ಸಿದ್ದು ಸರ್ಕಾರದ ತೀರ್ಮಾನಕ್ಕೆ ಯತ್ನಾಳ್ ಟಕ್ಕರ್; ಡಿ.ಕೆ ಶಿವಕುಮಾರ್ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಬಿಜೆಪಿ ನಾಯಕ

author-image
Ganesh
Updated On
ಸಿದ್ದು ಸರ್ಕಾರದ ತೀರ್ಮಾನಕ್ಕೆ ಯತ್ನಾಳ್ ಟಕ್ಕರ್; ಡಿ.ಕೆ ಶಿವಕುಮಾರ್ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಬಿಜೆಪಿ ನಾಯಕ
Advertisment
  • ಶಿವಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್
  • ತನಿಖೆಯನ್ನು ಹಿಂಪಡೆಯುವ ಪ್ರಸ್ತಾವನೆಗೆ ಸಂಪುಟ ಅನುಮೋದನೆ
  • ಸರ್ಕಾರದ ಕ್ರಮ ಪ್ರಶ್ನಿಸಿ ಯತ್ನಾಳ್ ಮಧ್ಯಂತರ ಅರ್ಜಿ ಸಲ್ಲಿಕೆ

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಿಬಿಐ ತನಿಖೆ ಎದುರಿಸುತ್ತಿರುವ ಡಿಸಿಎಂ ಡಿ.ಕೆ ಶಿವಕುಮಾರ್​ಗೆ ರಾಜ್ಯ ಸರ್ಕಾರ ಬಿಗ್ ರಿಲೀಫ್ ನೀಡಿದೆ. ಡಿಸಿಎಂ ಡಿ.ಕೆ ಶಿವಕುಮಾರ್​ ವಿರುದ್ಧದ ಸಿಬಿಐ ತನಿಖೆ ವಾಪಸ್ ಪಡೆಯಲು ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಸರ್ಕಾರದ ನಿರ್ಧಾರ ಸಾರ್ವಜನಿಕ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು.

ಇದೀಗ ಬಿಜೆಪಿ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಸಿದ್ದರಾಮಯ್ಯ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್​ನಲ್ಲಿ ಮಧ್ಯಂತರ ಅರ್ಜಿ ಸಲ್ಲಿಸಿದ್ದಾರೆ.

ಟ್ವೀಟ್ ಮಾಡಿದ್ದ ಯತ್ನಾಳ್..!

ಯಾವಾಗ ರಾಜ್ಯ ಸರ್ಕಾರ, ಸಿಬಿಐ ತನಿಖೆಯಿಂದ ಡಿ.ಕೆ.ಶಿವಕುಮಾರ್​ಗೆ ಮುಕ್ತಿ ನೀಡಲು ಕ್ರಮ ತೆಗೆದುಕೊಂಡಿತ್ತೋ, ಅಂದೇ ಯತ್ನಾಳ ಖಂಡಿಸಿದ್ದರು. ಅಲ್ಲದೇ ಸರ್ಕಾರದ ನಿರ್ಧಾರವನ್ನು ನಾನು ಚಾಲೆಂಜ್ ಮಾಡುತ್ತೇನೆ ಎಂದಿದ್ದರು. ಅದರಂತೆ ಇದೀಗ ಅವರು ಕೋರ್ಟ್ ಮೆಟ್ಟಿಲೇರಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment