5 ಲಕ್ಷ ರೂಪಾಯಿ ನೀಡಲು ನಿರಾಕರಿಸಿದ್ದ ಟ್ರಾವೆಲ್ಸ್ ವ್ಯವಹಾರದ ವ್ಯಕ್ತಿ
ಸದ್ಯ ಮೂವರು ಆರೋಪಿಗಳನ್ನ ಅರೆಸ್ಟ್ ಮಾಡಿದ ಸಿಸಿಬಿ ಪೊಲೀಸರು
ಇನ್ನೂ 5 ಲಕ್ಷ ಹಣವನ್ನ ನೀನು ಕೊಡಬೇಕು ಎಂದು ಪಟ್ಟು ಹಿಡಿದಿದ್ದ
ಬೆಂಗಳೂರು: ಮೀಟರ್ ಬಡ್ಡಿ ದಂಧೆಯಲ್ಲಿ ವ್ಯಕ್ತಿಯೋರ್ವನಿಂದ ಸಾಲ ವಸೂಲಿಗೆ ಮುಂದಾಗಿದ್ದ ಸೈಕಲ್ ರವಿಯ ಇಬ್ಬರು ಸಹಚರರನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಟ್ರಾವೆಲ್ಸ್ ವ್ಯವಹಾರ ಮಾಡುವ ರಂಗನಾಥ್ ಎನ್ನುವ ವ್ಯಕ್ತಿಯು ಮಂಜುನಾಥ್ ಎಂಬುವವರಿಂದ 23 ಲಕ್ಷ ರೂಪಾಯಿಗಳನ್ನು ಬಡ್ಡಿ ಲೆಕ್ಕದಲ್ಲಿ ಸಾಲ ಪಡೆದಿದ್ದರು. ಹಲವು ದಿನಗಳ ನಂತರ ಬಡ್ಡಿ ಸಮೇತ 23 ಲಕ್ಷ ಹಣ ಹಿಂದಿರುಗಿಸಿದ್ದರು. ಆದರೆ ಮಂಜುನಾಥ್ ನಾನು ಮೀಟರ್ ಬಡ್ಡಿಗೆ ಹಣ ಕೊಟ್ಟಿರೋದು ಇನ್ನು, 5 ಲಕ್ಷ ರೂಪಾಯಿ ಕೊಡುವಂತೆ ಪಟ್ಟು ಹಿಡಿದಿದ್ದ ಎನ್ನಲಾಗಿದೆ. ಆದರೆ ಈ ಹಣ ಕೊಡಲು ನಿರಾಕರಿಸಿದ್ದಕ್ಕೆ ಅದನ್ನು ವಸೂಲಿ ಮಾಡಲು ಸೈಕಲ್ ರವಿ ಸಹಚರನಾದ ಉಮೇಶ್ಗೆ ಡೀಲ್ ಒಪ್ಪಿಸಿದ್ದ.
ಅದರಂತೆ ಉಮೇಶ್ ತನ್ನ ಸಹಚರನಾದ ಸುರೇಶ್ನನ್ನ ಕರೆದುಕೊಂಡು ಮೀಟರ್ ಬಡ್ಡಿ ವಸೂಲಿಗೆ ಮುಂದಾಗಿದ್ದರು. ಅಲ್ಲದೇ ರಂಗನಾಥ್ಗೆ ಜೀವ ಬೆದರಿಕೆ ಕೂಡ ಹಾಕಿದ್ದರು. ಈ ಸಂಬಂಧ ಸೈಕಲ್ ರವಿಯ ಇಬ್ಬರು ಸಹಚರರು ಹಾಗೂ ಹಣ ನೀಡಿದ್ದ ಮಂಜುನಾಥ್ನನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಆರ್ಆರ್ ನಗರದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
5 ಲಕ್ಷ ರೂಪಾಯಿ ನೀಡಲು ನಿರಾಕರಿಸಿದ್ದ ಟ್ರಾವೆಲ್ಸ್ ವ್ಯವಹಾರದ ವ್ಯಕ್ತಿ
ಸದ್ಯ ಮೂವರು ಆರೋಪಿಗಳನ್ನ ಅರೆಸ್ಟ್ ಮಾಡಿದ ಸಿಸಿಬಿ ಪೊಲೀಸರು
ಇನ್ನೂ 5 ಲಕ್ಷ ಹಣವನ್ನ ನೀನು ಕೊಡಬೇಕು ಎಂದು ಪಟ್ಟು ಹಿಡಿದಿದ್ದ
ಬೆಂಗಳೂರು: ಮೀಟರ್ ಬಡ್ಡಿ ದಂಧೆಯಲ್ಲಿ ವ್ಯಕ್ತಿಯೋರ್ವನಿಂದ ಸಾಲ ವಸೂಲಿಗೆ ಮುಂದಾಗಿದ್ದ ಸೈಕಲ್ ರವಿಯ ಇಬ್ಬರು ಸಹಚರರನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಟ್ರಾವೆಲ್ಸ್ ವ್ಯವಹಾರ ಮಾಡುವ ರಂಗನಾಥ್ ಎನ್ನುವ ವ್ಯಕ್ತಿಯು ಮಂಜುನಾಥ್ ಎಂಬುವವರಿಂದ 23 ಲಕ್ಷ ರೂಪಾಯಿಗಳನ್ನು ಬಡ್ಡಿ ಲೆಕ್ಕದಲ್ಲಿ ಸಾಲ ಪಡೆದಿದ್ದರು. ಹಲವು ದಿನಗಳ ನಂತರ ಬಡ್ಡಿ ಸಮೇತ 23 ಲಕ್ಷ ಹಣ ಹಿಂದಿರುಗಿಸಿದ್ದರು. ಆದರೆ ಮಂಜುನಾಥ್ ನಾನು ಮೀಟರ್ ಬಡ್ಡಿಗೆ ಹಣ ಕೊಟ್ಟಿರೋದು ಇನ್ನು, 5 ಲಕ್ಷ ರೂಪಾಯಿ ಕೊಡುವಂತೆ ಪಟ್ಟು ಹಿಡಿದಿದ್ದ ಎನ್ನಲಾಗಿದೆ. ಆದರೆ ಈ ಹಣ ಕೊಡಲು ನಿರಾಕರಿಸಿದ್ದಕ್ಕೆ ಅದನ್ನು ವಸೂಲಿ ಮಾಡಲು ಸೈಕಲ್ ರವಿ ಸಹಚರನಾದ ಉಮೇಶ್ಗೆ ಡೀಲ್ ಒಪ್ಪಿಸಿದ್ದ.
ಅದರಂತೆ ಉಮೇಶ್ ತನ್ನ ಸಹಚರನಾದ ಸುರೇಶ್ನನ್ನ ಕರೆದುಕೊಂಡು ಮೀಟರ್ ಬಡ್ಡಿ ವಸೂಲಿಗೆ ಮುಂದಾಗಿದ್ದರು. ಅಲ್ಲದೇ ರಂಗನಾಥ್ಗೆ ಜೀವ ಬೆದರಿಕೆ ಕೂಡ ಹಾಕಿದ್ದರು. ಈ ಸಂಬಂಧ ಸೈಕಲ್ ರವಿಯ ಇಬ್ಬರು ಸಹಚರರು ಹಾಗೂ ಹಣ ನೀಡಿದ್ದ ಮಂಜುನಾಥ್ನನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಆರ್ಆರ್ ನಗರದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ