ಕೇಜ್ರಿವಾಲ್ ಬಗ್ಗೆ ಕೋರ್ಟ್ಗೆ ಅಧಿಕಾರಿಗಳು ಹೇಳಿರುವುದೇನು?
ಮದ್ಯ ನೀತಿ ಹಗರಣ ಪ್ರಕರಣದಲ್ಲಿ ಅರೆಸ್ಟ್ ಆಗಿರುವ ಸಿಎಂ
ಅಧಿಕಾರಿಗಳು ಕೇಳಿದ ಪ್ರಶ್ನೆಗೆ ಸಿಎಂ ಕೊಡೋ ಆನ್ಸರ್ ಒಂದೇ
ನವದೆಹಲಿ: ಮದ್ಯ ನೀತಿ ಹಗರಣ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ದೆಹಲಿಯ ಇಡಿ ವಿಶೇಷ ಕೋರ್ಟ್ ಏಪ್ರಿಲ್ 15 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಸದ್ಯ ಅವರನ್ನು ತಿಹಾರ್ ಜೈಲಿಗೆ ಕಳುಹಿಸಲಾಗಿದೆ. ಸಿಎಂ ಕೇಜ್ರಿವಾಲ್ ವಿಚಾರಣೆಯಲ್ಲಿ ಕೇಳಿದ ಪ್ರಶ್ನೆಗಳಿಗೆ ಏನನ್ನು ಉತ್ತರಿಸುತ್ತಿಲ್ಲ ಎಂದು ಇಡಿ ಅಧಿಕಾರಿಗಳು ಕೋರ್ಟ್ ಮುಂದೆ ಹೇಳಿದ್ದಾರೆ.
ಮದ್ಯ ನೀತಿ ಹಗರಣ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ಜಾರಿ ನಿರ್ದೇಶನಾಲಯ ಸಿಎಂ ಕೇಜ್ರಿವಾಲ್ರನ್ನು ಅರೆಸ್ಟ್ ಮಾಡಿತ್ತು. ಈ ಹಿನ್ನೆಲೆಯಲ್ಲಿ ಏಪ್ರಿಲ್ 1ಕ್ಕೆ ಅವರ ಕಸ್ಟಡಿಯ ಅವಧಿ ಮುಗಿದ ಕಾರಣ ಮತ್ತೆ ಕೇಜ್ರಿವಾಲ್ರನ್ನು ಕೋರ್ಟ್ ಮುಂದೆ ಹಾಜರುಪಡಿಸಲಾಗಿತ್ತು. ಕೋರ್ಟ್ ವಿಚಾರಣೆ ವೇಳೆ ಇನ್ನು 15 ದಿನ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಬೇಕು ಎಂದು ಇಡಿ ಮನವಿ ಮಾಡಿತ್ತು. ಇಡಿಯ ಮನವಿಯಂತೆ ಮತ್ತೆ ಏಪ್ರಿಲ್ 15ರವರೆಗೆ ಸಿಎಂ ಕೇಜ್ರಿವಾಲ್ರನ್ನ ಬಂಧನಕ್ಕೆ ಒಪ್ಪಿಸಲಾಗಿದೆ.
ಇದನ್ನೂ ಓದಿ: ವೆಬ್ಸೈಟ್ ಮೂಲಕ ಫೇಕ್ IPL ಟಿಕೆಟ್ ಮಾರಾಟ.. ಸೈಬರ್ ಪೊಲೀಸರಿಂದ 7 ಆರೋಪಿಗಳು ಅರೆಸ್ಟ್
ಇನ್ನು ಇಡಿ ಅಧಿಕಾರಿಗಳು ವಿಚಾರಣೆ ವೇಳೆ ಪ್ರತಿ ಪ್ರಶ್ನೆಗೂ ‘ನನಗೆ ಏನು ಗೊತ್ತಿಲ್ಲ’ ಎಂದು ಸಿಎಂ ಜೇಜ್ರಿವಾಲ್ ಉತ್ತರ ನೀಡುತ್ತಿದ್ದಾರೆ. ಇದರಿಂದ ಸಿಎಂ ವಿಚಾರಣೆಗೆ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಕೋರ್ಟ್ ಮುಂದೆ ಇಡಿ ಹೇಳಿದೆ.
ಇದೇ ವೇಳೆ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಒಳ್ಳೆಯ ಊಟ, ಔಷಧಗಳು, ಪುಸ್ತಕಗಳು ಮತ್ತು ಧಾರ್ಮಿಕ ಲಾಕೆಟ್ ಧರಿಸಲು ಅನುಮತಿ ಕೋರಿ ಅರ್ಜಿ ಸಲ್ಲಿಸಿದರು. ಕೋರ್ಟ್ನಲ್ಲಿ ವಿಚಾರಣೆ ವೇಳೆ ಕೇಜ್ರಿವಾಲ್ ಅವರ ಪತ್ನಿ ಸುನೀತಾ ಕೇಜ್ರಿವಾಲ್, ದೆಹಲಿ ಸಚಿವರಾದ ಸೌರಭ್ ಭಾರದ್ವಾಜ್, ಅತಿಶಿ ಮತ್ತು ಗೋಪಾಲ್ ರೈ ಇದ್ದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಕೇಜ್ರಿವಾಲ್ ಬಗ್ಗೆ ಕೋರ್ಟ್ಗೆ ಅಧಿಕಾರಿಗಳು ಹೇಳಿರುವುದೇನು?
ಮದ್ಯ ನೀತಿ ಹಗರಣ ಪ್ರಕರಣದಲ್ಲಿ ಅರೆಸ್ಟ್ ಆಗಿರುವ ಸಿಎಂ
ಅಧಿಕಾರಿಗಳು ಕೇಳಿದ ಪ್ರಶ್ನೆಗೆ ಸಿಎಂ ಕೊಡೋ ಆನ್ಸರ್ ಒಂದೇ
ನವದೆಹಲಿ: ಮದ್ಯ ನೀತಿ ಹಗರಣ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ದೆಹಲಿಯ ಇಡಿ ವಿಶೇಷ ಕೋರ್ಟ್ ಏಪ್ರಿಲ್ 15 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಸದ್ಯ ಅವರನ್ನು ತಿಹಾರ್ ಜೈಲಿಗೆ ಕಳುಹಿಸಲಾಗಿದೆ. ಸಿಎಂ ಕೇಜ್ರಿವಾಲ್ ವಿಚಾರಣೆಯಲ್ಲಿ ಕೇಳಿದ ಪ್ರಶ್ನೆಗಳಿಗೆ ಏನನ್ನು ಉತ್ತರಿಸುತ್ತಿಲ್ಲ ಎಂದು ಇಡಿ ಅಧಿಕಾರಿಗಳು ಕೋರ್ಟ್ ಮುಂದೆ ಹೇಳಿದ್ದಾರೆ.
ಮದ್ಯ ನೀತಿ ಹಗರಣ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ಜಾರಿ ನಿರ್ದೇಶನಾಲಯ ಸಿಎಂ ಕೇಜ್ರಿವಾಲ್ರನ್ನು ಅರೆಸ್ಟ್ ಮಾಡಿತ್ತು. ಈ ಹಿನ್ನೆಲೆಯಲ್ಲಿ ಏಪ್ರಿಲ್ 1ಕ್ಕೆ ಅವರ ಕಸ್ಟಡಿಯ ಅವಧಿ ಮುಗಿದ ಕಾರಣ ಮತ್ತೆ ಕೇಜ್ರಿವಾಲ್ರನ್ನು ಕೋರ್ಟ್ ಮುಂದೆ ಹಾಜರುಪಡಿಸಲಾಗಿತ್ತು. ಕೋರ್ಟ್ ವಿಚಾರಣೆ ವೇಳೆ ಇನ್ನು 15 ದಿನ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಬೇಕು ಎಂದು ಇಡಿ ಮನವಿ ಮಾಡಿತ್ತು. ಇಡಿಯ ಮನವಿಯಂತೆ ಮತ್ತೆ ಏಪ್ರಿಲ್ 15ರವರೆಗೆ ಸಿಎಂ ಕೇಜ್ರಿವಾಲ್ರನ್ನ ಬಂಧನಕ್ಕೆ ಒಪ್ಪಿಸಲಾಗಿದೆ.
ಇದನ್ನೂ ಓದಿ: ವೆಬ್ಸೈಟ್ ಮೂಲಕ ಫೇಕ್ IPL ಟಿಕೆಟ್ ಮಾರಾಟ.. ಸೈಬರ್ ಪೊಲೀಸರಿಂದ 7 ಆರೋಪಿಗಳು ಅರೆಸ್ಟ್
ಇನ್ನು ಇಡಿ ಅಧಿಕಾರಿಗಳು ವಿಚಾರಣೆ ವೇಳೆ ಪ್ರತಿ ಪ್ರಶ್ನೆಗೂ ‘ನನಗೆ ಏನು ಗೊತ್ತಿಲ್ಲ’ ಎಂದು ಸಿಎಂ ಜೇಜ್ರಿವಾಲ್ ಉತ್ತರ ನೀಡುತ್ತಿದ್ದಾರೆ. ಇದರಿಂದ ಸಿಎಂ ವಿಚಾರಣೆಗೆ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಕೋರ್ಟ್ ಮುಂದೆ ಇಡಿ ಹೇಳಿದೆ.
ಇದೇ ವೇಳೆ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಒಳ್ಳೆಯ ಊಟ, ಔಷಧಗಳು, ಪುಸ್ತಕಗಳು ಮತ್ತು ಧಾರ್ಮಿಕ ಲಾಕೆಟ್ ಧರಿಸಲು ಅನುಮತಿ ಕೋರಿ ಅರ್ಜಿ ಸಲ್ಲಿಸಿದರು. ಕೋರ್ಟ್ನಲ್ಲಿ ವಿಚಾರಣೆ ವೇಳೆ ಕೇಜ್ರಿವಾಲ್ ಅವರ ಪತ್ನಿ ಸುನೀತಾ ಕೇಜ್ರಿವಾಲ್, ದೆಹಲಿ ಸಚಿವರಾದ ಸೌರಭ್ ಭಾರದ್ವಾಜ್, ಅತಿಶಿ ಮತ್ತು ಗೋಪಾಲ್ ರೈ ಇದ್ದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ