900 ಗ್ರಾಂ ತೂಕದ ತಿಮಿಂಗಿಲದ ವಾಂತಿ ಮಾರಾಟ
90 ಲಕ್ಷ ಮೌಲ್ಯದ ಅಂಬರ್ ಗ್ರೀಸ್ ವಶಕ್ಕೆ ಪಡೆದ ಪೊಲೀಸರು
ಅಂಬರ್ ಗ್ರೀಸ್ ಮಾರಾಟಕ್ಕೆ ಯತ್ನಿಸುತ್ತಿದ್ದ ಮೂವರನ್ನು ಅರೆಸ್ಟ್ ಮಾಡಿದ ಸಿಸಿಬಿ
ಮಂಗಳೂರು: ಅಕ್ರಮವಾಗಿ ಅಂಬರ್ ಗ್ರೀಸ್ ಮಾರಾಟ ಮಾಡಲು ಯತ್ನಿಸುತ್ತಿ ಮೂವರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಉಡುಪಿ ನಿವಾಸಿ ಸಾಲಿಗ್ರಾಮದ ಜಯಕರ (29), ಶಿವಮೊಗ್ಗ ಸಾಗರ ನಿವಾಸಿ ಆದಿತ್ಯ(25), ಹಾವೇರಿ ಶಿಗ್ಗಾಂ ನಿವಾಸಿ ಲೋಹಿತ್ ಕುಮಾರ್ ಗುರಪ್ಪನವರ್(39) ಎಂಬವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರಿಂದ 900 ಗ್ರಾಂ ತೂಕದ 90 ಲಕ್ಷ ಮೌಲ್ಯದ ಅಂಬರ್ ಗ್ರೀಸ್ ವಶಕ್ಕೆ ಪಡೆದುಕೊಂಡಿದ್ದಾರೆ.
ಮಂಗಳೂರಿನ ಪಣಂಬೂರು ಬೀಚ್ ಬಳಿ ಮೂವರು ಅಂಬರ್ ಗ್ರೀಸ್ ಮಾರಾಟಕ್ಕೆ ಯತ್ನಿಸುತ್ತಿದ್ದರು. ಈ ವೇಳೆ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಅಂದಹಾಗೆಯೇ, ಅಂಬರ್ ಗ್ರೀಸ್ ಅನ್ನು ತಿಮಿಂಗಿಲ ವಾಂತಿ ಎಂದೇ ಗುರುತಿಸಲಾಗಿದ್ದು, ಕೊಟ್ಯಾಂತರ ರೂಪಾಯಿ ಬೆಲೆ ಬಾಳುವ ವನ್ಯ ಜೀವಿ ಉತ್ಪನ್ನ ಎಂದು ಹೇಳಲಾಗುತ್ತಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
900 ಗ್ರಾಂ ತೂಕದ ತಿಮಿಂಗಿಲದ ವಾಂತಿ ಮಾರಾಟ
90 ಲಕ್ಷ ಮೌಲ್ಯದ ಅಂಬರ್ ಗ್ರೀಸ್ ವಶಕ್ಕೆ ಪಡೆದ ಪೊಲೀಸರು
ಅಂಬರ್ ಗ್ರೀಸ್ ಮಾರಾಟಕ್ಕೆ ಯತ್ನಿಸುತ್ತಿದ್ದ ಮೂವರನ್ನು ಅರೆಸ್ಟ್ ಮಾಡಿದ ಸಿಸಿಬಿ
ಮಂಗಳೂರು: ಅಕ್ರಮವಾಗಿ ಅಂಬರ್ ಗ್ರೀಸ್ ಮಾರಾಟ ಮಾಡಲು ಯತ್ನಿಸುತ್ತಿ ಮೂವರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಉಡುಪಿ ನಿವಾಸಿ ಸಾಲಿಗ್ರಾಮದ ಜಯಕರ (29), ಶಿವಮೊಗ್ಗ ಸಾಗರ ನಿವಾಸಿ ಆದಿತ್ಯ(25), ಹಾವೇರಿ ಶಿಗ್ಗಾಂ ನಿವಾಸಿ ಲೋಹಿತ್ ಕುಮಾರ್ ಗುರಪ್ಪನವರ್(39) ಎಂಬವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರಿಂದ 900 ಗ್ರಾಂ ತೂಕದ 90 ಲಕ್ಷ ಮೌಲ್ಯದ ಅಂಬರ್ ಗ್ರೀಸ್ ವಶಕ್ಕೆ ಪಡೆದುಕೊಂಡಿದ್ದಾರೆ.
ಮಂಗಳೂರಿನ ಪಣಂಬೂರು ಬೀಚ್ ಬಳಿ ಮೂವರು ಅಂಬರ್ ಗ್ರೀಸ್ ಮಾರಾಟಕ್ಕೆ ಯತ್ನಿಸುತ್ತಿದ್ದರು. ಈ ವೇಳೆ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಅಂದಹಾಗೆಯೇ, ಅಂಬರ್ ಗ್ರೀಸ್ ಅನ್ನು ತಿಮಿಂಗಿಲ ವಾಂತಿ ಎಂದೇ ಗುರುತಿಸಲಾಗಿದ್ದು, ಕೊಟ್ಯಾಂತರ ರೂಪಾಯಿ ಬೆಲೆ ಬಾಳುವ ವನ್ಯ ಜೀವಿ ಉತ್ಪನ್ನ ಎಂದು ಹೇಳಲಾಗುತ್ತಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ