ಸತತ ಮೂರು ದಿನಗಳಿಂದ ರಜೆ ಕೊಡದೇ ನಿರಂತರ ಕೆಲಸ
ಮೇಲಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನ
ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ KSRTC ಚಾಲಕ
ಬಾಗಲಕೋಟೆ: ಕೆಎಸ್ಆರ್ಟಿಸಿ ಇಲಾಖೆಯ ಮೇಲಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಬಸ್ ಚಾಲಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಜಿಲ್ಲೆಯ ಬೀಳಗಿ ಡಿಪೋದಲ್ಲಿ ನಡೆದಿದೆ.
ಚಾಲಕ ಮಲ್ಲಿಕಾರ್ಜುನ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಅಧಿಕಾರಿ. 3 ದಿನಗಳಾದರೂ ಮೇಲಧಿಕಾರಿ ರಜೆ ಕೊಡದೆ ನಿರಂತರವಾಗಿ ಕೆಲಸ ಮಾಡಿಸುತ್ತಿದ್ದಾರೆ. ಇದರಿಂದ ಮನನೊಂದಿರುವ ಚಾಲಕ ಮಲ್ಲಿಕಾರ್ಜುನ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ತಕ್ಷಣ ಸಂಬಂಧಿಕರು, ಅವರನ್ನು ಸ್ಥಳೀಯ ಬೀಳಗಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
ಬೀಳಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಗಾಗಿ ಬಾಗಲಕೋಟೆಯ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದ್ದು ಚಿಕಿತ್ಸೆ ಮುಂದುವರೆಸಲಾಗಿದೆ. ಸದ್ಯ ಚಾಲಕನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು ತನ್ನ ಈ ಸ್ಥಿತಿಗೆ ಡಿಪೋದ ಮೇಲಧಿಕಾರಿ ಕಾಡರಕೊಪ್ಪ ಎಂಬುವವರೇ ಕಾರಣ. ಅವರ ಕಿರುಕುಳದಿಂದ ಹೀಗೆ ಮಾಡಿದ್ದೇನೆ ಎಂದು ಹೇಳಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಸತತ ಮೂರು ದಿನಗಳಿಂದ ರಜೆ ಕೊಡದೇ ನಿರಂತರ ಕೆಲಸ
ಮೇಲಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನ
ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ KSRTC ಚಾಲಕ
ಬಾಗಲಕೋಟೆ: ಕೆಎಸ್ಆರ್ಟಿಸಿ ಇಲಾಖೆಯ ಮೇಲಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಬಸ್ ಚಾಲಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಜಿಲ್ಲೆಯ ಬೀಳಗಿ ಡಿಪೋದಲ್ಲಿ ನಡೆದಿದೆ.
ಚಾಲಕ ಮಲ್ಲಿಕಾರ್ಜುನ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಅಧಿಕಾರಿ. 3 ದಿನಗಳಾದರೂ ಮೇಲಧಿಕಾರಿ ರಜೆ ಕೊಡದೆ ನಿರಂತರವಾಗಿ ಕೆಲಸ ಮಾಡಿಸುತ್ತಿದ್ದಾರೆ. ಇದರಿಂದ ಮನನೊಂದಿರುವ ಚಾಲಕ ಮಲ್ಲಿಕಾರ್ಜುನ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ತಕ್ಷಣ ಸಂಬಂಧಿಕರು, ಅವರನ್ನು ಸ್ಥಳೀಯ ಬೀಳಗಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
ಬೀಳಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಗಾಗಿ ಬಾಗಲಕೋಟೆಯ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದ್ದು ಚಿಕಿತ್ಸೆ ಮುಂದುವರೆಸಲಾಗಿದೆ. ಸದ್ಯ ಚಾಲಕನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು ತನ್ನ ಈ ಸ್ಥಿತಿಗೆ ಡಿಪೋದ ಮೇಲಧಿಕಾರಿ ಕಾಡರಕೊಪ್ಪ ಎಂಬುವವರೇ ಕಾರಣ. ಅವರ ಕಿರುಕುಳದಿಂದ ಹೀಗೆ ಮಾಡಿದ್ದೇನೆ ಎಂದು ಹೇಳಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ