/newsfirstlive-kannada/media/post_attachments/wp-content/uploads/2024/11/Gambhir-Kohli.jpg)
ಇತ್ತೀಚೆಗೆ ನಡೆದ ಬಾರ್ಡರ್-ಗವಾಸ್ಕರ್ ಸರಣಿಯಲ್ಲಿ ಟೀಮ್ ಇಂಡಿಯಾ ಹೀನಾಯ ಸೋಲು ಕಂಡಿದೆ. ಭಾರತದ ಈ ಸೋಲು ಕ್ರಿಕೆಟ್ ವಲಯದಲ್ಲಿ ಬಿರುಗಾಳಿಯನ್ನೇ ಎಬ್ಬಿಸಿದೆ. ಆಟಗಾರರ ಪರ್ಫಾಮೆನ್ಸ್, ರೋಹಿತ್ ಶರ್ಮಾ ನಾಯಕತ್ವ, ಕೋಚ್ ಗಂಭೀರ್ ನಿರ್ಧಾರಗಳ ಬಗ್ಗೆ ಚರ್ಚೆ ಎದ್ದಿತ್ತು. ಇದ್ರ ಬೆನ್ನಲ್ಲೇ ಬಿಸಿಸಿಐ ಬಾಸ್ಗಳು ರಿವ್ಯೂ ಮೀಟಿಂಗ್ಗೆ ಬುಲಾವ್ ನೀಡಿದ್ರು. ಕುತೂಹಲ ಕೆರಳಿಸಿದ್ದ ಹೈವೋಲ್ಟೆಜ್ ಮೀಟಿಂಗ್ ಬಿಸಿಸಿಐ ಹೆಡ್ ಕ್ವಾಟರ್ಸ್ನಲ್ಲಿ ನಡೆದಿದೆ. ಬಿಸಿಸಿಐ ಬಾಸ್ಗಳು, ಸೆಲೆಕ್ಟರ್ಸ್, ಕ್ಯಾಪ್ಟನ್ ರೋಹಿತ್ ಶರ್ಮಾ, ಕೋಚ್ ಗೌತಮ್ ಗಂಭೀರ್ ಭಾಗಿಯಾಗಿದ್ದ ಸಭೆಯಲ್ಲಿ ಪ್ರಮುಖ ವಿಚಾರಗಳ ಚರ್ಚೆಯಾಗಿದೆ.
ರೋಹಿತ್ ಶರ್ಮಾ ಭವಿಷ್ಯವೇನು? ವಿರಾಟ್ ಕೊಹ್ಲಿಯನ್ನ ಡ್ರಾಪ್ ಮಾಡ್ಬೇಕಾ? ಹೀಗೆ ಹಲವಾರು ಪ್ರಶ್ನೆಗಳು ಆಸ್ಟ್ರೇಲಿಯಾ ವಿರುದ್ಧ ಸರಣಿ ಸೋಲಿನ ಬಳಿಕ ಎದ್ದಿದ್ದವು. ಈ ಎಲ್ಲ ಮಹತ್ವದ ವಿಚಾರಗಳ ಬಗ್ಗೆ ಬಿಸಿಸಿಐ ಹೆಡ್ಕ್ವಾಟರ್ಸ್ನಲ್ಲಿ ನಡೆದ ಹೈವೋಲ್ಟೆಜ್ ಸಭೆಯಲ್ಲಿ ಚರ್ಚೆ ನಡೆದಿದೆ. ಬಿಸಿಸಿಐ ಬಾಸ್ಗಳ ಖಡಕ್ ಪ್ರಶ್ನೆಗಳಿಗೆ, ರೋಹಿತ್-ಗಂಭೀರ್ ಆನ್ಸರ್ ಕೊಟ್ಟಿದ್ದಾರೆ.
ಕೊಹ್ಲಿಗೆ ಚಾಂಪಿಯನ್ಸ್ ಟ್ರೋಫಿಯೇ ಲಾಸ್ಟ್ ಚಾನ್ಸ್.!
ಕಳಪೆ ಫಾರ್ಮ್ನ ಸುಳಿಗೆ ಸಿಲುಕಿರುವ ವಿರಾಟ್ ಕೊಹ್ಲಿ ಭವಿಷ್ಯದ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆದಿದೆ. ಕೊಹ್ಲಿ ಡ್ರಾಪ್ ಮಾಡೋದ್ರ ಬಗ್ಗೆ ಪರ-ವಿರೋಧದ ಚರ್ಚೆ ನಡೆದಿದೆ. ಅಂತಿಮವಾಗಿ ಚಾಂಪಿಯನ್ಸ್ ಟ್ರೋಫಿ ಟೂರ್ನಿ ಅಂತ್ಯದ ಬಳಿಕ ಕೊಹ್ಲಿ ಭವಿಷ್ಯವನ್ನ ನಿರ್ಧರಿಸಲು ತೀರ್ಮಾನಿಸಲಾಗಿದೆ. ಚಾಂಪಿಯನ್ಸ್ ಟ್ರೋಫಿ ಟೂರ್ನಿಯ ಪರ್ಫಾಮೆನ್ಸ್ ಮೇಲೆ ಕೊಹ್ಲಿ ಭವಿಷ್ಯ ನಿರ್ಧಾರವಾಗಲಿದೆ.
ಟೀಮ್ ಇಂಡಿಯಾ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಭವಿಷ್ಯದ ಬಗ್ಗೆ ಬಿಸಿಸಿಐ ಗಂಭೀರ ಚಿಂತನೆ ನಡೆಸಿದೆ. ನ್ಯೂಜಿಲೆಂಡ್ ಹಾಗೂ ಆಸ್ಟ್ರೇಲಿಯಾ ವಿರುದ್ಧ ನಡೆದ ಟೆಸ್ಟ್ ಸರಣಿಯಲ್ಲಿ ಸ್ಥಿರ ಪ್ರದರ್ಶನ ನೀಡುವಲ್ಲಿ ಇವರು ವಿಫಲರಾಗಿದ್ರು. ಹಾಗಾಗಿ ಕೊಹ್ಲಿ ಭವಿಷ್ಯದ ಬಗ್ಗೆ ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಮತ್ತು ಕೋಚ್ ಗೌತಮ್ ಗಂಭೀರ್ ಚರ್ಚೆ ನಡೆಸಿದ್ದಾರೆ. ಚಾಂಪಿಯನ್ಸ್ ಟ್ರೋಫಿಯಲ್ಲಿ ಅಬ್ಬರಿಸದೇ ಇದ್ದರೆ ಇವರ ಕ್ರಿಕೆಟ್ ಕರಿಯರ್ ಅಂತ್ಯವಾಗಲಿದೆ.
ಕೊಹ್ಲಿ ಆಸ್ಟ್ರೇಲಿಯಾ ಪ್ರವಾಸದಲ್ಲಿ ರನ್ ಕಲೆ ಹಾಕುವಲ್ಲಿ ವಿಫಲರಾಗಿದ್ದರು. ಇವರು ಪರ್ತ್ನಲ್ಲಿ ಶತಕ ಬಾರಿಸಿದ್ದು ಬಿಟ್ಟರೆ ಉಳಿದೆಲ್ಲಾ ಪಂದ್ಯಗಳಲ್ಲಿ ಮೌನಕ್ಕೆ ಶರಣಾಗಿದ್ದರು. ಕೊಹ್ಲಿ ಆಡಿದ 5 ಟೆಸ್ಟ್ ಪಂದ್ಯಗಳಲ್ಲಿ 190 ರನ್ ಕಲೆ ಹಾಕಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ