/newsfirstlive-kannada/media/post_attachments/wp-content/uploads/2024/07/Krishna-River-2.jpg)
ರಾಯಚೂರು: ಮಹಾರಾಷ್ಟ್ರ ಸೇರಿದಂತೆ ಕೃಷ್ಣಾ ನದಿ ಪಾತ್ರದಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಈ ಹಿನ್ನೆಲೆ ಮಳೆಗೆ ಕೃಷ್ಣಾ ನದಿಗೆ ಅಡ್ಡಲಾಗಿ ಕಟ್ಟಿದ ಜಲಾಶಯಗಳು ಬಹುತೇಕ ಭರ್ತಿಯಾಗುತ್ತಿವೆ. ಅದರಂತೆಯೇ ಯಾದಗಿರಿಯ ಬಸವಸಾಗರ ಜಲಾಶಯ ಭರ್ತಿಯಾಗಲು 2 ಟಿಎಂಸಿ ನೀರು ಮಾತ್ರ ಬಾಕಿಯಿದೆ.
ಆಲಮಟ್ಟಿ ಜಲಾಶಯದಿಂದ ನಾರಾಯಣಪುರ ಜಲಾಶಯಕ್ಕೆ 65 ಸಾವಿರ ಕ್ಯೂಸೆಕ್​ ನೀರು ಒಳಹರಿವು ಹರಿದುಬರುತ್ತಿದೆ. ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ 68,920 ಕ್ಯೂ ನೀರು ಹೊರ ಹರಿವು ಹರಿದು ಬರುತ್ತಿದೆ. ಈಗಾಗಲೇ 22 ಗೇಟ್​​​ಗಳ ಮೂಲಕ ಕೃಷ್ಣಾ ನದಿಗೆ ಹೊರ ಹರಿವು ಹರಿಸಲಾಗುತ್ತಿದೆ.
/newsfirstlive-kannada/media/post_attachments/wp-content/uploads/2024/07/Almatti-1.jpg)
492.25 ಮೀ ಎತ್ತರ ಬಸವಸಾಗರ ಜಲಾಶಯದಲ್ಲಿ 491.75 ಮೀ ನೀರು ಸಂಗ್ರಹವಾಗಿದೆ. 33.313 ಟಿಎಂಸಿ ಸಾಮರ್ಥ್ಯದ ಜಲಾಶಯದಲ್ಲಿ 31.010 ಟಿಎಂಸಿ ನೀರು ಭರ್ತಿಯಾಗಿದೆ. ಜಿಲ್ಲಾಡಳಿತ ತುಂಬಿ ಹರಿಯುತ್ತಿರುವ ನದಿಪಾತ್ರಕ್ಕೆ ತೆರಳದಂತೆ ಎಚ್ಚರಿಕೆ ರವಾನಿಸಿದೆ.
/newsfirstlive-kannada/media/post_attachments/wp-content/uploads/2024/07/basava-sagar.jpg)
ಇದನ್ನೂ ಓದಿ: ಮಳೆಯ ರಣಾರ್ಭಟ.. ಇಂದು ಈ 5 ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ
ರಾಯಚೂರು ಜಿಲ್ಲೆಯ ಕೃಷ್ಣಾ ನದಿ ಪಾತ್ರದ 72 ಗ್ರಾಮಗಳಿಗೆ ಹೈ ಅಲರ್ಟ್ ಘೋಷಿಸಿದೆ. ನದಿ ಪಾತ್ರಕ್ಕೆ ಜನ, ಜಾನುವಾರು ತೆರಳದಂತೆ ಮುನ್ಸೂಚನೆ ಹೊರಡಿಸಲಾಗಿದೆ. ಮೈಕ್ ಗಳಲ್ಲಿ ಅನೌನ್ಸ್ ಮಾಡುವ ಮೂಲಕ ನದಿಪಾತ್ರದ ಜನರಿಗೆ ಜಾಗೃತಿ ಮೂಡಿಸಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us