newsfirstkannada.com

ದಿಢೀರ್​​ ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿಯಾದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ; ಕಾರಣವೇನು?

Share :

14-06-2023

    ಹೆಚ್​.ಡಿ ದೇವೇಗೌಡರ ನಿವಾಸಕ್ಕೆ ಆಗಮಿಸಿದ ಸೂರ್ಯ

    ದೇವೇಗೌಡರ ಜೊತೆ ಹಲವು ವಿಷಯಗಳ ಬಗ್ಗೆ ಚರ್ಚೆ

    ಹಿರಿಯ ರಾಜಕಾರಣಿಯ ಆಶೀರ್ವಾದ ಪಡೆದ ಸಂಸದ

ಬೆಂಗಳೂರು: ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರು ಹಿರಿಯ ರಾಜಕಾರಣಿ ಹಾಗೂ ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡರನ್ನು ಇಂದು ಭೇಟಿ ಮಾಡಿದ್ದಾರೆ.

ಬೆಂಗಳೂರಿನ ಪದ್ಮನಾಭ ನಗರದಲ್ಲಿರುವ ಹೆಚ್​.ಡಿ ದೇವೇಗೌಡರ ನಿವಾಸಕ್ಕೆ ಆಗಮಿಸಿದ ತೇಜಸ್ವಿ ಸೂರ್ಯ ಕೆಲವೊತ್ತು ಆಡಳಿತ, ದೇಶದ ಪ್ರಗತಿ ಹಾಗೂ ರಾಜಕೀಯ ಚರ್ಚೆ ನಡೆಸಿದರು. ಬಳಿಕ ದೊಡ್ಡಗೌಡರ ಆರೋಗ್ಯ ಬಗ್ಗೆ ಕೇಳಿ ತಿಳಿದುಕೊಂಡರು. ಇನ್ನು ಹೆಚ್​.ಡಿ ದೇವೇಗೌಡರಿಗೆ ಶಾಲು ಹೊದಿಸಿ, ಹಾರ ಹಾಕಿ ಸನ್ಮಾನ ಮಾಡಿದರು.

ಕೇಂದ್ರದಲ್ಲಿ ಪ್ರಧಾನಿ ಮೋದಿ ಸರ್ಕಾರಕ್ಕೆ 9 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಈ ತಿಂಗಳು ಇಡೀ ಬಿಜೆಪಿ ವತಿಯಿಂದ ಮಹಾ ಸಂಕಲ್ಪ ಅಭಿಯಾನ ಕೈಗೊಳ್ಳಲಾಗಿದೆ. ಹೀಗಾಗಿ ಈ ಅಭಿಯಾನದಡಿ ತೇಜಸ್ವಿ ಸೂರ್ಯ, ದೇವೇಗೌಡರನ್ನು ಭೇಟಿಯಾಗಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ದಿಢೀರ್​​ ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿಯಾದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ; ಕಾರಣವೇನು?

https://newsfirstlive.com/wp-content/uploads/2023/06/MP_TEJASWI_SURYA.jpg

    ಹೆಚ್​.ಡಿ ದೇವೇಗೌಡರ ನಿವಾಸಕ್ಕೆ ಆಗಮಿಸಿದ ಸೂರ್ಯ

    ದೇವೇಗೌಡರ ಜೊತೆ ಹಲವು ವಿಷಯಗಳ ಬಗ್ಗೆ ಚರ್ಚೆ

    ಹಿರಿಯ ರಾಜಕಾರಣಿಯ ಆಶೀರ್ವಾದ ಪಡೆದ ಸಂಸದ

ಬೆಂಗಳೂರು: ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರು ಹಿರಿಯ ರಾಜಕಾರಣಿ ಹಾಗೂ ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡರನ್ನು ಇಂದು ಭೇಟಿ ಮಾಡಿದ್ದಾರೆ.

ಬೆಂಗಳೂರಿನ ಪದ್ಮನಾಭ ನಗರದಲ್ಲಿರುವ ಹೆಚ್​.ಡಿ ದೇವೇಗೌಡರ ನಿವಾಸಕ್ಕೆ ಆಗಮಿಸಿದ ತೇಜಸ್ವಿ ಸೂರ್ಯ ಕೆಲವೊತ್ತು ಆಡಳಿತ, ದೇಶದ ಪ್ರಗತಿ ಹಾಗೂ ರಾಜಕೀಯ ಚರ್ಚೆ ನಡೆಸಿದರು. ಬಳಿಕ ದೊಡ್ಡಗೌಡರ ಆರೋಗ್ಯ ಬಗ್ಗೆ ಕೇಳಿ ತಿಳಿದುಕೊಂಡರು. ಇನ್ನು ಹೆಚ್​.ಡಿ ದೇವೇಗೌಡರಿಗೆ ಶಾಲು ಹೊದಿಸಿ, ಹಾರ ಹಾಕಿ ಸನ್ಮಾನ ಮಾಡಿದರು.

ಕೇಂದ್ರದಲ್ಲಿ ಪ್ರಧಾನಿ ಮೋದಿ ಸರ್ಕಾರಕ್ಕೆ 9 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಈ ತಿಂಗಳು ಇಡೀ ಬಿಜೆಪಿ ವತಿಯಿಂದ ಮಹಾ ಸಂಕಲ್ಪ ಅಭಿಯಾನ ಕೈಗೊಳ್ಳಲಾಗಿದೆ. ಹೀಗಾಗಿ ಈ ಅಭಿಯಾನದಡಿ ತೇಜಸ್ವಿ ಸೂರ್ಯ, ದೇವೇಗೌಡರನ್ನು ಭೇಟಿಯಾಗಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More