ಚಂದ್ರಯಾನ-3 ಮಿಷನ್ ಬಗ್ಗೆ ವ್ಯಂಗ್ಯಭರಿತ ಟ್ವೀಟ್
ಬಹುಭಾಷಾ ನಟ ಪ್ರಕಾಶ್ ರಾಜ್ ಬಂಧನಕ್ಕೆ ಆಗ್ರಹ
ಸೋಷಿಯಲ್ ಮೀಡಿಯಾದಲ್ಲಿ #ArrestPrakashRaj ಟ್ರೆಂಡ್
ಬೆಂಗಳೂರು: ನಿಜವಾಗಲೂ ಭಾರತಕ್ಕೆ ಇಂದು ಐತಿಹಾಸಿಕ ದಿನ. ಈ ಹೆಮ್ಮೆಯ ದಿನಕ್ಕಾಗಿ ಇಡೀ ದೇಶವೇ ಕಾಯುತ್ತಿದೆ. ಇಡೀ ದೇಶಾದ್ಯಂತ ಜನ ಚಂದ್ರಯಾನ-3 ಯಶಸ್ವಿಯಾಗಲಿ ಎಂದು ಪ್ರಾರ್ಥಿಸುತ್ತಿದ್ದಾರೆ. ಆದಷ್ಟು ಬೇಗ ಇಸ್ರೋ ತಂಡದ ಪರಿಶ್ರಮಕ್ಕೆ ಫಲ ಸಿಗಲಿ ಎಂದು ಶುಭ ಹಾರೈಸುತ್ತಿದ್ದಾರೆ. ಇನ್ನೊಂದೆಡೆ ಚಂದ್ರಯಾನ-3 ಮಿಷನ್ ಬಗ್ಗೆ ವ್ಯಂಗ್ಯಭರಿತ ಟ್ವೀಟ್ ಮಾಡಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್ ಅವರನ್ನು ಬಂಧಿಸಿ ಎಂದು ಸೋಷಿಯಲ್ ಮೀಡಿಯಾದಲ್ಲಿ ಕ್ಯಾಂಪೇನ್ ಮಾಡಲಾಗುತ್ತಿದೆ.
ಪ್ರಕಾಶ್ ರಾಜ್ ವಿರುದ್ಧ ಕೇಸ್
ಚಂದ್ರಯಾನ-3 ಬಗ್ಗೆ ಕುಹಕವಾಡಿದ್ದ ನಟ ಪ್ರಕಾಶ್ ರಾಜ್ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಮಧ್ಯೆ ಪ್ರಕಾಶ್ ರಾಜ್ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿ ಶ್ರೀರಾಮ ಸೇನೆ ಮುಖಂಡರು ಬಾಗಲಕೋಟೆ ಜಿಲ್ಲೆಯ ಬನಹಟ್ಟಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಶ್ರೀರಾಮ ಸೇನೆ ಮುಖಂಡ ಶಿವಾನಂದ ಗಾಯಕವಾಡ್ ದೂರು ನೀಡಿದ್ದು, ಪ್ರಕಾಶ್ ರಾಜ್ ಬಂಧನಕ್ಕೆ ಆಗ್ರಹಿಸಿದ್ದಾರೆ.
ಇನ್ನು, ಈ ಬೆನ್ನಲ್ಲೇ ಸೋಷಿಯಲ್ ಮೀಡಿಯಾದಲ್ಲಿ ಪ್ರಕಾಶ್ ರಾಜ್ ಬಂಧನಕ್ಕೆ ಒತ್ತಾಯಿಸಿ ಹಲವರು ಪೋಸ್ಟ್ ಹಾಕಿದ್ದಾರೆ. ಹಿಂದೂ ಕಾರ್ಯಕರ್ತ ಅರುಣ್ ಯಾದವ್ ಎಂಬಾತ ತನ್ನ ಟ್ವಿಟರ್ನಲ್ಲಿ (X) ಬಂಧಿಸಿ ಎಂದು ಟ್ವೀಟ್ ಮಾಡಿದ್ದಾರೆ. ಪ್ರಕಾಶ್ ರಾಜ್ ದೇಶದ ಹೆಮ್ಮೆಯ ಚಂದ್ರಯಾನ 3 ಬಗ್ಗೆ ವ್ಯಂಗ್ಯ ಮಾಡಿದ್ದಾರೆ. ವಿಜ್ಞಾನಿಗಳಿಗೆ ಅಪಮಾನ ಮಾಡುವ ಮೂಲಕ ವಿಕೃತಿ ಮೆರೆದಿದ್ದಾರೆ. ಹೀಗಾಗಿ ಕೂಡಲೇ ಅರೆಸ್ಟ್ ಮಾಡಿ ಎಂದು ಆಗ್ರಹಿಸಲಾಗಿದೆ.
Hindu Organization Filed A Complaint Against Film Actor Prakash Raj Demanding #ArrestPrakashRaj .
Prakash Raj Mocked India's Ambitious Third Lunar Mission #Chandrayaan3 pic.twitter.com/HYq9iI3ui0
— Arun Yadav🇮🇳 (@beingarun28) August 23, 2023
ಚಂದ್ರಯಾನ-3 ಮಿಷನ್ ಬಗ್ಗೆ ವ್ಯಂಗ್ಯಭರಿತ ಟ್ವೀಟ್
ಬಹುಭಾಷಾ ನಟ ಪ್ರಕಾಶ್ ರಾಜ್ ಬಂಧನಕ್ಕೆ ಆಗ್ರಹ
ಸೋಷಿಯಲ್ ಮೀಡಿಯಾದಲ್ಲಿ #ArrestPrakashRaj ಟ್ರೆಂಡ್
ಬೆಂಗಳೂರು: ನಿಜವಾಗಲೂ ಭಾರತಕ್ಕೆ ಇಂದು ಐತಿಹಾಸಿಕ ದಿನ. ಈ ಹೆಮ್ಮೆಯ ದಿನಕ್ಕಾಗಿ ಇಡೀ ದೇಶವೇ ಕಾಯುತ್ತಿದೆ. ಇಡೀ ದೇಶಾದ್ಯಂತ ಜನ ಚಂದ್ರಯಾನ-3 ಯಶಸ್ವಿಯಾಗಲಿ ಎಂದು ಪ್ರಾರ್ಥಿಸುತ್ತಿದ್ದಾರೆ. ಆದಷ್ಟು ಬೇಗ ಇಸ್ರೋ ತಂಡದ ಪರಿಶ್ರಮಕ್ಕೆ ಫಲ ಸಿಗಲಿ ಎಂದು ಶುಭ ಹಾರೈಸುತ್ತಿದ್ದಾರೆ. ಇನ್ನೊಂದೆಡೆ ಚಂದ್ರಯಾನ-3 ಮಿಷನ್ ಬಗ್ಗೆ ವ್ಯಂಗ್ಯಭರಿತ ಟ್ವೀಟ್ ಮಾಡಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್ ಅವರನ್ನು ಬಂಧಿಸಿ ಎಂದು ಸೋಷಿಯಲ್ ಮೀಡಿಯಾದಲ್ಲಿ ಕ್ಯಾಂಪೇನ್ ಮಾಡಲಾಗುತ್ತಿದೆ.
ಪ್ರಕಾಶ್ ರಾಜ್ ವಿರುದ್ಧ ಕೇಸ್
ಚಂದ್ರಯಾನ-3 ಬಗ್ಗೆ ಕುಹಕವಾಡಿದ್ದ ನಟ ಪ್ರಕಾಶ್ ರಾಜ್ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಮಧ್ಯೆ ಪ್ರಕಾಶ್ ರಾಜ್ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿ ಶ್ರೀರಾಮ ಸೇನೆ ಮುಖಂಡರು ಬಾಗಲಕೋಟೆ ಜಿಲ್ಲೆಯ ಬನಹಟ್ಟಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಶ್ರೀರಾಮ ಸೇನೆ ಮುಖಂಡ ಶಿವಾನಂದ ಗಾಯಕವಾಡ್ ದೂರು ನೀಡಿದ್ದು, ಪ್ರಕಾಶ್ ರಾಜ್ ಬಂಧನಕ್ಕೆ ಆಗ್ರಹಿಸಿದ್ದಾರೆ.
ಇನ್ನು, ಈ ಬೆನ್ನಲ್ಲೇ ಸೋಷಿಯಲ್ ಮೀಡಿಯಾದಲ್ಲಿ ಪ್ರಕಾಶ್ ರಾಜ್ ಬಂಧನಕ್ಕೆ ಒತ್ತಾಯಿಸಿ ಹಲವರು ಪೋಸ್ಟ್ ಹಾಕಿದ್ದಾರೆ. ಹಿಂದೂ ಕಾರ್ಯಕರ್ತ ಅರುಣ್ ಯಾದವ್ ಎಂಬಾತ ತನ್ನ ಟ್ವಿಟರ್ನಲ್ಲಿ (X) ಬಂಧಿಸಿ ಎಂದು ಟ್ವೀಟ್ ಮಾಡಿದ್ದಾರೆ. ಪ್ರಕಾಶ್ ರಾಜ್ ದೇಶದ ಹೆಮ್ಮೆಯ ಚಂದ್ರಯಾನ 3 ಬಗ್ಗೆ ವ್ಯಂಗ್ಯ ಮಾಡಿದ್ದಾರೆ. ವಿಜ್ಞಾನಿಗಳಿಗೆ ಅಪಮಾನ ಮಾಡುವ ಮೂಲಕ ವಿಕೃತಿ ಮೆರೆದಿದ್ದಾರೆ. ಹೀಗಾಗಿ ಕೂಡಲೇ ಅರೆಸ್ಟ್ ಮಾಡಿ ಎಂದು ಆಗ್ರಹಿಸಲಾಗಿದೆ.
Hindu Organization Filed A Complaint Against Film Actor Prakash Raj Demanding #ArrestPrakashRaj .
Prakash Raj Mocked India's Ambitious Third Lunar Mission #Chandrayaan3 pic.twitter.com/HYq9iI3ui0
— Arun Yadav🇮🇳 (@beingarun28) August 23, 2023