ಕರಡಿ ದಾಳಿಯಿಂದ ಇಬ್ಬರು ರೈತರಿಗೆ ಗಾಯ, ಆಸ್ಪತ್ರೆಗೆ ದಾಖಲು
ಶಿಗ್ಗಾಂವಿ ತಾಲೂಕಿನ ಬಸವನಕಟ್ಟಿ ಗ್ರಾಮದಲ್ಲಿ ನಡೆದ ಘಟನೆ
ಜಮೀನು ಕೆಲಸಕ್ಕೆಂದು ತೆರಳಿದ್ದ ವೇಳೆ ಕರಡಿ ಡೆಡ್ಲಿ ಅಟ್ಯಾಕ್
ಹಾವೇರಿ: ಕರಡಿ ದಾಳಿಯಿಂದ ಇಬ್ಬರು ರೈತರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಶಿಗ್ಗಾಂವಿ ತಾಲೂಕಿನ ಬಸವನಕಟ್ಟಿ ಗ್ರಾಮದ ಬಳಿ ಸಂಭವಿಸಿದೆ. ಬಸೀರ್ ಸಾಬ್ ಸವದತ್ತಿ (45), ರಜಾಕ್ (30) ದಾಳಿಗೊಳಗಾದ ರೈತರು.
ಜಮೀನಿನಲ್ಲಿ ಕೆಲಸ ಮಾಡಲೆಂದು ತೆರಳಿದ್ದ ಇಬ್ಬರು ರೈತರ ಮೇಲೆ ಕರಡಿ ದಾಳಿ ನಡೆಸಿದೆ. ದಾಳಿಗೊಳಗಾದ ಇಬ್ಬರು ರೈತರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಘಟನಾ ಸ್ಥಳಕ್ಕೆ ಶಿಗ್ಗಾಂವಿ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಕರಡಿ ದಾಳಿಯಿಂದ ಇಬ್ಬರು ರೈತರಿಗೆ ಗಾಯ, ಆಸ್ಪತ್ರೆಗೆ ದಾಖಲು
ಶಿಗ್ಗಾಂವಿ ತಾಲೂಕಿನ ಬಸವನಕಟ್ಟಿ ಗ್ರಾಮದಲ್ಲಿ ನಡೆದ ಘಟನೆ
ಜಮೀನು ಕೆಲಸಕ್ಕೆಂದು ತೆರಳಿದ್ದ ವೇಳೆ ಕರಡಿ ಡೆಡ್ಲಿ ಅಟ್ಯಾಕ್
ಹಾವೇರಿ: ಕರಡಿ ದಾಳಿಯಿಂದ ಇಬ್ಬರು ರೈತರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಶಿಗ್ಗಾಂವಿ ತಾಲೂಕಿನ ಬಸವನಕಟ್ಟಿ ಗ್ರಾಮದ ಬಳಿ ಸಂಭವಿಸಿದೆ. ಬಸೀರ್ ಸಾಬ್ ಸವದತ್ತಿ (45), ರಜಾಕ್ (30) ದಾಳಿಗೊಳಗಾದ ರೈತರು.
ಜಮೀನಿನಲ್ಲಿ ಕೆಲಸ ಮಾಡಲೆಂದು ತೆರಳಿದ್ದ ಇಬ್ಬರು ರೈತರ ಮೇಲೆ ಕರಡಿ ದಾಳಿ ನಡೆಸಿದೆ. ದಾಳಿಗೊಳಗಾದ ಇಬ್ಬರು ರೈತರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಘಟನಾ ಸ್ಥಳಕ್ಕೆ ಶಿಗ್ಗಾಂವಿ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ