/newsfirstlive-kannada/media/post_attachments/wp-content/uploads/2025/05/BNG_KONANAKUNTE_ACCIDENT.jpg)
ಬೆಂಗಳೂರು: ಸಿಗರೇಟ್​ ತಂದು ಕೊಡದಿರುವ ಕೋಪಕ್ಕೆ ಆರ್​​15 ಬೈಕ್​ಗೆ ಕಾರಿನಿಂದ ಗುದ್ದಿದ ಪರಿಣಾಮ ಓರ್ವ ಸಾಫ್ಟ್ ವೇರ್ ಉದ್ಯೋಗಿ ಜೀವ ಕಳೆದುಕೊಂಡ ಘಟನೆ ನಗರದ ಕೋಣನಕುಂಟೆ ಕ್ರಾಸ್​​ನ ಕನಕಪುರ ರಸ್ತೆ ತಿರುವಿನ ಬಳಿ ನಡೆದಿದೆ.
ಸಂಜಯ್ ಉಸಿರು ಚೆಲ್ಲಿದ ಸಾಫ್ಟ್​ವೇರ್​ ಇಂಜಿನಿಯರ್. ಆರೋಪಿ ಕಾರು ಚಾಲಕ ಪ್ರತೀಕ್​ನನ್ನು ಸುಬ್ರಹ್ಮಣ್ಯಪುರ ಠಾಣೆಯ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಸಂಜಯ್ ಹಾಗೂ ಚೇತನ್ ಎನ್ನುವ ಇಬ್ಬರು ಸಾಫ್ಟ್​ವೇರ್​ ಇಂಜಿನಿಯರ್​ಗಳು ಆಗಿದ್ದಾರೆ. ಇವರು ವರ್ಕ್ ಫ್ರಮ್ ಹೋಂ ಕೆಲಸ ಮಾಡಿ ಟೀ ಕುಡಿಯಲು ಮೇ 10 ರಂದು ಬೆಳಗಿನ ಜಾವ 4 ಗಂಟೆಗೆ ಕೋಣನಕುಂಟೆ ಕ್ರಾಸ್​ನಲ್ಲಿ ತಳ್ಳು ಗಾಡಿ ಬಳಿಗೆ ಬಂದಿದ್ದರು.
ಈ ವೇಳೆ ಬರ್ತ್​​ಡೇ ಪಾರ್ಟಿ ಮುಗಿಸಿಕೊಂಡು ಆರ್​ಆರ್​ ನಗರ ಮನೆ ಕಡೆಗೆ ಪ್ರತೀಕ್ ದಂಪತಿ ಕಾರಿನಲ್ಲಿ ತೆರಳುತ್ತಿದ್ದರು. ಆಗ ಕೋಣನಕುಂಟೆ ಕ್ರಾಸ್​ ಬಳಿ ಕಾರು ನಿಲ್ಲಿಸಿ, ಕೆಳಗೆ ಇಳಿಯದೇ ಸಿಗರೇಟ್​ ತಂದು ಕೊಡುವಂತೆ ಟೀ ಕುಡಿಯುತ್ತಿದ್ದ ಸಂಜಯ್, ಚೇತನ್​ಗೆ ಹೇಳುತ್ತಾರೆ. ಆದರೆ ಇದಕ್ಕೆ ಇಬ್ಬರು ವಿರೋಧ ವ್ಯಕ್ತಪಡಿಸುತ್ತಾರೆ. ನೀವೇ ಬೇಕಿದ್ರೆ ಸಿಗರೇಟ್ ತೆಗೆದುಕೊಳ್ಳಿ ಅಂತ ತಮ್ಮ ಪಾಡಿಗೆ ತಾವು ಟೀ ಕುಡಿಯುತ್ತಿದ್ದರು.
ಇದನ್ನೂ ಓದಿ: ಟ್ರ್ಯಾಕ್ಟರ್​ಗೆ ಭಯಾನಕವಾಗಿ ಕಾರು ಡಿಕ್ಕಿ.. 11 ತಿಂಗಳ ಗಂಡು ಮಗು ಸೇರಿ ಜೀವ ಬಿಟ್ಟ ನಾಲ್ವರು
/newsfirstlive-kannada/media/post_attachments/wp-content/uploads/2025/05/BNG_KONANAKUNTE_ACCIDENT_1.jpg)
ಈ ವೇಳೆ ಟೀ ಅಂಗಡಿ ಬಳಿಯೇ ಪ್ರತೀಕ್ ದಂಪತಿ ಹಾಗೂ ಸಾಫ್ಟ್​ವೇರ್​ ಉದ್ಯೋಗಿಗಳ ಮಧ್ಯೆ ಗಲಾಟೆ ನಡೆದಿದೆ. ಸ್ಥಳದಲ್ಲಿದ್ದ ಜನರು ಈ ಗಲಾಟೆಯನ್ನು ತಿಳಿಗೊಳಿಸಿ ಕಳುಹಿಸಿದ್ದರು. ಸಾಫ್ಟ್​ವೇರ್​ ಉದ್ಯೋಗಿಗಳು ಇಬ್ಬರು ತಮ್ಮ R15 ಬೈಕ್ ಹತ್ತಿಕೊಂಡು ಹೋಗುತ್ತಿದ್ದರು. ಆದರೆ ಕೋಣನಕುಂಟೆ ಕ್ರಾಸ್​​ನ ಕನಕಪುರ ರಸ್ತೆ ತಿರುವಿನ ಬಳಿ ಬೈಕ್ ಯೂಟರ್ನ್ ತೆಗೆದುಕೊಳ್ಳುವ ಸಮಯದಲ್ಲಿ ಬೈಕ್​ಗೆ ಕಾರಿನಿಂದ ಭೀಕರವಾಗಿ ಡಿಕ್ಕಿ ಮಾಡಲಾಗಿದೆ.
ಆರೋಪಿ ಪ್ರತೀಕ್​ ಕಾರಿನಿಂದ ಗುದ್ದಿದ ರಭಸಕ್ಕೆ ಸಂಜಯ್ ಬೈಕ್ ಅಂಗಡಿ ಶೆಟರ್​​ಗೆ ಬಡಿದು ಬಿದ್ದಿದೆ. ಈ ವೇಳೆ ಇಬ್ಬರು ಪ್ರಜ್ಞಾ ಹೀನರಾಗಿ ಕೆಳಗೆ ಬಿದ್ದಿದ್ದರು. ತಕ್ಷಣ ಇಬ್ಬರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಸಂಜಯ್ ಸ್ಥಿತಿ ಚಿಂತಾಜನಕ ಆಗಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೇ 2 ದಿನದ ಹಿಂದೆ ಕೊನೆಯುಸಿರೆಳೆದಿದ್ದಾನೆ. ಈ ಬಗ್ಗೆ ತನಿಖೆ ನಡೆಸಿದ್ದ ಸುಬ್ರಹ್ಮಣ್ಯಪುರ ಠಾಣೆ ಪೊಲೀರು ಆರೋಪಿ ಪ್ರತೀಕ್​​ನನ್ನು ಬಂಧಿಸಿದ್ದಾರೆ.
ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us