ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ಹೈವೇ
ಸಿಎಂ ಸಿದ್ದರಾಮಯ್ಯ ಮಹತ್ವದ ಸೂಚನೆ..!
ಸೂಚನೆ ಮೇರೆಗೆ ಪ್ರಾಧಿಕಾರ ಹೊಸ ಆದೇಶ
ರಾಮನಗರ: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ಹೈವೇನಲ್ಲಿ ಆ್ಯಕ್ಸಿಡೆಂಟ್ ಕೇಸುಗಳು ಹೆಚ್ಚುತ್ತಲೇ ಇವೆ. ಇದುವರೆಗೂ 900ಕ್ಕೂ ಹೆಚ್ಚು ಅಪಘಾತಗಳು ಸಂಭವಿಸಿವೆ. ಈ ಭೀಕರ ಅಪಘಾತಗಳಿಗೆ 300ಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದು, ಸಾವಿರಾರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ನೂರಾರು ಗಾಯಾಳು ಸಾವು-ಬದುಕಿನ ಮಧ್ಯೆ ಹೋರಾಟ ನಡೆಸುತ್ತಲೇ ಇದ್ದಾರೆ.
ಇತ್ತೀಚೆಗೆ ಸಿಎಂ ಸಿದ್ದರಾಮಯ್ಯ ಅವರೇ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ಹೆದ್ದಾರಿಗೆ ಭೇಟಿ ನೀಡಿ ಹೆಚ್ಚುತ್ತಿರೋ ಅಪಘಾತಗಳಿಗೆ ಕಾರಣವೇನು? ಎಂದು ಪರಿಶೀಲಿಸಿದ್ದಾರೆ. ಅವೈಜ್ಞಾನಿಕ ಕಾಮಗಾರಿ ಬಗ್ಗೆ ದೂರುಗಳ ಕುರಿತಾಗಿಯೂ ಅಧಿಕಾರಿಗಳೊಂದಿಗೆ ಚರ್ಚಿಸಿದ್ದಾರೆ. ಅತಿ ವೇಗದ ಚಾಲನೆ ಗುರುತಿಸಿ ಸಂಚಾರ ನಿಯಮ ಉಲ್ಲಂಘನೆಗೆ ದಂಡ ಹಾಕಿ ಎಂದು ಸೂಚನೆ ನೀಡಿದ್ದಾರೆ. ಈ ಸಿಎಂ ಸೂಚನೆ ಮೇರೆಗೆ ಹೆದ್ದಾರಿ ಪ್ರಾಧಿಕಾರ ಮತ್ತು ರಾಜ್ಯ ಪೊಲೀಸ್ ಇಲಾಖೆ ಹೊಸ ಆದೇಶ ಹೊರಡಿಸಿದೆ.
ನಾಳೆಯಿಂದಲೇ ಹೊಸ ರೂಲ್ಸ್ ಜಾರಿ
ಯಾವುದೇ ಕಾರಣಕ್ಕೂ ಇನ್ಮುಂದೆ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ಹೈವೇನಲ್ಲಿ ಬೈಕ್, ಆಟೋ, ಟ್ರ್ಯಾಕ್ಟರ್ ಹೋಗಬಾರದು ಎಂದು ನಿರ್ಬಂಧ ಹೇರಲಾಗಿದೆ. ಅಪಘಾತ ಹೆಚ್ಚಳ ತಡೆಗೆ ಈ ಕ್ರಮ ತೆಗೆದುಕೊಂಡಿದ್ದು, ಯಾರಾದ್ರೂ ನಿಯಮ ಉಲ್ಲಂಘನೆ ಮಾಡಿದ್ರೆ 500 ರೂ. ದಂಡ ಹಾಕಲಾಗುವುದು. 9 ದಿಕ್ಕಿನಲ್ಲೂ ಪೊಲೀಸ್ ಚೆಕಿಂಗ್ ಇರಲಿದೆ. ಆಗಸ್ಟ್ 1ನೇ ತಾರೀಕು ಅಂದರೆ ನಾಳೆಯಿಂದಲೇ ಈ ಹೊಸ ಆದೇಶ ಜಾರಿಯಾಗಲಿದೆ ಎಂದು ತಿಳಿದು ಬಂದಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ಹೈವೇ
ಸಿಎಂ ಸಿದ್ದರಾಮಯ್ಯ ಮಹತ್ವದ ಸೂಚನೆ..!
ಸೂಚನೆ ಮೇರೆಗೆ ಪ್ರಾಧಿಕಾರ ಹೊಸ ಆದೇಶ
ರಾಮನಗರ: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ಹೈವೇನಲ್ಲಿ ಆ್ಯಕ್ಸಿಡೆಂಟ್ ಕೇಸುಗಳು ಹೆಚ್ಚುತ್ತಲೇ ಇವೆ. ಇದುವರೆಗೂ 900ಕ್ಕೂ ಹೆಚ್ಚು ಅಪಘಾತಗಳು ಸಂಭವಿಸಿವೆ. ಈ ಭೀಕರ ಅಪಘಾತಗಳಿಗೆ 300ಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದು, ಸಾವಿರಾರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ನೂರಾರು ಗಾಯಾಳು ಸಾವು-ಬದುಕಿನ ಮಧ್ಯೆ ಹೋರಾಟ ನಡೆಸುತ್ತಲೇ ಇದ್ದಾರೆ.
ಇತ್ತೀಚೆಗೆ ಸಿಎಂ ಸಿದ್ದರಾಮಯ್ಯ ಅವರೇ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ಹೆದ್ದಾರಿಗೆ ಭೇಟಿ ನೀಡಿ ಹೆಚ್ಚುತ್ತಿರೋ ಅಪಘಾತಗಳಿಗೆ ಕಾರಣವೇನು? ಎಂದು ಪರಿಶೀಲಿಸಿದ್ದಾರೆ. ಅವೈಜ್ಞಾನಿಕ ಕಾಮಗಾರಿ ಬಗ್ಗೆ ದೂರುಗಳ ಕುರಿತಾಗಿಯೂ ಅಧಿಕಾರಿಗಳೊಂದಿಗೆ ಚರ್ಚಿಸಿದ್ದಾರೆ. ಅತಿ ವೇಗದ ಚಾಲನೆ ಗುರುತಿಸಿ ಸಂಚಾರ ನಿಯಮ ಉಲ್ಲಂಘನೆಗೆ ದಂಡ ಹಾಕಿ ಎಂದು ಸೂಚನೆ ನೀಡಿದ್ದಾರೆ. ಈ ಸಿಎಂ ಸೂಚನೆ ಮೇರೆಗೆ ಹೆದ್ದಾರಿ ಪ್ರಾಧಿಕಾರ ಮತ್ತು ರಾಜ್ಯ ಪೊಲೀಸ್ ಇಲಾಖೆ ಹೊಸ ಆದೇಶ ಹೊರಡಿಸಿದೆ.
ನಾಳೆಯಿಂದಲೇ ಹೊಸ ರೂಲ್ಸ್ ಜಾರಿ
ಯಾವುದೇ ಕಾರಣಕ್ಕೂ ಇನ್ಮುಂದೆ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ಹೈವೇನಲ್ಲಿ ಬೈಕ್, ಆಟೋ, ಟ್ರ್ಯಾಕ್ಟರ್ ಹೋಗಬಾರದು ಎಂದು ನಿರ್ಬಂಧ ಹೇರಲಾಗಿದೆ. ಅಪಘಾತ ಹೆಚ್ಚಳ ತಡೆಗೆ ಈ ಕ್ರಮ ತೆಗೆದುಕೊಂಡಿದ್ದು, ಯಾರಾದ್ರೂ ನಿಯಮ ಉಲ್ಲಂಘನೆ ಮಾಡಿದ್ರೆ 500 ರೂ. ದಂಡ ಹಾಕಲಾಗುವುದು. 9 ದಿಕ್ಕಿನಲ್ಲೂ ಪೊಲೀಸ್ ಚೆಕಿಂಗ್ ಇರಲಿದೆ. ಆಗಸ್ಟ್ 1ನೇ ತಾರೀಕು ಅಂದರೆ ನಾಳೆಯಿಂದಲೇ ಈ ಹೊಸ ಆದೇಶ ಜಾರಿಯಾಗಲಿದೆ ಎಂದು ತಿಳಿದು ಬಂದಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ