಾಗಾಂಧಿ ವಿರುದ್ಧದ ಕೇಸ್ ಕೈ ಬಿಡಲು ಒಪ್ಪಲಿಲ್ಲ. ಹೀಗಾಗಿ ಕಾಂಗ್ರೆಸ್ ಪಕ್ಷ, ಚೌಧರಿ ಚರಣ್ ಸಿಂಗ್‌ಗೆ ಬೆಂಬಲ ಹಿಂಪಡೆದಿತ್ತು. ಹೀಗಾಗಿ ಕೇವಲ 23 ದಿನಕ್ಕೆ ಚೌಧರಿ ಚರಣ್ ಸಿಂಗ್ ಅವರು ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿದ್ದರು. ಎರಡು ಬಾರಿ ಉತ್ತರಪ್ರದೇಶ ಸಿಎಂ, ಕೇಂದ್ರದ ಗೃಹ ಸಚಿವರಾಗಿದ್ದ ಚೌಧರಿ ಚರಣ್ ಸಿಂಗ್ ಅವರು ಮೊರಾರ್ಜಿ ದೇಸಾಯಿ ಸರ್ಕಾರದಲ್ಲಿ ಉಪಪ್ರಧಾನಿಯೂ ಆಗಿದ್ದರು.

ಮಾಜಿ ಪ್ರಧಾನಿ ಪಿ.ವಿ ನರಸಿಂಹ ರಾವ್ ಅವರು 1991 ರಿಂದ 1996ರ ಅವಧಿಯಲ್ಲಿ ಭಾರತದ 9ನೇ ಪ್ರಧಾನಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ. ಇದಲ್ಲದೇ ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ, ಕೇಂದ್ರ ಸಚಿವರಾಗಿ, ಹಲವು ವರ್ಷಗಳ ಕಾಲ ಸಂಸತ್ ಮತ್ತು ವಿಧಾನಸಭೆ ಸದಸ್ಯರಾಗಿದ್ದರು. ಅವರ ದೂರದೃಷ್ಟಿಯ ನಾಯಕತ್ವವು ಭಾರತವನ್ನು ಆರ್ಥಿಕವಾಗಿ ಮುನ್ನಡೆಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ನರಸಿಂಹ ರಾವ್ ಗಾರು ಅವರು ಪ್ರಧಾನ ಮಂತ್ರಿಯಾಗಿ ಭಾರತವನ್ನು ಜಾಗತಿಕ ಮಾರುಕಟ್ಟೆಗಳಿಗೆ ತೆರೆದ ಮಹತ್ವದ ಕ್ರಮಗಳನ್ನು ಕೈಗೊಂಡರು.

ಪ್ರಧಾನಿ ನರೇಂದ್ರ ಮೋದಿ ಅವರು ಸೋಷಿಯಲ್ ಮೀಡಿಯಾ Xನಲ್ಲಿ ಟ್ವೀಟ್ ಮಾಡೋ ಮೂಲಕ ಭಾರತ ರತ್ನ ಪ್ರಶಸ್ತಿಗೆ ಆಯ್ಕೆಯಾದವರ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಹಸಿರು ಕ್ರಾಂತಿಯ ಹರಿಕಾರ.. ಎಂ.ಎಸ್ ಸ್ವಾಮಿನಾಥನ್ ಅಪರೂಪದ ಫೋಟೋಗಳು ಇಲ್ಲಿದೆ ನೋಡಿ

 

ಎಂ.ಎಸ್ ಸ್ವಾಮಿನಾಥನ್ ಅವರು ಭಾರತದ ಹಸಿರು ಕ್ರಾಂತಿಯ ಪಿತಾಮಹ ಎಂದೇ ಹೆಸರುವಾಸಿಯಾಗಿದ್ದರು. ಅಧಿಕ ಇಳುವರಿಯ ಭತ್ತದ ತಳಿ ಅಭಿವೃದ್ಧಿ ಮಾಡಿದ್ದ ಸ್ವಾಮಿನಾಥನ್ ಅವರು ಭಾರತದ ಆಹಾರ ಭದ್ರತೆಯನ್ನು ಹೆಚ್ಚಿಸಲು ಅವಿರತವಾಗಿ ಹೋರಾಟ ನಡೆಸಿದ್ದರು. ಸ್ವಾಮಿನಾಥನ್ ಅವರ ಸಾಧನೆಯಿಂದ ದೇಶಾದ್ಯಂತ ಭತ್ತದ ಇಳುವರಿಯಲ್ಲಿ ಹೊಸ ಕ್ರಾಂತಿಯಾಗಿತ್ತು. 1925ರ ಆಗಸ್ಟ್‌ 7ರಂದು ತಮಿಳುನಾಡಿನ ತಂಜಾವೂರಿನ ಕುಂಭಕೋಣಂನಲ್ಲಿ ಜನಿಸಿದ್ದರು. ಕೃಷಿ ವಿಜ್ಞಾನಿ, ಹವಾಮಾನ ತಜ್ಞರೂ ಆಗಿದ್ದ ಸ್ವಾಮಿನಾಥನ್ ಅವರಿಗೆ ಪದ್ಮಶ್ರೀ, ಪದ್ಮಭೂಷಣ ಹಾಗೂ ಪದ್ಮವಿಭಾಷಣ, ಎಚ್.ಕೆ ಫಿರೋದಿಯಾ, ಲಾಲ್ ಬಹದ್ದೂರ್ ಶಾಸ್ತ್ರಿ ರಾಷ್ಟ್ರೀಯ ಪ್ರಶಸ್ತಿ ಹಾಗೂ ಇಂದಿರಾ ಗಾಂಧಿ ಪ್ರಶಸ್ತಿಗಳೂ ಸ್ವಾಮಿನಾಥನ್ ಅವರಿಗೆ ಲಭಿಸಿವೆ.

1960 ಹಾಗೂ 70ರ ದಶಕದಲ್ಲಿ ಭಾರತ ದೇಶ ಆಹಾರ ಅಭದ್ರತೆಯ ಸಮಸ್ಯೆಗೆ ಸಿಲುಕಿತ್ತು. ಆ ಸಂದರ್ಭದಲ್ಲಿ ಸ್ವಾಮಿನಾಥನ್ ಅವರ ಸಾಧನೆ ಗಮನಾರ್ಹವಾಗಿದೆ. ಕೇಂದ್ರ ಸರ್ಕಾರ ರಚಿಸಿದ್ದ ಹಸಿರು ಕ್ರಾಂತಿಯ ಯೋಜನೆಯಲ್ಲಿ ಸ್ವಾಮಿನಾಥನ್ ಅವರು ಕೆಲಸ ಮಾಡಿದ್ದರು. ರಾಸಾಯನಿಕ ಹಾಗೂ ಜೈವಿಕ ತಂತ್ರಜ್ಞಾನದ ಮೂಲಕ ಅಕ್ಕಿ ಮತ್ತು ಗೋಧಿಯ ಉತ್ಪಾದನೆ ಹೆಚ್ಚಿಸುವಲ್ಲಿ ಸ್ವಾಮಿನಾಥನ್ ಪ್ರಮುಖ ಪಾತ್ರವಹಿಸಿದ್ದರು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More