newsfirstkannada.com

WATCH: ಟೀ ಕುಡಿಯಲು ಹೋಗುತ್ತಿದ್ದಾಗ ಹೃದಯಾಘಾತ; ಬೆಂಗಳೂರಲ್ಲಿ ಆಟೋ ಡ್ರೈವರ್ ದಾರುಣ ಸಾವು

Share :

Published August 22, 2023 at 12:44pm

Update August 22, 2023 at 12:54pm

    ಸಂಪಂಗಿ ರಾಮನಗರದಲ್ಲಿ ಟೀ ಕುಡಿಯಲು ಆಟೋ‌ ನಿಲ್ಲಿಸಿದ ಚಾಲಕ

    ಎದೆಯನ್ನು ಸವರಿಕೊಳ್ಳುತ್ತ ಆಟೋದಿಂದ ಕೆಳಗೆ ಇಳಿದ ಡ್ರೈವರ್

    ಆಟೋದಿಂದ ಕೆಳಗೆ ಇಳಿಯುವ ಕೊನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಬೆಂಗಳೂರು: ಇತ್ತೀಚೆಗೆ ಹೃದಯಾಘಾತಕ್ಕೆ ಸಾವನ್ನಪ್ಪುವವರ ಸಂಖ್ಯೆ ಹೆಚ್ಚಾಗುತ್ತಿದೆ. ಆರೋಗ್ಯವಾಗಿದ್ದವರೇ ನೋಡ ನೋಡುತ್ತಿದ್ದಂತೆ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಇದೇ ರೀತಿ ಹೃದಯಾಘಾತಕ್ಕೆ ಆಟೋ ಚಾಲಕನೋರ್ವ ಸ್ಥಳದಲ್ಲೇ ಸಾವನ್ನಪ್ಪಿರೋ ದಾರುಣ ಘಟನೆ ಬೆಂಗಳೂರಿನ ಸಂಪಂಗಿ ರಾಮನಗರದಲ್ಲಿ ನಡೆದಿದೆ.

ಸಂಪಂಗಿ ರಾಮನಗರದಲ್ಲಿ ಟೀ ಕುಡಿಯಲು ಆಟೋ‌ ನಿಲ್ಲಿಸಿ ತೆರಳುತ್ತಿದ್ದ ಚಾಲಕನಿಗೆ ಎದೆನೋವು ಕಾಣಿಸಿಕೊಂಡಿದೆ. ಎದೆಯನ್ನು ಸಾವರಿಸಿಕೊಳ್ಳುತ್ತ ಆಟೋದಿಂದ ಕೆಳಗೆ ಇಳಿದ ಡ್ರೈವರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಂಡ್ಯ ಜಿಲ್ಲೆಯ ತಿಮ್ಮೇಶ್ ಹೃದಯಾಘಾತಕ್ಕೆ ಸಾವನ್ನಪ್ಪಿದ ಆಟೋ ಚಾಲಕ ಎನ್ನಲಾಗಿದೆ. ತಿಮ್ಮೇಶ್ ಬೆಂಗಳೂರಿನಲ್ಲಿ ಆಟೋ ಓಡಿಸಿಕೊಂಡು ಜೀವನ ನಡೆಸುತ್ತಿದ್ದರು.

ಚಾಲಕ ತಿಮ್ಮೇಶ್ ಅವರು ಆಟೋದಿಂದ ಕೆಳಗೆ ಇಳಿದು ಹೋಗುವ ಕೊನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆಟೋ ಓಡಿಸಿಕೊಂಡು ಬರುವಾಗಲೇ ತಿಮ್ಮೇಶ್‌ಗೆ ಎದೆ ನೋವು ಕಾಣಿಸಿಕೊಂಡಿದೆ. ಎದೆಯನ್ನು ಸಾವರಿಸಿಕೊಳ್ಳುತ್ತ ಆಟೋದಿಂದ ಕೆಳಗೆ ಇಳಿದು ಸ್ವಲ್ಪ ದೂರ ಹೋಗುತ್ತಿದ್ದಂತೆ ಸಾವನ್ನಪ್ಪಿದ್ದಾರೆ. ಸಂಪಂಗಿ ರಾಮನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

WATCH: ಟೀ ಕುಡಿಯಲು ಹೋಗುತ್ತಿದ್ದಾಗ ಹೃದಯಾಘಾತ; ಬೆಂಗಳೂರಲ್ಲಿ ಆಟೋ ಡ್ರೈವರ್ ದಾರುಣ ಸಾವು

https://newsfirstlive.com/wp-content/uploads/2023/08/Bangalore-Auto-Driver.jpg

    ಸಂಪಂಗಿ ರಾಮನಗರದಲ್ಲಿ ಟೀ ಕುಡಿಯಲು ಆಟೋ‌ ನಿಲ್ಲಿಸಿದ ಚಾಲಕ

    ಎದೆಯನ್ನು ಸವರಿಕೊಳ್ಳುತ್ತ ಆಟೋದಿಂದ ಕೆಳಗೆ ಇಳಿದ ಡ್ರೈವರ್

    ಆಟೋದಿಂದ ಕೆಳಗೆ ಇಳಿಯುವ ಕೊನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಬೆಂಗಳೂರು: ಇತ್ತೀಚೆಗೆ ಹೃದಯಾಘಾತಕ್ಕೆ ಸಾವನ್ನಪ್ಪುವವರ ಸಂಖ್ಯೆ ಹೆಚ್ಚಾಗುತ್ತಿದೆ. ಆರೋಗ್ಯವಾಗಿದ್ದವರೇ ನೋಡ ನೋಡುತ್ತಿದ್ದಂತೆ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಇದೇ ರೀತಿ ಹೃದಯಾಘಾತಕ್ಕೆ ಆಟೋ ಚಾಲಕನೋರ್ವ ಸ್ಥಳದಲ್ಲೇ ಸಾವನ್ನಪ್ಪಿರೋ ದಾರುಣ ಘಟನೆ ಬೆಂಗಳೂರಿನ ಸಂಪಂಗಿ ರಾಮನಗರದಲ್ಲಿ ನಡೆದಿದೆ.

ಸಂಪಂಗಿ ರಾಮನಗರದಲ್ಲಿ ಟೀ ಕುಡಿಯಲು ಆಟೋ‌ ನಿಲ್ಲಿಸಿ ತೆರಳುತ್ತಿದ್ದ ಚಾಲಕನಿಗೆ ಎದೆನೋವು ಕಾಣಿಸಿಕೊಂಡಿದೆ. ಎದೆಯನ್ನು ಸಾವರಿಸಿಕೊಳ್ಳುತ್ತ ಆಟೋದಿಂದ ಕೆಳಗೆ ಇಳಿದ ಡ್ರೈವರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಂಡ್ಯ ಜಿಲ್ಲೆಯ ತಿಮ್ಮೇಶ್ ಹೃದಯಾಘಾತಕ್ಕೆ ಸಾವನ್ನಪ್ಪಿದ ಆಟೋ ಚಾಲಕ ಎನ್ನಲಾಗಿದೆ. ತಿಮ್ಮೇಶ್ ಬೆಂಗಳೂರಿನಲ್ಲಿ ಆಟೋ ಓಡಿಸಿಕೊಂಡು ಜೀವನ ನಡೆಸುತ್ತಿದ್ದರು.

ಚಾಲಕ ತಿಮ್ಮೇಶ್ ಅವರು ಆಟೋದಿಂದ ಕೆಳಗೆ ಇಳಿದು ಹೋಗುವ ಕೊನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆಟೋ ಓಡಿಸಿಕೊಂಡು ಬರುವಾಗಲೇ ತಿಮ್ಮೇಶ್‌ಗೆ ಎದೆ ನೋವು ಕಾಣಿಸಿಕೊಂಡಿದೆ. ಎದೆಯನ್ನು ಸಾವರಿಸಿಕೊಳ್ಳುತ್ತ ಆಟೋದಿಂದ ಕೆಳಗೆ ಇಳಿದು ಸ್ವಲ್ಪ ದೂರ ಹೋಗುತ್ತಿದ್ದಂತೆ ಸಾವನ್ನಪ್ಪಿದ್ದಾರೆ. ಸಂಪಂಗಿ ರಾಮನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More