200 ಯೂನಿಟ್ಗಿಂತ ಹೆಚ್ಚು ವಿದ್ಯುತ್ ಬಳಸಿದ್ರೆ ಬಿಲ್ ಕಟ್ಟಲೇಬೇಕು
ಬಿಲ್ ನಾವು ಜಾಸ್ತಿ ಮಾಡಿಲ್ಲ, ಹಿಂದಿನ ಬಿಜೆಪಿ ಸರ್ಕಾರ ಹೆಚ್ಚಿಸಿತ್ತು-ಜಾರ್ಜ್
ರಾಜ್ಯದಲ್ಲಿ ಮುಂಗಾರು ಮಳೆ ತಡವಾಗಿದೆ ಅಷ್ಟೇ.. ಬಂದೇ ಬರುತ್ತದೆ
ಬಳ್ಳಾರಿ: ಗೃಹಜ್ಯೋತಿ ಯೋಜನೆಯನ್ನು ಜುಲೈಯಿಂದ ಅನುಷ್ಠಾನ ಮಾಡಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ನಾವು ನೀಡಿದ ಆಶ್ವಾಸನೆಯಂತೆ ಜನರಿಗೆ ಉಚಿತ ವಿದ್ಯುತ್ ನೀಡುತ್ತೇವೆ. 200 ಯೂನಿಟ್ಗಿಂತ ಹೆಚ್ಚು ವಿದ್ಯುತ್ ಬಳಸಿದ್ರೆ ಅದಕ್ಕೆ ಬಿಲ್ ಪಾವತಿಸಬೇಕಾಗುತ್ತೆ ಎಂದಿದ್ದಾರೆ.
ಬಳ್ಳಾರಿಯ ಕುಡತಿಯಲ್ಲಿ ಮಾತನಾಡಿದ ಇಂಧನ ಸಚಿವ ಕೆಜೆ.ಜಾರ್ಜ್, ರಾಜ್ಯದಲ್ಲಿ 2 ಕೋಟಿ 14 ಲಕ್ಷ ಕುಟುಂಬಕ್ಕೆ ಗೃಹಜ್ಯೋತಿ ಯೋಜನೆ ಸಿಗಲಿದೆ. ವಿದ್ಯುತ್ ದರ ಏರಿಕೆ ಮಾಡಿದ್ದು ನಾವಲ್ಲ, ಈ ಹಿಂದೆ ಇದ್ದ ಬಿಜೆಪಿ ಸರ್ಕಾರ. ಆದ್ರೆ ಅದನ್ನು ನಮ್ಮ ಮೇಲೆ ಹಾಕಿದ್ದಾರೆ. ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಸರ್ಕಾರ ಬಿಲ್ ಜಾಸ್ತಿ ಮಾಡಲಿಲ್ಲ. ಅದನ್ನ ಈಗ ಹೆಚ್ಚಿಸಿದ್ದಾರೆ. ಕೈಗಾರಿಕೆಗಳಿಗೆ ವಿಧಿಸಲಾಗಿರುವ ಬಿಲ್ ಅನ್ನು ರಾಜ್ಯ ಸರ್ಕಾರ ಮರು ಪರಿಶೀಲನೆ ಮಾಡಲು ಬರಲ್ಲ. ಸಿಎಂ ಪರಿಶೀಲನೆ ಮಾಡುತ್ತಾರೆ. ಕಮರ್ಷಿಯಲ್ ಬಿಲ್ ಹೆಚ್ಚಿಸುವುದು ನಮ್ಮ ಬಳಿ ಇಲ್ಲ ಎಂದಿದ್ದಾರೆ.
ಇದೇ ವೇಳೆ ರಾಜ್ಯದಲ್ಲಿ ಮಳೆ ಕಣ್ಣಾಮುಚ್ಚಾಲೆ ಆಡುತ್ತಿರುವುದರ ಬಗ್ಗೆ ಪ್ರತಿಕ್ರಿಯಿಸಿದ ಜಾರ್ಜ್, ರಾಜ್ಯದಲ್ಲಿ ಮುಂಗಾರು ಮಳೆ ಕೈ ಕೊಟಿಲ್ಲ. ಮಳೆ ಸ್ವಲ್ಪ ತಡವಾಗಿದೆ ನಿಜ ಆದರೆ ಮಳೆನೇ ಬರುವುದಿಲ್ಲ ಎನ್ನಲ್ಲ. ಶೀಘ್ರವಾಗಿ ಮಳೆಯಾಗಲಿದೆ. ರಾಜ್ಯಕ್ಕೆ ಒಳ್ಳೆಯದಾಗಲಿದೆ ಎಂದು ಹೇಳಿದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
200 ಯೂನಿಟ್ಗಿಂತ ಹೆಚ್ಚು ವಿದ್ಯುತ್ ಬಳಸಿದ್ರೆ ಬಿಲ್ ಕಟ್ಟಲೇಬೇಕು
ಬಿಲ್ ನಾವು ಜಾಸ್ತಿ ಮಾಡಿಲ್ಲ, ಹಿಂದಿನ ಬಿಜೆಪಿ ಸರ್ಕಾರ ಹೆಚ್ಚಿಸಿತ್ತು-ಜಾರ್ಜ್
ರಾಜ್ಯದಲ್ಲಿ ಮುಂಗಾರು ಮಳೆ ತಡವಾಗಿದೆ ಅಷ್ಟೇ.. ಬಂದೇ ಬರುತ್ತದೆ
ಬಳ್ಳಾರಿ: ಗೃಹಜ್ಯೋತಿ ಯೋಜನೆಯನ್ನು ಜುಲೈಯಿಂದ ಅನುಷ್ಠಾನ ಮಾಡಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ನಾವು ನೀಡಿದ ಆಶ್ವಾಸನೆಯಂತೆ ಜನರಿಗೆ ಉಚಿತ ವಿದ್ಯುತ್ ನೀಡುತ್ತೇವೆ. 200 ಯೂನಿಟ್ಗಿಂತ ಹೆಚ್ಚು ವಿದ್ಯುತ್ ಬಳಸಿದ್ರೆ ಅದಕ್ಕೆ ಬಿಲ್ ಪಾವತಿಸಬೇಕಾಗುತ್ತೆ ಎಂದಿದ್ದಾರೆ.
ಬಳ್ಳಾರಿಯ ಕುಡತಿಯಲ್ಲಿ ಮಾತನಾಡಿದ ಇಂಧನ ಸಚಿವ ಕೆಜೆ.ಜಾರ್ಜ್, ರಾಜ್ಯದಲ್ಲಿ 2 ಕೋಟಿ 14 ಲಕ್ಷ ಕುಟುಂಬಕ್ಕೆ ಗೃಹಜ್ಯೋತಿ ಯೋಜನೆ ಸಿಗಲಿದೆ. ವಿದ್ಯುತ್ ದರ ಏರಿಕೆ ಮಾಡಿದ್ದು ನಾವಲ್ಲ, ಈ ಹಿಂದೆ ಇದ್ದ ಬಿಜೆಪಿ ಸರ್ಕಾರ. ಆದ್ರೆ ಅದನ್ನು ನಮ್ಮ ಮೇಲೆ ಹಾಕಿದ್ದಾರೆ. ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಸರ್ಕಾರ ಬಿಲ್ ಜಾಸ್ತಿ ಮಾಡಲಿಲ್ಲ. ಅದನ್ನ ಈಗ ಹೆಚ್ಚಿಸಿದ್ದಾರೆ. ಕೈಗಾರಿಕೆಗಳಿಗೆ ವಿಧಿಸಲಾಗಿರುವ ಬಿಲ್ ಅನ್ನು ರಾಜ್ಯ ಸರ್ಕಾರ ಮರು ಪರಿಶೀಲನೆ ಮಾಡಲು ಬರಲ್ಲ. ಸಿಎಂ ಪರಿಶೀಲನೆ ಮಾಡುತ್ತಾರೆ. ಕಮರ್ಷಿಯಲ್ ಬಿಲ್ ಹೆಚ್ಚಿಸುವುದು ನಮ್ಮ ಬಳಿ ಇಲ್ಲ ಎಂದಿದ್ದಾರೆ.
ಇದೇ ವೇಳೆ ರಾಜ್ಯದಲ್ಲಿ ಮಳೆ ಕಣ್ಣಾಮುಚ್ಚಾಲೆ ಆಡುತ್ತಿರುವುದರ ಬಗ್ಗೆ ಪ್ರತಿಕ್ರಿಯಿಸಿದ ಜಾರ್ಜ್, ರಾಜ್ಯದಲ್ಲಿ ಮುಂಗಾರು ಮಳೆ ಕೈ ಕೊಟಿಲ್ಲ. ಮಳೆ ಸ್ವಲ್ಪ ತಡವಾಗಿದೆ ನಿಜ ಆದರೆ ಮಳೆನೇ ಬರುವುದಿಲ್ಲ ಎನ್ನಲ್ಲ. ಶೀಘ್ರವಾಗಿ ಮಳೆಯಾಗಲಿದೆ. ರಾಜ್ಯಕ್ಕೆ ಒಳ್ಳೆಯದಾಗಲಿದೆ ಎಂದು ಹೇಳಿದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ