ಬೆಂಗಳೂರಲ್ಲಿ ಮಳೆಯ ಆರ್ಭಟ, ಧರೆಗುರುಳಿದ ಮರಗಳು.. ಎಲ್ಲೆಲ್ಲಿ ಏನೇನ್ ಆಗಿದೆ.. ಟಾಪ್- 10 ಫೋಟೋಸ್

author-image
Bheemappa
Updated On
ಬೆಂಗಳೂರಲ್ಲಿ ಮಳೆಯ ಆರ್ಭಟ, ಧರೆಗುರುಳಿದ ಮರಗಳು.. ಎಲ್ಲೆಲ್ಲಿ ಏನೇನ್ ಆಗಿದೆ.. ಟಾಪ್- 10 ಫೋಟೋಸ್
Advertisment
  • ಮಳೆಯಿಂದಾಗಿ ಕೆರೆಗಳಾಂತದ ಸಿಲಿಕಾನ್ ಸಿಟಿಯ ರಸ್ತೆಗಳು
  • ಜೋರು ಮಳೆ ನಡುವೆ ರಾತ್ರಿ ಮನೆ ಸೇರಿದ ನಗರವಾಸಿಗಳು
  • ಬಿಬಿಎಂಪಿ ವ್ಯಾಪ್ತಿಯಲ್ಲಿ ಎಲ್ಲೆಲ್ಲಿ ಮರಗಳು ಉರುಳಿವೆ..?

ಬೆಂಗಳೂರು: ಉದ್ಯಾನನಗರಿಯಲ್ಲಿ ಮಂಗಳವಾರ (ಏ.13)ದಂದು ಭಾರೀ ಗಾಳಿ, ಗುಡುಗು, ಮಿಂಚು ಸಹಿತ ಧಾರಾಕಾರ ಮಳೆ ಸುರಿದಿದ್ದರಿಂದ ಅವಾಂತರಗಳು ಸಂಭವಿಸಿವೆ. ಅನೇಕ ತಗ್ಗುಪ್ರದೇಶಗಳಿಗೆ ಮಳೆ ನೀರು ನುಗ್ಗಿವೆ. ರಸ್ತೆಗಳು ಜಲಾವೃತಗೊಂಡರೆ, ಸಿಲಿಕಾನ್​ ಸಿಟಿಯಲ್ಲಿ ಅಲ್ಲಾಲ್ಲಿ ಮರಗಳು ಧರೆಗುರುಳಿವೆ. ಇದರಿಂದ ಸಾರ್ವಜನಿಕರು ಪರದಾಡಿದ್ದಾರೆ.

publive-image

ಹೆಚ್‌ಬಿಆರ್ ಲೇಔಟ್‌ನಲ್ಲಿ ಬೃಹತ್ ಮರಗಳು ಧರೆಗುರುಳಿವೆ. ಮನೆ ಮುಂದೆ ನಿಲ್ಲಿಸಿದ್ದ ಕಾರಿನ ಮೇಲೆ ಮರ ಬಿದ್ದು ವಾಹನಗಳು ಜಖಂ ಆಗಿದೆ. ಯಲಚೇನಹಳ್ಳಿ ಬಳಿ ಮೂರು ಮರಗಳು ಬಿದ್ದ ಪರಿಣಾಮ ನಾಲ್ಕು ಕಾರುಗಳು ಜಖಂಗೊಂಡಿವೆ.

publive-image

ಬೆಂಗಳೂರಿನ ಕೆ.ಆರ್ ಮಾರ್ಕೆಟ್, ಹೆಬ್ಬಾಳ, ಮೆಖ್ರೀ ಸರ್ಕಲ್​, ಮೆಜೆಸ್ಟಿಕ್, ಶಾಂತಿನಗರ, ಬಸವನಗುಡಿ, ಮಲ್ಲೇಶ್ವರಂ, ಶಿವನಾಂದ, ಆರ್​ಟಿ ನಗರ, ಪ್ಯಾಲೇಸ್ ಗುಟ್ಟಹಳ್ಳಿ, ವಿಧಾನಸೌಧ ಸೇರಿದಂತೆ ಇಡೀ ನಗರದ್ಯಾಂತ ವರುಣ ಆರ್ಭಟಿಸಿದ್ದಾನೆ. ಇದರಿಂದ ರಸ್ತೆಗಳೆಲ್ಲಾ ಜಲಾವೃತ ಆಗಿದ್ದವು.

publive-image

ಬೆಂಗಳೂರಿನ ಇಂದಿರಾನಗರದಲ್ಲಿ ಭಾರೀ ಮಳೆ ಜೊತೆಗೆ ಗಾಳಿ ಬೀಸಿದ್ದು, ಎಸ್‌ವಿ ರಸ್ತೆ ಮೆಟ್ರೋ ಬಳಿ ಇರುವ ಓಎಂಆರ್ ರಸ್ತೆಯ ಮೇಲೆ ಮರದ ಕೊಂಬೆಗಳು ಬಿದ್ದಿವೆ. 80 ಫೀಟ್​ ರೋಡ್​ನಲ್ಲಿ ಮಳೆ ನೀರು ನಿಂತು ಸಂಚಾರಕ್ಕೆ ತೊಂದರೆ ಆಗಿತ್ತು. ಇನ್ನು ಬಿಬಿಎಂಪಿಯ 8 ವಲಯದಲ್ಲಿ 35ಕ್ಕೂ ಹೆಚ್ಚು ಮರಗಳು ನೆಲಕ್ಕುರುಳಿವೆ. 120ಕ್ಕೂ ಹೆಚ್ಚು ಮರದ ಕೊಂಬೆಗಳು ಮುರಿದು ಬಿದ್ದಿವೆ.

publive-image

ಗಾರ್ಡನ್ ಸಿಟಿಯ ಬನ್ನೇರುಘಟ್ಟ ಮುಖ್ಯ ರಸ್ತೆಯ ಬಿಳೇಕಹಳ್ಳಿಯಿಂದ ತಿಲಕ್‌ನಗರದವರೆಗೆ ಹೋಗುವ ರಸ್ತೆಯು ಮಳೆ ಸಂದರ್ಭದಲ್ಲಿ ಕಂಡು ಬಂದಿದ್ದು ಹೀಗೆ.

ಇದನ್ನೂ ಓದಿ: ಕರ್ನಾಟಕಕ್ಕೆ ಸಿಡಿಲ ಆಘಾತ.. ಒಂದೇ ದಿನ 7 ಮಂದಿ ಜೀವ ತೆಗೆದ ಬೆಳ್ಮಿಂಚು

publive-image'

ಬೆಂಗಳೂರಿನ ಕಲ್ಯಾಣನಗರದಲ್ಲಿ ಪಾರ್ಕಿಂಗ್ ಮಾಡಿದ್ದ ಕಾರಿನ ಮೇಲೆ ಬೃಹತ್ ಮರಬೊಂದು ಉರುಳಿ ಬಿದ್ದಿದೆ. ಇದರಿಂದ ಕಾರಿಗೆ ಹಾನಿಯಾಗಿದ್ದು ಮಾಲೀಕ ಬೇಸರಗೊಂಡಿದ್ದಾರೆ.

publive-image

ಸಿಲಿಕಾನ್ ಸಿಟಿಯ ಮಾರತ್​ಹಳ್ಳಿಯಲ್ಲಿ ಧಾರಾಕಾರ ಮಳೆ ಸುರಿದಿದ್ದು ರಸ್ತೆಯೇ ಕರೆಯಂತೆ ಆಗಿದೆ. ಇನ್ನು ಪರ್ಲ್​ ಪ್ಲಾಜಾ ಬಳಿ ನಿಂತಿರುವ ಮಳೆನೀರಿನಲ್ಲೇ ಕಾರು ಹೋಗುತ್ತಿರುವ ದೃಶ್ಯ ಕಾಣಬಹುದು.

publive-image

ನಿನ್ನೆ ಸುರಿದ ಭಾರೀ ಮಳೆಗೆ ಹೆಚ್​ಬಿಆರ್​ ಲೇಔಟ್​ನ ರಸ್ತೆಯೊಂದು ಕರೆಯಂತೆ ಆಗಿದೆ. ರಸ್ತೆ ತಗ್ಗು ಇದ್ದಿದ್ದರಿಂದ ಮಳೆ ನೀರು ಶೇಖರಣೆ ಆಗಿದೆ.

publive-image

ಧಾರಾಕಾರ ಮಳೆಗೆ ರಸ್ತೆ ಬದಿ ಇದ್ದ ಬೃಹತ್ ಮರವೊಂದು ವಾಲಿದೆ. ಈ ದೃಶ್ಯವು ಬೆಂಗಳೂರಿನ ರೇಸ್​ ಕೋರ್ಸ್​​ಬಳಿ ಕಂಡು ಬಂದಿದೆ.

publive-image

ಬೆಂಗಳೂರಿನಲ್ಲಿ ಮಳೆ ಜೋರಾಗಿ ಬಂದಿದ್ದರಿಂದ ಹಲವೆಡೆ ಮರಗಳು ಧರೆಗುರುಳಿವೆ. ಇದು ಕಮ್ಮನಹಳ್ಳಿ ಮ್ಯಾನ್ ರಸ್ತೆಯಲ್ಲಿ ಕಂಡು ಬಂದ ದೃಶ್ಯಗಳು

ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment