ಅತಿ ವೇಗದಿಂದ ಬಂದ ಸ್ವಿಫ್ಟ್ ಕಾರು ರಸ್ತೆಯ ಡಿವೈಡರ್ಗೆ ಡಿಕ್ಕಿ
ಹಬ್ಬದಂದೇ ಸಂಭವಿಸಿರೋ ಭಾರೀ ಅನಾಹುತ, ಮೂವರು ಸಾವು
ರಸ್ತೆ ಅಪಘಾತಕ್ಕೆ ಅತಿ ವೇಗವಾಗಿ ಬಂದಿರುವುದೇ ಕಾರಣವಾಯಿತಾ?
ಬೆಂಗಳೂರು: ಗೌರಿ-ಗಣೇಶ ಹಬ್ಬದ ದಿನವೇ ನೆಲಮಂಗಲದ ಅಂಚೆಪಾಳ್ಯದ ಬಳಿ ಭೀಕರ ರಸ್ತೆ ಅಪಘಾತ ನಡೆದಿದ್ದು ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದು ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಬೆಳಗಿನ ಜಾವ ನೆಲಮಂಗಲದ ಅಂಚೆಪಾಳ್ಯದ ಬಳಿ ಅತೀ ವೇಗವಾಗಿ ಬಂದ ಸ್ವಿಫ್ಟ್ ಕಾರು ರಸ್ತೆಯಲ್ಲಿರುವ ಡಿವೈಡರ್ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ಐವರು ಪ್ರಯಾಣಿಕರ ಪೈಕಿ ಮೂವರು ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಇಬ್ಬರ ಸ್ಥಿತಿ ಚಂತಾಜನಕವಾಗಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಬಗ್ಗೆ ನೆಲಮಂಗಲ ಸಂಚಾರಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಅತಿ ವೇಗದಿಂದ ಬಂದ ಸ್ವಿಫ್ಟ್ ಕಾರು ರಸ್ತೆಯ ಡಿವೈಡರ್ಗೆ ಡಿಕ್ಕಿ
ಹಬ್ಬದಂದೇ ಸಂಭವಿಸಿರೋ ಭಾರೀ ಅನಾಹುತ, ಮೂವರು ಸಾವು
ರಸ್ತೆ ಅಪಘಾತಕ್ಕೆ ಅತಿ ವೇಗವಾಗಿ ಬಂದಿರುವುದೇ ಕಾರಣವಾಯಿತಾ?
ಬೆಂಗಳೂರು: ಗೌರಿ-ಗಣೇಶ ಹಬ್ಬದ ದಿನವೇ ನೆಲಮಂಗಲದ ಅಂಚೆಪಾಳ್ಯದ ಬಳಿ ಭೀಕರ ರಸ್ತೆ ಅಪಘಾತ ನಡೆದಿದ್ದು ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದು ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಬೆಳಗಿನ ಜಾವ ನೆಲಮಂಗಲದ ಅಂಚೆಪಾಳ್ಯದ ಬಳಿ ಅತೀ ವೇಗವಾಗಿ ಬಂದ ಸ್ವಿಫ್ಟ್ ಕಾರು ರಸ್ತೆಯಲ್ಲಿರುವ ಡಿವೈಡರ್ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ಐವರು ಪ್ರಯಾಣಿಕರ ಪೈಕಿ ಮೂವರು ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಇಬ್ಬರ ಸ್ಥಿತಿ ಚಂತಾಜನಕವಾಗಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಬಗ್ಗೆ ನೆಲಮಂಗಲ ಸಂಚಾರಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ