ಮನೆ ಬಳಿ ವಾಕಿಂಗ್ ಮಾಡ್ತಿದ್ದಾಗ ಭೀಕರ ಕೊಲೆ
ಬೈಕ್ನಲ್ಲಿ ಬಂದ ದುಷ್ಕರ್ಮಿಗಳಿಂದ ಫೈರಿಂಗ್
ಸುದ್ದಿ ತಿಳಿದು ಆಘಾತಕ್ಕೆ ಒಳಗಾದ ಕುಟುಂಬಸ್ಥರು
ಹರಿಯಾಣದ ಕರ್ನಾಲ್ನಲ್ಲಿ ಪೊಲೀಸ್ ಅಧಿಕಾರಿ ಮೇಲೆ ಗುಂಡು ಹಾರಿಸಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಯಮುನಾನಗರದ ಕ್ರೈಂಬ್ರಾಂಚ್ ಎಎಸ್ಐ ಸಂಜೀವ್ ಕುಮಾರ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.
ವರದಿಗಳ ಪ್ರಕಾರ ಪೊಲೀಸ್ ಅಧಿಕಾರಿಯ ಮನೆಯ ಸಮೀಪವೇ ಕೊಲೆ ಮಾಡಲಾಗಿದೆ. ವಾಕಿಂಗ್ ಮಾಡುತ್ತಿದ್ದಾಗ ಬೈಕ್ನಲ್ಲಿ ಬಂದ ದುಷ್ಕರ್ಮಿಗಳು ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ಸಂಜೀವ್ ಹರಿಯಾಣ ಪೊಲೀಸ್ ಠಾಣೆಯ ಸಿಬ್ಬಂದಿಯಾಗಿದ್ದು, ಯಮುನಾಗರದ ರಾಜ್ಯ ಅಪರಾಧ ವಿಭಾಗದಲ್ಲಿ ಎಎಸ್ಐ ಆಗಿ ನೇಮಕಗೊಂಡಿದ್ದರು.
ಇದನ್ನೂ ಓದಿ:ಇಳಿಜಾರಿನಲ್ಲಿ ಬ್ರೇಕ್ ಫೇಲ್.. ಗಾಬರಿಯಾದ ಪ್ರಯಾಣಿಕರು ಮಾಡಿದ್ದೇನು ಗೊತ್ತಾ..?
ಹಣೆಯ ಭಾಗಕ್ಕೆ ಮತ್ತು ಸೊಂಟಕ್ಕೆ ಗುಂಡು ಹೊಕ್ಕಿದೆ. ಗಂಭೀರ ಸ್ಥಿತಿಯಲ್ಲಿದ್ದ ಸಂಜೀವ್ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಅವರು ಸಾವನ್ನಪ್ಪಿದ್ದಾರೆ. ಕೃತ್ಯದ ಬಳಿಕ ಪೊಲೀಸರು ಮತ್ತು ಹಿರಿಯ ಅಧಿಕಾರಿಗಳ ತಂಡ ಘಟನಾ ಸ್ಥಳಕ್ಕೆ ತಲುಪಿದೆ. ಅಲ್ಲಿ ಕೆಲವು ಬುಲೆಟ್ ಶೆಲ್ಗಳು ಬಿದ್ದಿದ್ದವು. ಅವುಗಳನ್ನು ವಶಕ್ಕೆ ಪಡೆಯಲಾಗಿದೆ. ಸುದ್ದಿ ತಿಳಿದು ಕುಟುಂಬಸ್ಥರು ಆಘಾತಕ್ಕೆ ಒಳಗಾಗಿದ್ದಾರೆ.
ಇದನ್ನೂ ಓದಿ:ಟೀಂ ಇಂಡಿಯಾದಲ್ಲಿ ದಿಢೀರ್ ಬದಲಾವಣೆ.. ಜಿಂಬಾಬ್ವೆ ಪ್ರವಾಸದಿಂದ ಮೂವರು ಸ್ಟಾರ್ ಆಟಗಾರರಿಗೆ ಕೊಕ್..!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಮನೆ ಬಳಿ ವಾಕಿಂಗ್ ಮಾಡ್ತಿದ್ದಾಗ ಭೀಕರ ಕೊಲೆ
ಬೈಕ್ನಲ್ಲಿ ಬಂದ ದುಷ್ಕರ್ಮಿಗಳಿಂದ ಫೈರಿಂಗ್
ಸುದ್ದಿ ತಿಳಿದು ಆಘಾತಕ್ಕೆ ಒಳಗಾದ ಕುಟುಂಬಸ್ಥರು
ಹರಿಯಾಣದ ಕರ್ನಾಲ್ನಲ್ಲಿ ಪೊಲೀಸ್ ಅಧಿಕಾರಿ ಮೇಲೆ ಗುಂಡು ಹಾರಿಸಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಯಮುನಾನಗರದ ಕ್ರೈಂಬ್ರಾಂಚ್ ಎಎಸ್ಐ ಸಂಜೀವ್ ಕುಮಾರ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.
ವರದಿಗಳ ಪ್ರಕಾರ ಪೊಲೀಸ್ ಅಧಿಕಾರಿಯ ಮನೆಯ ಸಮೀಪವೇ ಕೊಲೆ ಮಾಡಲಾಗಿದೆ. ವಾಕಿಂಗ್ ಮಾಡುತ್ತಿದ್ದಾಗ ಬೈಕ್ನಲ್ಲಿ ಬಂದ ದುಷ್ಕರ್ಮಿಗಳು ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ಸಂಜೀವ್ ಹರಿಯಾಣ ಪೊಲೀಸ್ ಠಾಣೆಯ ಸಿಬ್ಬಂದಿಯಾಗಿದ್ದು, ಯಮುನಾಗರದ ರಾಜ್ಯ ಅಪರಾಧ ವಿಭಾಗದಲ್ಲಿ ಎಎಸ್ಐ ಆಗಿ ನೇಮಕಗೊಂಡಿದ್ದರು.
ಇದನ್ನೂ ಓದಿ:ಇಳಿಜಾರಿನಲ್ಲಿ ಬ್ರೇಕ್ ಫೇಲ್.. ಗಾಬರಿಯಾದ ಪ್ರಯಾಣಿಕರು ಮಾಡಿದ್ದೇನು ಗೊತ್ತಾ..?
ಹಣೆಯ ಭಾಗಕ್ಕೆ ಮತ್ತು ಸೊಂಟಕ್ಕೆ ಗುಂಡು ಹೊಕ್ಕಿದೆ. ಗಂಭೀರ ಸ್ಥಿತಿಯಲ್ಲಿದ್ದ ಸಂಜೀವ್ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಅವರು ಸಾವನ್ನಪ್ಪಿದ್ದಾರೆ. ಕೃತ್ಯದ ಬಳಿಕ ಪೊಲೀಸರು ಮತ್ತು ಹಿರಿಯ ಅಧಿಕಾರಿಗಳ ತಂಡ ಘಟನಾ ಸ್ಥಳಕ್ಕೆ ತಲುಪಿದೆ. ಅಲ್ಲಿ ಕೆಲವು ಬುಲೆಟ್ ಶೆಲ್ಗಳು ಬಿದ್ದಿದ್ದವು. ಅವುಗಳನ್ನು ವಶಕ್ಕೆ ಪಡೆಯಲಾಗಿದೆ. ಸುದ್ದಿ ತಿಳಿದು ಕುಟುಂಬಸ್ಥರು ಆಘಾತಕ್ಕೆ ಒಳಗಾಗಿದ್ದಾರೆ.
ಇದನ್ನೂ ಓದಿ:ಟೀಂ ಇಂಡಿಯಾದಲ್ಲಿ ದಿಢೀರ್ ಬದಲಾವಣೆ.. ಜಿಂಬಾಬ್ವೆ ಪ್ರವಾಸದಿಂದ ಮೂವರು ಸ್ಟಾರ್ ಆಟಗಾರರಿಗೆ ಕೊಕ್..!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ