/newsfirstlive-kannada/media/post_attachments/wp-content/uploads/2025/05/BNG_KONANAKUNTE_ACCIDENT.jpg)
ಬೆಂಗಳೂರು: ಸಿಗರೇಟ್ ತಂದು ಕೊಡದಿರುವ ಕೋಪಕ್ಕೆ ಆರ್15 ಬೈಕ್ಗೆ ಕಾರಿನಿಂದ ಗುದ್ದಿದ ಪರಿಣಾಮ ಓರ್ವ ಸಾಫ್ಟ್ ವೇರ್ ಉದ್ಯೋಗಿ ಜೀವ ಕಳೆದುಕೊಂಡ ಘಟನೆ ನಗರದ ಕೋಣನಕುಂಟೆ ಕ್ರಾಸ್ನ ಕನಕಪುರ ರಸ್ತೆ ತಿರುವಿನ ಬಳಿ ನಡೆದಿದೆ.
ಸಂಜಯ್ ಉಸಿರು ಚೆಲ್ಲಿದ ಸಾಫ್ಟ್ವೇರ್ ಇಂಜಿನಿಯರ್. ಆರೋಪಿ ಕಾರು ಚಾಲಕ ಪ್ರತೀಕ್ನನ್ನು ಸುಬ್ರಹ್ಮಣ್ಯಪುರ ಠಾಣೆಯ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಸಂಜಯ್ ಹಾಗೂ ಚೇತನ್ ಎನ್ನುವ ಇಬ್ಬರು ಸಾಫ್ಟ್ವೇರ್ ಇಂಜಿನಿಯರ್ಗಳು ಆಗಿದ್ದಾರೆ. ಇವರು ವರ್ಕ್ ಫ್ರಮ್ ಹೋಂ ಕೆಲಸ ಮಾಡಿ ಟೀ ಕುಡಿಯಲು ಮೇ 10 ರಂದು ಬೆಳಗಿನ ಜಾವ 4 ಗಂಟೆಗೆ ಕೋಣನಕುಂಟೆ ಕ್ರಾಸ್ನಲ್ಲಿ ತಳ್ಳು ಗಾಡಿ ಬಳಿಗೆ ಬಂದಿದ್ದರು.
ಈ ವೇಳೆ ಬರ್ತ್ಡೇ ಪಾರ್ಟಿ ಮುಗಿಸಿಕೊಂಡು ಆರ್ಆರ್ ನಗರ ಮನೆ ಕಡೆಗೆ ಪ್ರತೀಕ್ ದಂಪತಿ ಕಾರಿನಲ್ಲಿ ತೆರಳುತ್ತಿದ್ದರು. ಆಗ ಕೋಣನಕುಂಟೆ ಕ್ರಾಸ್ ಬಳಿ ಕಾರು ನಿಲ್ಲಿಸಿ, ಕೆಳಗೆ ಇಳಿಯದೇ ಸಿಗರೇಟ್ ತಂದು ಕೊಡುವಂತೆ ಟೀ ಕುಡಿಯುತ್ತಿದ್ದ ಸಂಜಯ್, ಚೇತನ್ಗೆ ಹೇಳುತ್ತಾರೆ. ಆದರೆ ಇದಕ್ಕೆ ಇಬ್ಬರು ವಿರೋಧ ವ್ಯಕ್ತಪಡಿಸುತ್ತಾರೆ. ನೀವೇ ಬೇಕಿದ್ರೆ ಸಿಗರೇಟ್ ತೆಗೆದುಕೊಳ್ಳಿ ಅಂತ ತಮ್ಮ ಪಾಡಿಗೆ ತಾವು ಟೀ ಕುಡಿಯುತ್ತಿದ್ದರು.
ಇದನ್ನೂ ಓದಿ:ಟ್ರ್ಯಾಕ್ಟರ್ಗೆ ಭಯಾನಕವಾಗಿ ಕಾರು ಡಿಕ್ಕಿ.. 11 ತಿಂಗಳ ಗಂಡು ಮಗು ಸೇರಿ ಜೀವ ಬಿಟ್ಟ ನಾಲ್ವರು
ಈ ವೇಳೆ ಟೀ ಅಂಗಡಿ ಬಳಿಯೇ ಪ್ರತೀಕ್ ದಂಪತಿ ಹಾಗೂ ಸಾಫ್ಟ್ವೇರ್ ಉದ್ಯೋಗಿಗಳ ಮಧ್ಯೆ ಗಲಾಟೆ ನಡೆದಿದೆ. ಸ್ಥಳದಲ್ಲಿದ್ದ ಜನರು ಈ ಗಲಾಟೆಯನ್ನು ತಿಳಿಗೊಳಿಸಿ ಕಳುಹಿಸಿದ್ದರು. ಸಾಫ್ಟ್ವೇರ್ ಉದ್ಯೋಗಿಗಳು ಇಬ್ಬರು ತಮ್ಮ R15 ಬೈಕ್ ಹತ್ತಿಕೊಂಡು ಹೋಗುತ್ತಿದ್ದರು. ಆದರೆ ಕೋಣನಕುಂಟೆ ಕ್ರಾಸ್ನ ಕನಕಪುರ ರಸ್ತೆ ತಿರುವಿನ ಬಳಿ ಬೈಕ್ ಯೂಟರ್ನ್ ತೆಗೆದುಕೊಳ್ಳುವ ಸಮಯದಲ್ಲಿ ಬೈಕ್ಗೆ ಕಾರಿನಿಂದ ಭೀಕರವಾಗಿ ಡಿಕ್ಕಿ ಮಾಡಲಾಗಿದೆ.
ಆರೋಪಿ ಪ್ರತೀಕ್ ಕಾರಿನಿಂದ ಗುದ್ದಿದ ರಭಸಕ್ಕೆ ಸಂಜಯ್ ಬೈಕ್ ಅಂಗಡಿ ಶೆಟರ್ಗೆ ಬಡಿದು ಬಿದ್ದಿದೆ. ಈ ವೇಳೆ ಇಬ್ಬರು ಪ್ರಜ್ಞಾ ಹೀನರಾಗಿ ಕೆಳಗೆ ಬಿದ್ದಿದ್ದರು. ತಕ್ಷಣ ಇಬ್ಬರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಸಂಜಯ್ ಸ್ಥಿತಿ ಚಿಂತಾಜನಕ ಆಗಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೇ 2 ದಿನದ ಹಿಂದೆ ಕೊನೆಯುಸಿರೆಳೆದಿದ್ದಾನೆ. ಈ ಬಗ್ಗೆ ತನಿಖೆ ನಡೆಸಿದ್ದ ಸುಬ್ರಹ್ಮಣ್ಯಪುರ ಠಾಣೆ ಪೊಲೀರು ಆರೋಪಿ ಪ್ರತೀಕ್ನನ್ನು ಬಂಧಿಸಿದ್ದಾರೆ.
ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ