ಸೋತ ಬೆನ್ನಲ್ಲೇ ಬುದ್ಧಿ ಕಲಿತ ಸೆಲೆಕ್ಷರ್ಸ್​​​; ಕನ್ನಡಿಗ KL ​​ರಾಹುಲ್​ ಕಾಲು ಹಿಡಿದ ಬಿಸಿಸಿಐ

author-image
Ganesh Nachikethu
Updated On
ಟೀಮ್​ ಇಂಡಿಯಾಗೆ ಯುವ ಬ್ಯಾಟರ್​ ಎಂಟ್ರಿ; ಸ್ಥಾನಕ್ಕಾಗಿ KL ರಾಹುಲ್ ಜತೆ ತೀವ್ರ ಪೈಪೋಟಿ
Advertisment
  • ಟೀಮ್​ ಇಂಡಿಯಾಗೆ ಬ್ಯಾಕ್​ ಟು ಬ್ಯಾಕ್​ ಹೀನಾಯ ಸೋಲು!
  • ಹೀನಾಯ ಸೋಲಿನ ಬೆನ್ನಲ್ಲೇ ಬುದ್ಧಿ ಕಲಿತ ಟೀಮ್​ ಇಂಡಿಯಾ
  • ಕನ್ನಡಿಗ ಕೆ.ಎಲ್​ ರಾಹುಲ್​​ಗೆ ಮಹತ್ವದ ಸೂಚನೆ ಕೊಟ್ಟ ಬಿಸಿಸಿಐ

ಬರೋಬ್ಬರಿ 24 ವರ್ಷಗಳ ಬಳಿಕ ಟೆಸ್ಟ್​ ಸರಣಿಯಲ್ಲಿ ತವರಿನಲ್ಲೇ ಭಾರತ ತಂಡವನ್ನು ನ್ಯೂಜಿಲೆಂಡ್​​ 3-0 ಅಂತರದಿಂದ ಸೋಲಿಸಿ ದಾಖಲೆ ನಿರ್ಮಿಸಿದೆ. 3 ಪಂದ್ಯಗಳಲ್ಲೂ ಹೀನಾಯವಾಗಿ ಸೋತ ಭಾರತ ಮೊದಲ ಬಾರಿಗೆ ವೈಟ್​ವಾಶ್​ ಆಗಿದೆ. 1969ರ ನಂತರ ಟೀಮ್ ಇಂಡಿಯಾ ತವರಿನಲ್ಲಿ ಒಂದೇ ವರ್ಷದಲ್ಲಿ ಅತಿ ಹೆಚ್ಚು ಟೆಸ್ಟ್‌ ಪಂದ್ಯಗಳು ಸೋತಿರುವುದು ಇದೇ ಮೊದಲು.

ಇತ್ತೀಚೆಗೆ ಮುಂಬೈನ ವಾಂಖೆಡೆ ಇಂಟರ್​ ನ್ಯಾಷನಲ್​ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆದ ಕೊನೆಯ ಟೆಸ್ಟ್​​ ಪಂದ್ಯದಲ್ಲಿ ನ್ಯೂಜಿಲೆಂಡ್​​ ವಿರುದ್ಧ ಟೀಮ್​ ಇಂಡಿಯಾ 25 ರನ್​ಗಳಿಂದ ಸೋತಿದೆ. ನ್ಯೂಜಿಲೆಂಡ್​ ನೀಡಿದ 147 ರನ್​​ಗಳ ಗುರಿ ಬೆನ್ನತ್ತಿದ ಟೀಮ್​ ಇಂಡಿಯಾ 29.1 ಓವರ್​​ಗಳಲ್ಲಿ ಕೇವಲ 121 ರನ್​​ಗಳಿಗೆ ಆಲೌಟ್​​ ಆಗಿ ಸೋತಿರುವುದು ಭಾರೀ ಮುಖಭಂಗವಾಗಿದೆ.

ಇನ್ನು, ಟೀಮ್​ ಇಂಡಿಯಾ ಪರ ಏಕಾಂಗಿ ಹೋರಾಟ ನಡೆಸಿದ ಸ್ಟಾರ್​ ವಿಕೆಟ್​ ಬ್ಯಾಟರ್​​ ರಿಷಬ್​ ಪಂತ್​​. ಬರೋಬ್ಬರಿ 64 ರನ್​ ಸಿಡಿಸಿ ಟೀಮ್​ ಇಂಡಿಯಾ ಪಡೆಯಲ್ಲಿ ಗೆಲುವಿನ ವಿಶ್ವಾಸ ಮೂಡಿಸಿದ್ರು. ಆದರೆ, ಇವರು ಔಟ್​​ ಆದ ಕಾರಣ ಭಾರತ ಸೋಲಬೇಕಾಯ್ತು. ಭಾರತ ತಂಡದ ಬ್ಯಾಟರ್​​ಗಳು ನ್ಯೂಜಿಲೆಂಡ್​​ ಬೌಲರ್​​​ಗಳ ವಿರುದ್ಧ ಹೀನಾಯ ಪ್ರದರ್ಶನ ನೀಡಿದ್ರು.

ಟೀಮ್​ ಇಂಡಿಯಾಗೆ ಕೈ ಕೊಟ್ಟ ಸರ್ಫರಾಜ್​ ಖಾನ್​​

ಬೆಂಗಳೂರಲ್ಲಿ ನಡೆದ ಮೊದಲ ಟೆಸ್ಟ್​​ ಮೊದಲ ಇನ್ನಿಂಗ್ಸ್​ನಲ್ಲಿ 150 ರನ್​​ ಸಿಡಿಸಿ ಭಾರೀ ಸದ್ದು ಮಾಡಿದ್ದ ಸರ್ಫರಾಜ್​ ಖಾನ್​ ಟೀಮ್​ ಇಂಡಿಯಾಗೆ ಕೈ ಕೊಟ್ಟರು. ಕೊನೆ ಟೆಸ್ಟ್​ ಪಂದ್ಯದಲ್ಲಿ ಸರ್ಫರಾಜ್​ ಖಾನ್​ ಶೂನ್ಯಕ್ಕೆ ವಿಕೆಟ್​ ಒಪ್ಪಿಸಿದ್ರು. ಕಳೆದ ಮೂರು ಇನ್ನಿಂಗ್ಸ್​ನಲ್ಲಿ ಸರ್ಫರಾಜ್​ ಖಾನ್​ 11(24), 9(15), 0(4) ಗಳಿಸೋ ಮೂಲಕ ಕಳಪೆ ಪ್ರದರ್ಶನ ನೀಡಿದ್ರು.

ಕೇವಲ ಒಂದು ಪಂದ್ಯದಲ್ಲಿ ಸರಿಯಾಗಿ ಆಡದಿದ್ದಕ್ಕೆ ಕೆ.ಎಲ್​ ರಾಹುಲ್​ ಅವರನ್ನು 2 ಪಂದ್ಯಗಳಿಂದ ಬೆಂಚ್​​ ಕಾಯಿಸಲಾಗಿದೆ. ಇವರ ಬದಲಿಗೆ ಸರ್ಫರಾಜ್​ ಖಾನ್​ ಅವರಿಗೆ ಅವಕಾಶ ನೀಡಲಾಗಿದೆ. ಈಗ ಸರ್ಫರಾಜ್​ ಖಾನ್​ ಸಂಪೂರ್ಣ ಬ್ಯಾಟಿಂಗ್​ನಲ್ಲಿ ವೈಫಲ್ಯರಾಗಿದ್ದು, ಕೆ.ಎಲ್​ ರಾಹುಲ್​​ ಅವರನ್ನು ಕೈ ಬಿಟ್ಟು ಭಾರತ ಕ್ರಿಕೆಟ್​ ತಂಡ ತಪ್ಪು ಮಾಡಿದ್ಯಾ? ಅನ್ನೋ ಪ್ರಶ್ನೆಗಳು ಕೇಳಿ ಬಂದಿವೆ.

ಬಾರ್ಡರ್ ಗವಾಸ್ಕರ್ ಟ್ರೋಫಿ

ನವೆಂಬರ್ 22ನೇ ತಾರೀಕಿನಿಂದ ಆಸ್ಟ್ರೇಲಿಯಾ ವಿರುದ್ಧ ಟೀಮ್​ ಇಂಡಿಯಾ 5 ಪಂದ್ಯಗಳ ಟೆಸ್ಟ್​ ಸರಣಿ ಆಡಲಿದೆ. ಕಳೆದ ಎರಡು ಆಸ್ಟ್ರೇಲಿಯಾ ಪ್ರವಾಸಗಳಲ್ಲಿ ಭಾರತ ಟ್ರೋಪಿ ಗೆದ್ದಿತ್ತು. 2016 ರಿಂದಲೂ ಟೀಮ್​ ಇಂಡಿಯಾ ಬಾರ್ಡರ್ ಗವಾಸ್ಕರ್ ಟ್ರೋಫಿ ಗೆಲ್ಲುತ್ತಲೇ ಬಂದಿದೆ. ಟೀಮ್​ ಇಂಡಿಯಾ ಈಗಿರೋ ಪರಿಸ್ಥಿತಿ ನೋಡಿದ್ರೆ ಗೆಲ್ಲೋದು ಕಷ್ಟವಾಗಿದೆ. ಆಸೀಸ್ ಸರಣಿಗೆ ಆಟಗಾರರನ್ನು ಸಜ್ಜುಗೊಳಿಸಲು ಸಿದ್ಧತೆ ಆರಂಭಿಸಿರೋ ಬಿಸಿಸಿಐ ಸರ್ಫರಾಜ್​ ಖಾನ್​ ಅವರನ್ನು ಕೈ ಬಿಡಲು ಮುಂದಾಗಿದೆ.

ಕೆ.ಎಲ್​ ರಾಹುಲ್​ಗೆ ಸುವರ್ಣಾವಕಾಶ

ಆಸೀಸ್​ ಪ್ರವಾಸದಲ್ಲಿ ಸರ್ಫರಾಜ್ ಖಾನ್ ಬದಲಿಗೆ ಅನುಭವಿ ರಾಹುಲ್ ಅತ್ಯುತ್ತಮ ಆಯ್ಕೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಹೀಗಾಗಿ ಬಿಸಿಸಿಐ ಕನ್ನಡಿಗ ಕೆ.ಎಲ್​ ರಾಹುಲ್​ಗೆ ಮಹತ್ವದ ಸೂಚನೆ ಕೊಟ್ಟಿದೆ. ನಾಡಿದ್ದು ಎಂದರೆ ನವೆಂಬರ್ 7ನೇ ತಾರೀಕಿನಿಂದ ಆಸ್ಟ್ರೇಲಿಯಾ-ಎ ಹಾಗೂ ಭಾರತ-ಎ ನಡುವೆ 2ನೇ ಅನಧಿಕೃತ ಟೆಸ್ಟ್ ಆಡಲಿದೆ. ಈ ನಾಲ್ಕು ದಿನಗಳ ಪಂದ್ಯದಲ್ಲಿ ಕೆಎಲ್ ರಾಹುಲ್ ಆಡಬೇಕು ಎಂದು ಬಿಸಿಸಿಐ ಸೂಚನೆ ನೀಡಿದೆ.

ಸೋತ ಮೇಲೆ ಬುದ್ಧಿ ಕಲಿತ ಬಿಸಿಸಿಐ

ಬ್ಯಾಕ್​ ಟು ಬ್ಯಾಕ್​ ಸೋತ ಬಳಿಕ ಬಿಸಿಸಿಐ ಸೆಲೆಕ್ಟರ್ಸ್​ ಬುದ್ಧಿ ಕಲಿತಿದ್ದಾರೆ. ಕೇವಲ ಒಂದು ಪಂದ್ಯದ ಪ್ರದರ್ಶನ ನೋಡಿ ಯಾರಿಗೂ ಮಣೆ ಹಾಕಬಾರ್ದು ಎನ್ನುವ ನಿರ್ಧಾರಕ್ಕೆ ಬಿಸಿಸಿಐ ಬಂದಿದೆ. ಕೆ.ಎಲ್​ ರಾಹುಲ್​​ ಅವರನ್ನು ಆಸ್ಟ್ರೇಲಿಯಾ ಪ್ರವಾಸಕ್ಕೆ ರೆಡಿ ಆಗುವಂತೆ ಬಿಸಿಸಿಐ ಸೂಚನೆ ಕೊಟ್ಟಿದ್ದು,  ಸರ್ಫರಾಜ್​ ಖಾನ್​ ಅವರನ್ನು ಕೈ ಬಿಟ್ಟಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment