newsfirstkannada.com

ಸಿದ್ದರಾಮಯ್ಯ ಪತ್ನಿಗೆ ಅನಾರೋಗ್ಯ, ಆಸ್ಪತ್ರೆಗೆ ದಾಖಲು; ಮುಖ್ಯಮಂತ್ರಿ ದೆಹಲಿ ಪ್ರವಾಸದಲ್ಲಿ ಬದಲಾವಣೆ

Share :

21-06-2023

    ಬೆಂಗಳೂರಿನ ಆಸ್ಪತ್ರೆಯಲ್ಲಿ ಪಾರ್ವತಿ ಸಿದ್ದರಾಮಯ್ಯಗೆ ಚಿಕಿತ್ಸೆ

    ನಿನ್ನೆ ರಾತ್ರಿ 10 ಗಂಟೆಗೆ ಮಣಿಪಾಲ್ ಆಸ್ಪತ್ರೆಗೆ ದಾಖಲು

    ತಾಯಿ ಆರೋಗ್ಯ ನೋಡಿಕೊಳ್ತಿರುವ ಡಾ. ಯತೀಂದ್ರ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿ 10 ಗಂಟೆ ಸುಮಾರಿಗೆ ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಾಮಾನ್ಯ ಜ್ವರ ಬಂದಿದ್ದರಿಂದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಹೇಳಲಾಗಿದೆ.

ಪಾರ್ವತಿ ಸಿದ್ದರಾಮಯ್ಯ ಅವರ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗುತ್ತಿದ್ದಂತೆ ಮಾಜಿ ಶಾಸಕ ಯತಿಂದ್ರ ಅವರು ತಾಯಿ ಜೊತೆಯೇ ಇದ್ದಾರೆ. ಇನ್ನು ಸಿಎಂ ಸಿದ್ದರಾಮಯ್ಯ ಅವರು ಅನ್ನಭಾಗ್ಯಕ್ಕಾಗಿ ಅಕ್ಕಿ ತರಲು ಇವತ್ತು ದೆಹಲಿಗೆ ಪ್ರಯಾಣಿಸುತ್ತಿದ್ದರು. ಆದ್ರೆ ಪತ್ನಿ ಅವರ ವಿಷಯ ತಿಳಿದು ಮಣಿಪಾಲ್​ ಆಸ್ಪತ್ರೆಗೆ ಭೇಟಿ ನೀಡಿ ಅಲ್ಲಿ ಪತ್ನಿಯ ಆರೋಗ್ಯ ವಿಚಾರಿಸಿಕೊಂಡು ನಂತರ 11 ಗಂಟೆಗೆ ವಿಮಾನದ ಮೂಲಕ ನಂತರ ದೆಹಲಿಗೆ ತೆರಳಲಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಸಿದ್ದರಾಮಯ್ಯ ಪತ್ನಿಗೆ ಅನಾರೋಗ್ಯ, ಆಸ್ಪತ್ರೆಗೆ ದಾಖಲು; ಮುಖ್ಯಮಂತ್ರಿ ದೆಹಲಿ ಪ್ರವಾಸದಲ್ಲಿ ಬದಲಾವಣೆ

https://newsfirstlive.com/wp-content/uploads/2023/06/SIDDARAMAIAH_WIFE_PARWATI_1.jpg

    ಬೆಂಗಳೂರಿನ ಆಸ್ಪತ್ರೆಯಲ್ಲಿ ಪಾರ್ವತಿ ಸಿದ್ದರಾಮಯ್ಯಗೆ ಚಿಕಿತ್ಸೆ

    ನಿನ್ನೆ ರಾತ್ರಿ 10 ಗಂಟೆಗೆ ಮಣಿಪಾಲ್ ಆಸ್ಪತ್ರೆಗೆ ದಾಖಲು

    ತಾಯಿ ಆರೋಗ್ಯ ನೋಡಿಕೊಳ್ತಿರುವ ಡಾ. ಯತೀಂದ್ರ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿ 10 ಗಂಟೆ ಸುಮಾರಿಗೆ ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಾಮಾನ್ಯ ಜ್ವರ ಬಂದಿದ್ದರಿಂದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಹೇಳಲಾಗಿದೆ.

ಪಾರ್ವತಿ ಸಿದ್ದರಾಮಯ್ಯ ಅವರ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗುತ್ತಿದ್ದಂತೆ ಮಾಜಿ ಶಾಸಕ ಯತಿಂದ್ರ ಅವರು ತಾಯಿ ಜೊತೆಯೇ ಇದ್ದಾರೆ. ಇನ್ನು ಸಿಎಂ ಸಿದ್ದರಾಮಯ್ಯ ಅವರು ಅನ್ನಭಾಗ್ಯಕ್ಕಾಗಿ ಅಕ್ಕಿ ತರಲು ಇವತ್ತು ದೆಹಲಿಗೆ ಪ್ರಯಾಣಿಸುತ್ತಿದ್ದರು. ಆದ್ರೆ ಪತ್ನಿ ಅವರ ವಿಷಯ ತಿಳಿದು ಮಣಿಪಾಲ್​ ಆಸ್ಪತ್ರೆಗೆ ಭೇಟಿ ನೀಡಿ ಅಲ್ಲಿ ಪತ್ನಿಯ ಆರೋಗ್ಯ ವಿಚಾರಿಸಿಕೊಂಡು ನಂತರ 11 ಗಂಟೆಗೆ ವಿಮಾನದ ಮೂಲಕ ನಂತರ ದೆಹಲಿಗೆ ತೆರಳಲಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More