ಈ ಇಬ್ಬರಲ್ಲಿ ಯಾರಾದ್ರೂ ಕಣಕ್ಕಿಳಿದರೂ ಗೆಲುವು ಸುಲಭವಾಗಲಿದೆ
ಗೆಲ್ಲಿಸಿಕೊಂಡು ಬರುತ್ತೇವೆ ಎಂದು ದೇವೇಗೌಡರಿಗೆ ಹೇಳಿದ ಸಿಪಿವೈ
JDS ಅಭ್ಯರ್ಥಿ ಕಣಕ್ಕಿಳಿಸುವ ಹಿಂದಿದೆ CPY ರಾಜಕೀಯ ಲೆಕ್ಕಾಚಾರ
ರಾಮನಗರ: ಡಿಸಿಎಂ ಡಿ.ಕೆ.ಶಿವಕುಮಾರ್, ಸಂಸದ ಸುರೇಶ್ಗೆ ಟಕ್ಕರ್ ಕೊಡಲು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಅವರು ಮಾಸ್ಟರ್ ಪ್ಲಾನ್ ಮಾಡಿದ್ದಾರೆ. ಒಂದೇ ಕಲ್ಲಲ್ಲಿ ಎರಡು ಹಕ್ಕಿ ಹೊಡೆಯಲು ಮುಂದಾಗಿದ್ದಾರೆ. ಇದಕ್ಕೆ ಪೂರಕ ಎನ್ನುವಂತೆ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಟಿಕೆಟ್ BJPಗೆ ಬೇಡ. ಜೆಡಿಎಸ್ನ ಪ್ರಬಲ ಅಭ್ಯರ್ಥಿಯನ್ನ ಕಣಕ್ಕೆ ಇಳಿಸಿದ್ರೆ ಒಳ್ಳೆಯದು ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ಬಳಿ ಮನವಿ ಮಾಡಿದ್ದಾರೆ.
ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಅವರು ಫೆ.11 ರ ತಡರಾತ್ರಿ ಹೆಚ್.ಡಿ ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿ ಸತತ 2ಗಂಟೆಗಳಿಗೂ ಅಧಿಕ ಸಮಯ ರಾಜಕಾರಣದ ಬಗ್ಗೆ ಚರ್ಚೆ ಮಾಡಿದ್ದರು. ಈ ವೇಳೆ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಟಿಕೆಟ್ BJPಗೆ ಬೇಡ. ಜೆಡಿಎಸ್ನ ಪ್ರಬಲ ಅಭ್ಯರ್ಥಿಯನ್ನು ಕ್ಷೇತ್ರದಲ್ಲಿ ಘೋಷಣೆ ಮಾಡಬೇಕು. ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಕಣಕ್ಕಿಳಿದರೆ ಸೂಕ್ತ ಎಂದಿದ್ದಾರೆ. ಒಂದು ವೇಳೆ ಕುಮಾರಸ್ವಾಮಿಯವರು ಸ್ಪರ್ಧಿಸದಿದ್ದರೇ ದೇವೇಗೌಡರ ಅಳಿಯ ಡಾ.ಮಂಜುನಾಥ್ ಅವರನ್ನು ಅಖಾಡಕ್ಕೆ ಇಳಿಸಬೇಕು. ಈ ಇಬ್ಬರಲ್ಲಿ ಒಬ್ಬರು ಸ್ಪರ್ಧೆ ಮಾಡಿದರೆ ಗೆಲುವು ಸುಲಭವಾಗಬಹುದು ಎಂದಿದ್ದಾರೆ.
ಇದನ್ನು ಓದಿ: ತಡರಾತ್ರಿ ದಿಢೀರ್ ದೊಡ್ಡಗೌಡರನ್ನ ಭೇಟಿ ಮಾಡಿದ ಸಿಪಿವೈ.. 2 ಗಂಟೆಗೂ ಹೆಚ್ಚು ಕಾಲ ‘ರಹಸ್ಯ ಮಾತುಕತೆ’
ಕುಮಾರಸ್ವಾಮಿ ಅಥವಾ ಮಂಜುನಾಥ್ ಅವರು ಎಲೆಕ್ಷನ್ಗೆ ನಿಂತರೆ ಗೆಲ್ಲಿಸಿಕೊಂಡು ಬರುವ ಜವಾಬ್ದಾರಿ ಹೊರುತ್ತೇವೆ. ಯೋಗೇಶ್ವರ್ ಅವರು ಈ ರೀತಿ ಯೋಚನೆ ಮಾಡಿರುವುದರ ಹಿಂದೆ ಒಂದು ಗುಟ್ಟು ಇದೆ. ಅದೇ ಒಂದು ಕಲ್ಲಲ್ಲಿ ಎರಡು ಹಕ್ಕಿ ಹೊಡೆಯೋ ಬಿಗ್ ಪ್ಲಾನ್ ಮಾಡಿಕೊಂಡಿದ್ದಾರೆ. ಎಲೆಕ್ಷನ್ನಲ್ಲಿ ಡಿ.ಕೆ ಸುರೇಶ್ ಸೋತರೆ ಡಿ.ಕೆ.ಸಹೋದರರಿಗೆ ಮಣ್ಣು ಮುಕ್ಕಿಸಿದಂತೆ ಆಗುತ್ತದೆ. ಇನ್ನೊಂದು ಕಡೆ ಕುಮಾರಸ್ವಾಮಿ ಗೆದ್ದು ಸಂಸದನಾದರೆ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ತನಗೆ ಸಿಗುವ ವಿಶ್ವಾಸದಲ್ಲಿದ್ದಾರೆ. ಹೀಗಾಗಿಯೇ ಜೆಡಿಎಸ್ನವರಿಗೆ ಗ್ರಾಮಾಂತರ ಕ್ಷೇತ್ರಕ್ಕೆ ಸ್ಪರ್ಧಿಸಲಿ ಎಂದು ದೇವೇಗೌಡರ ಬಳಿ ಯೋಗೇಶ್ವರ್ ಅವರು ಮನವಿ ಮಾಡಿದ್ದಾರೆ ಎನ್ನಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಈ ಇಬ್ಬರಲ್ಲಿ ಯಾರಾದ್ರೂ ಕಣಕ್ಕಿಳಿದರೂ ಗೆಲುವು ಸುಲಭವಾಗಲಿದೆ
ಗೆಲ್ಲಿಸಿಕೊಂಡು ಬರುತ್ತೇವೆ ಎಂದು ದೇವೇಗೌಡರಿಗೆ ಹೇಳಿದ ಸಿಪಿವೈ
JDS ಅಭ್ಯರ್ಥಿ ಕಣಕ್ಕಿಳಿಸುವ ಹಿಂದಿದೆ CPY ರಾಜಕೀಯ ಲೆಕ್ಕಾಚಾರ
ರಾಮನಗರ: ಡಿಸಿಎಂ ಡಿ.ಕೆ.ಶಿವಕುಮಾರ್, ಸಂಸದ ಸುರೇಶ್ಗೆ ಟಕ್ಕರ್ ಕೊಡಲು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಅವರು ಮಾಸ್ಟರ್ ಪ್ಲಾನ್ ಮಾಡಿದ್ದಾರೆ. ಒಂದೇ ಕಲ್ಲಲ್ಲಿ ಎರಡು ಹಕ್ಕಿ ಹೊಡೆಯಲು ಮುಂದಾಗಿದ್ದಾರೆ. ಇದಕ್ಕೆ ಪೂರಕ ಎನ್ನುವಂತೆ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಟಿಕೆಟ್ BJPಗೆ ಬೇಡ. ಜೆಡಿಎಸ್ನ ಪ್ರಬಲ ಅಭ್ಯರ್ಥಿಯನ್ನ ಕಣಕ್ಕೆ ಇಳಿಸಿದ್ರೆ ಒಳ್ಳೆಯದು ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ಬಳಿ ಮನವಿ ಮಾಡಿದ್ದಾರೆ.
ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಅವರು ಫೆ.11 ರ ತಡರಾತ್ರಿ ಹೆಚ್.ಡಿ ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿ ಸತತ 2ಗಂಟೆಗಳಿಗೂ ಅಧಿಕ ಸಮಯ ರಾಜಕಾರಣದ ಬಗ್ಗೆ ಚರ್ಚೆ ಮಾಡಿದ್ದರು. ಈ ವೇಳೆ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಟಿಕೆಟ್ BJPಗೆ ಬೇಡ. ಜೆಡಿಎಸ್ನ ಪ್ರಬಲ ಅಭ್ಯರ್ಥಿಯನ್ನು ಕ್ಷೇತ್ರದಲ್ಲಿ ಘೋಷಣೆ ಮಾಡಬೇಕು. ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಕಣಕ್ಕಿಳಿದರೆ ಸೂಕ್ತ ಎಂದಿದ್ದಾರೆ. ಒಂದು ವೇಳೆ ಕುಮಾರಸ್ವಾಮಿಯವರು ಸ್ಪರ್ಧಿಸದಿದ್ದರೇ ದೇವೇಗೌಡರ ಅಳಿಯ ಡಾ.ಮಂಜುನಾಥ್ ಅವರನ್ನು ಅಖಾಡಕ್ಕೆ ಇಳಿಸಬೇಕು. ಈ ಇಬ್ಬರಲ್ಲಿ ಒಬ್ಬರು ಸ್ಪರ್ಧೆ ಮಾಡಿದರೆ ಗೆಲುವು ಸುಲಭವಾಗಬಹುದು ಎಂದಿದ್ದಾರೆ.
ಇದನ್ನು ಓದಿ: ತಡರಾತ್ರಿ ದಿಢೀರ್ ದೊಡ್ಡಗೌಡರನ್ನ ಭೇಟಿ ಮಾಡಿದ ಸಿಪಿವೈ.. 2 ಗಂಟೆಗೂ ಹೆಚ್ಚು ಕಾಲ ‘ರಹಸ್ಯ ಮಾತುಕತೆ’
ಕುಮಾರಸ್ವಾಮಿ ಅಥವಾ ಮಂಜುನಾಥ್ ಅವರು ಎಲೆಕ್ಷನ್ಗೆ ನಿಂತರೆ ಗೆಲ್ಲಿಸಿಕೊಂಡು ಬರುವ ಜವಾಬ್ದಾರಿ ಹೊರುತ್ತೇವೆ. ಯೋಗೇಶ್ವರ್ ಅವರು ಈ ರೀತಿ ಯೋಚನೆ ಮಾಡಿರುವುದರ ಹಿಂದೆ ಒಂದು ಗುಟ್ಟು ಇದೆ. ಅದೇ ಒಂದು ಕಲ್ಲಲ್ಲಿ ಎರಡು ಹಕ್ಕಿ ಹೊಡೆಯೋ ಬಿಗ್ ಪ್ಲಾನ್ ಮಾಡಿಕೊಂಡಿದ್ದಾರೆ. ಎಲೆಕ್ಷನ್ನಲ್ಲಿ ಡಿ.ಕೆ ಸುರೇಶ್ ಸೋತರೆ ಡಿ.ಕೆ.ಸಹೋದರರಿಗೆ ಮಣ್ಣು ಮುಕ್ಕಿಸಿದಂತೆ ಆಗುತ್ತದೆ. ಇನ್ನೊಂದು ಕಡೆ ಕುಮಾರಸ್ವಾಮಿ ಗೆದ್ದು ಸಂಸದನಾದರೆ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ತನಗೆ ಸಿಗುವ ವಿಶ್ವಾಸದಲ್ಲಿದ್ದಾರೆ. ಹೀಗಾಗಿಯೇ ಜೆಡಿಎಸ್ನವರಿಗೆ ಗ್ರಾಮಾಂತರ ಕ್ಷೇತ್ರಕ್ಕೆ ಸ್ಪರ್ಧಿಸಲಿ ಎಂದು ದೇವೇಗೌಡರ ಬಳಿ ಯೋಗೇಶ್ವರ್ ಅವರು ಮನವಿ ಮಾಡಿದ್ದಾರೆ ಎನ್ನಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ