/newsfirstlive-kannada/media/post_attachments/wp-content/uploads/2025/04/BCCI.jpg)
ಬಾರ್ಡರ್ ಗವಾಸ್ಕರ್ ಟ್ರೋಫಿಯಲ್ಲಿ ಹೀನಾಯ ಸೋಲು ಕಂಡ ಪರಿಣಾಮ ಬಿಸಿಸಿಐ ತನ್ನ ಸಹಾಯಕ ಕೋಚ್ಗಳ ಮೇಲೆ ಸಿಟ್ಟು ತೀರಿಸಿಕೊಂಡಿದೆ. ಸಹಾಯಕ ಕೋಚ್ ಅಭಿಷೇಕ್ ನಾಯರ್ ಹಾಗೂ ಫೀಲ್ಡಿಂಗ್ ಕೋಚ್ ಟಿ.ದಿಲೀಪ್ ಸೇರಿ ಹಲವರಿಗೆ ಗೇಟ್ಪಾಸ್ ನೀಡಿದೆ.
ಟೀಂ ಇಂಡಿಯಾದಲ್ಲಿದ್ದ ಕೆಲವು ಸಪೋರ್ಟಿಂಗ್ ಸ್ಟಾಫ್ಗೆ ಬೈಬೈ ಹೇಳಿದೆ. ಕೆಲವು ತಿಂಗಳ ಹಿಂದಷ್ಟೇ ಟೀಂ ಇಂಡಿಯಾದ ಸಹಾಯ ಕೋಚ್ ಆಗಿ ಅಭಿಷೇಕ್ ನಾಯರ್ ನೇಮಕ ಮಾಡಿಕೊಂಡಿತ್ತು. ಇದೀಗ ಅವರಿಗೂ ಕೊಕ್ ನೀಡಿದೆ. ಅಲ್ಲದೇ ಜನಪ್ರಿಯ ಫೀಲ್ಡಿಂಗ್ ಕೋಚ್ ಟಿ.ದಿಲೀಪ್, ಕಂಡಿಷನಿಂಗ್ ಕೋಚ್ ಸೋಹಮ್ ದೇಸಾಯಿ ಅವರನ್ನೂ ಕೈಬಿಟ್ಟಿದೆ.
ಇದನ್ನೂ ಓದಿ: ಸೂಪರ್ ಓವರ್ನಲ್ಲಿ ಪಂದ್ಯ ಗೆಲ್ಲಿಸಿಕೊಟ್ಟ ಕನ್ನಡಿಗ ಕೆಎಲ್ ರಾಹುಲ್..!
ರಾಹುಲ್ ದ್ರಾವಿಡ್ ಕೋಚ್ ಅವಧಿ ಮುಗಿದ ಬೆನ್ನಲ್ಲೇ ಬಿಸಿಸಿಐ, ಟೀಂ ಇಂಡಿಯಾಗೆ ಹೊಸ ಕೋಚ್ ನೇಮಕ ಮಾಡಿಕೊಂಡಿದೆ. ಟೀಂ ಇಂಡಿಯಾದ ಮಾಜಿ ಆಟಗಾರ ಗೌತಮ್ ಗಂಭೀರ್ ಅವರನ್ನು ಮುಖ್ಯ ಕೋಚ್ ಆಗಿ ನೇಮಿಸಿಕೊಂಡಿದೆ. ಗಂಭೀರ್ ಜವಾಬ್ದಾರಿ ವಹಿಸಿಕೊಂಡ ಬೆನ್ನಲ್ಲೇ, ಸಪೋರ್ಟಿಂಗ್ ಟೀಂನಲ್ಲಿ ಸಾಕಷ್ಟು ಬದಲಾವಣೆ ಮಾಡಿದ್ದರು. ಐಪಿಎಲ್ ಫ್ರಾಂಚೈಸಿಯ ಕೋಲ್ಕತ್ತ ನೈಟ್ ರೈಡರ್ಸ್ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ನಾಯರ್, ರಿಯಾನ್ ಟೇನ್, ಡೊಸ್ಚೇಟ್ ಮತ್ತು ಮೊರ್ನೆ ಮೊರ್ಕೆಲ್ ಅವರನ್ನು ಸೇರಿಕೊಂಡಿದ್ದರು.
ಇದನ್ನೂ ಓದಿ: ಮೂವರು ಬಿಗ್ ಸ್ಟಾರ್ ಮೇಲೆ RCB ಟಾರ್ಗೆಟ್.. ಇಲ್ಲದಿದ್ರೆ ಪಂಜಾಬ್ ವಿರುದ್ಧ ಗೆಲುವು ಕಷ್ಟ..!
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್