/newsfirstlive-kannada/media/post_attachments/wp-content/uploads/2024/06/DARSHAN_PAVITRA_GOWDA.jpg)
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಹತ್ಯೆ ಕೇಸಲ್ಲಿ A1 ಆರೋಪಿಯಾಗಿರೋ ಪವಿತ್ರಾಗೌಡ ಜಾಮೀನು ಅರ್ಜಿ ವಜಾಗೊಂಡಿದೆ. ಇಂದು ಅರ್ಜಿ ವಿಚಾರಣೆ ನಡೆಸಿದ ಸಿಸಿಹೆಚ್ 57 ಕೋರ್ಟ್ ನ್ಯಾಯಧೀಶರು ಈ ಮಹತ್ವದ ತೀರ್ಪು ನೀಡಿದ್ದಾರೆ.
ಅಸಲಿಗೆ ಆಗಿದ್ದೇನು?
ಈ ಹಿಂದೆ ಪ್ರಕರಣದ A1 ಆರೋಪಿಯಾಗಿರೋ ಪವಿತ್ರಾಗೌಡ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ಆದೇಶವನ್ನು ಇಂದಿಗೆ ಕಾಯ್ದಿರಿಸಿತ್ತು. ಕೊಲೆಯಲ್ಲಿ ಭಾಗಿಯಾದ ಸಾಕ್ಷ್ಯಗಳ ಬಗ್ಗೆ ಸಂಪೂರ್ಣ ಉಲ್ಲೇಖ ಮಾಡಲಾಗಿತ್ತು. ಪವಿತ್ರಾಗೌಡ ಪರವಾಗಿ ಟಾಮಿ ಸೆಬಾಸ್ಟಿಯನ್ ವಾದ ಮಾಡಿದ್ದರು. ಎಸ್ಪಿಪಿ ಪ್ರಸನ್ನ ಕುಮಾರ್ ಕಡ್ಡಾಯವಾಗಿ ಪ್ರಮುಖ ನಾಲ್ಕು ಆರೋಪಿಗಳಿಗೆ ಜಾಮೀನು ನೀಡಬಾರದು ಎಂದಿದ್ದರು.
ಜಾರ್ಮಿನು ಅರ್ಜಿ ಸಂಬಂಧ ಸುದೀರ್ಘ ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶರು ಅರ್ಜಿ ವಜಾ ಮಾಡಿದ್ದಾರೆ. ಹಾಗಾಗಿ ಪವಿತ್ರಾಗೌಡ ಅವರು ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಬೇಕಿದೆ.
ಇದನ್ನೂ ಓದಿ: Big Breaking: ಆರೋಪಿ ದರ್ಶನ್ಗೆ ಜೈಲೇ ಗತಿ.. ಜಾಮೀನು ಅರ್ಜಿ ವಜಾ!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ