/newsfirstlive-kannada/media/post_attachments/wp-content/uploads/2024/11/SANJU_SAMSON-2.jpg)
ಬಹುನಿರೀಕ್ಷಿತ ಐಸಿಸಿ ಚಾಂಪಿಯನ್ಸ್ ಟ್ರೋಫಿ 2025ರ ಟೂರ್ನಿ ಈಗಾಗಲೇ ಶುರುವಾಗಿದೆ. ಟೀಮ್ ಇಂಡಿಯಾದಿಂದ ಸ್ಟಾರ್ ವಿಕೆಟ್ ಕೀಪರ್ ರಿಷಬ್ ಪಂತ್ ಹೊರಬಿದ್ದಿದ್ದಾರೆ. ಈಗ ಇವರ ಜಾಗಕ್ಕೆ ಸಂಜು ಸ್ಯಾಮ್ಸನ್ ಬರೋದು ಬಹುತೇಕ ಕನ್ಫರ್ಮ್ ಆಗಿದೆ.
ಕಳೆದ ವರ್ಷ ನವೆಂಬರ್ನಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ಸಂಜು ಸ್ಯಾಮ್ಸನ್ ಬ್ಯಾಕ್ ಟು ಬ್ಯಾಕ್ 2 ಶತಕ ಚಚ್ಚಿದ್ರು. ಈ ಮೂಲಕ ಅಮೋಘ ಪ್ರದರ್ಶನ ನೀಡಿದ್ರು. ಫಾರ್ಮ್ನಲ್ಲಿದ್ರೂ ಸಂಜು ಚಾಂಪಿಯನ್ಸ್ ಟ್ರೋಫಿ ತಂಡದಲ್ಲಿ ಅವಕಾಶ ಪಡೆಯುವಲ್ಲಿ ವಿಫಲವಾಗಿದ್ದರು. ಇವರ ಬದಲಿಗೆ ಟೀಮ್ ಇಂಡಿಯಾ ಚಾಂಪಿಯನ್ಸ್ ಟ್ರೋಫಿಗೆ ರಿಷಬ್ ಪಂತ್ ಆಯ್ಕೆ ಆಗಿದ್ದರು.
ಸಂಜು ಸ್ಯಾಮ್ಸನ್ಗೆ ಬಿಸಿಸಿಐ ಬುಲಾವ್
ಈಗ ಪಂತ್ ಕಾಲಿಗೆ ಇಂಜುರಿ ಆಗಿದ್ದು, ಸಂಜು ಸ್ಯಾಮ್ಸನ್ಗೆ ಬಿಸಿಸಿಐ ಬುಲಾವ್ ನೀಡಿದೆ ಎಂದು ತಿಳಿದು ಬಂದಿದೆ. ಹೀಗಾಗಿ ಪಾಕಿಸ್ತಾನ ವಿರುದ್ಧದ ಪಂದ್ಯಕ್ಕೂ ಮುನ್ನವೇ ಸಂಜು ಸ್ಯಾಮ್ಸನ್ ಟೀಮ್ ಇಂಡಿಯಾ ಸೇರಿಕೊಳ್ಳಲಿದ್ದಾರೆ ಎನ್ನಲಾಗಿದೆ.
ಈ ಹಿಂದೆ ಸಂಜು ಸ್ಯಾಮ್ಸನ್ ಚಾಂಪಿಯನ್ಸ್ ಟ್ರೋಫಿ ತಂಡದಿಂದ ಹೊರಗುಳಿದಿದ್ದರು. ಇದಕ್ಕೆ ಸಂಜು ಸ್ಯಾಮ್ಸನ್ ಮಾಡಿದ ಎಡವಟ್ಟು ಕಾರಣ ಆಗಿತ್ತು. ಈ ವಿಚಾರವಾಗಿ ಕೇರಳ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷ ಜಯೇಶ್ ಜಾರ್ಜ್ ಸಂಜು ಸ್ಯಾಮ್ಸನ್ ಅವರನ್ನು ಟೀಕಿಸಿದ್ದರು. ಈಗ ಮತ್ತೆ ಟೀಮ್ ಇಂಡಿಯಾ ಪರ ಚಾಂಪಿಯನ್ಸ್ ಟ್ರೋಫಿಯಲ್ಲಿ ಆಡುವ ಸಿಕ್ಕಿದ್ದು, ಸಂಜು ಸದ್ಬಳಕೆ ಮಾಡಿಕೊಳ್ಳಬೇಕಿದೆ.
ವಿಶೇಷ ಸೂಚನೆ: ಕ್ರಿಕೆಟ್ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ