/newsfirstlive-kannada/media/post_attachments/wp-content/uploads/2024/10/Yamuna-1.jpg)
ಬಿಗ್ ಬಾಸ್ ಕನ್ನಡ ಸೀಸನ್ 11 ಮೊದಲ ವಾರದ ಪೂರ್ತಿಗೊಂಡು ಮುನ್ನುಗ್ಗುತ್ತಿದೆ. ಮೊದಲ ವಾರ ನಟಿ ಯಮುನಾ ಮನೆಯಿಂದ ಹೊರಬಂದಿದ್ದಾರೆ. ಹೊರ ಬಂದ ಬಳಿಕ ನ್ಯೂಸ್ಫಸ್ಟ್ ಜೊತೆಗೆ ಮಾತನಾಡಿದ್ದಾರೆ. ಹಲವು ಸಂಗತಿಯನ್ನು ಬಿಚ್ಚಿಟ್ಟಿದ್ದಾರೆ.
ಬಿಗ್ ಬಾಸ್ ಮನೆಯಲ್ಲಿ ತುಂಬಾ ಡೇಂಜರಸ್ ವ್ಯಕ್ತಿಯ ಬಗ್ಗೆಯೂ ನಟಿ ಯಮುನಾ ಹೇಳಿದ್ದಾರೆ. ಲಾಯರ್ ಜಗದೀಶ್ಗಿಂತ ಉಗ್ರಂ ಮಂಜು ತುಂಬಾ ಡೇಂಜರಸ್ ಎಂದು ಹೇಳಿದ್ದಾರೆ. ಸಿಕ್ಕಪಟ್ಟೆ ಮ್ಯಾನಿಪುಲೇಟ್, ಎಲ್ಲರನ್ನು ತಮ್ಮತ್ತ ಸೆಳೆಯುವವರು. ಏನು ಹೇಳದೆ ಏನು ಮಾಡದೆ ಟ್ರಿಕ್ ಮಾಡುವವರು ಎಂದು ಹೇಳಿದ್ದಾರೆ.
ಇದನ್ನೂ ಓದಿ: BBK11: ಬಿಗ್ ಬಾಸ್ ಮನೆಯಲ್ಲಿ ಭವ್ಯ ಸಮಯದ ಗೊಂಬೆ ಎಂದ ಐಶ್ವರ್ಯಾ! ಕಣ್ಣೀರು ಹಾಕಿದ ಗೀತಾ
ಸದ್ಯ ಮೊದಲ ವಾರವೇ ನಟಿ ಹೊರಬಂದಿದ್ದು, ಬಿಗ್ ಮನೆಯ ಆಟಗಾರರ ಬಗ್ಗೆ ಮನಬಿಚ್ಚಿ ಹೇಳಿದ್ದಾರೆ, ಅದರಲ್ಲೂ ಆಟವನ್ನು ಇನ್ನೂ ಪ್ರಾರಂಭಿಸದವರು ಮತ್ತು ಪ್ರಾರಂಭಿಸಿದವರ ಬಗ್ಗೆಯೂ ಹೇಳಿದ್ದಾರೆ. ಲಾಯರ್ ಜಗದೀಶ್ ಮೊದಲ ದಿನದಿಂದಲೇ ಆಟ ಶುರು ಮಾಡಿದ್ದಾರೆಂದು ಹೇಳಿದ್ದಾರೆ.
ಇದನ್ನೂ ಓದಿ: ಬಿಗ್ಬಾಸ್ಗೆ ಬಿಗ್ ಶಾಕ್; ದೊಡ್ಮನೆಗೆ ಮಹಿಳಾ ಆಯೋಗ ಎಂಟ್ರಿ? ಬದಲಾಗುತ್ತಾ ಆಟದ ಶೈಲಿ?
ಇನ್ನು ಕೀರ್ತಿ ಧರ್ಮರಾಜ್ ಮತ್ತು ಧನ್ರಾಜ್ ಆಚಾರ್ ಆಟ ಶುರು ಮಾಡಬೇಕಿದೆ ಎಂದು ಹೇಳಿದ್ದಾರೆ. ಒಟ್ಟಿನಲ್ಲಿ ಕಿಚ್ಚ ನಿರೂಪಣೆಗೆ ಬಿಗ್ ಬಾಸ್ ಮನೆಯಲ್ಲಿ ಒಂದು ವಾರ ಕಳೆದ ಅನುಭವವನ್ನು ನಟಿ ಯಮುನಾ ಬಿಚ್ಚಿಟ್ಟಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ