Advertisment

BREAKING: ಬೆಂಗಳೂರಲ್ಲಿ ಕಿರುತೆರೆಯ ಖ್ಯಾತ ನಟ ಚರಿತ್ ಬಾಳಪ್ಪ ಬಂಧನ

author-image
admin
Updated On
BREAKING: ಬೆಂಗಳೂರಲ್ಲಿ ಕಿರುತೆರೆಯ ಖ್ಯಾತ ನಟ ಚರಿತ್ ಬಾಳಪ್ಪ ಬಂಧನ
Advertisment
  • ಕಿರುತೆರೆ ನಟ ಚರಿತ್ ಬಾಳಪ್ಪಗೆ ‘ಮುದ್ದು’ಲಕ್ಷ್ಮಿ‌ ಕಂಟಕ!
  • ಪ್ರೀತಿಸುತ್ತೇನೆ ಅಂತ ಹೇಳಿ ದೈಹಿಕ ಸಂಪರ್ಕಕ್ಕೆ ಒತ್ತಾಯ
  • ತೆಲುಗಿನ ಅನೇಕ ಧಾರಾವಾಹಿಗಳಲ್ಲೂ ನಟಿಸಿರುವ ಚರಿತ್ ಬಾಳಪ್ಪ

ಬೆಂಗಳೂರು: ಕನ್ನಡದ ಮುದ್ದುಲಕ್ಷ್ಮಿ ಸೀರಿಯಲ್‌ನಲ್ಲಿ ನಟಿಸಿದ್ದ ಕಿರುತೆರೆ ನಟ ಚರಿತ್ ಬಾಳಪ್ಪ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಕೇಳಿ ಬಂದಿದೆ. ಪ್ರಕರಣ ದಾಖಲಿಸಿರುವ ಆರ್‌.ಆರ್ ನಗರ ಪೊಲೀಸರು ಚರಿತ್ ಬಾಳಪ್ಪ ಅವರನ್ನ ಬಂಧಿಸಿದ್ದಾರೆ.

Advertisment

ಇದನ್ನೂ ಓದಿ: BBK11: ಈ ವಾರ ಬಿಗ್ ಬಾಸ್ ಮನೆಯಿಂದ ಗೆಟ್‌ ಔಟ್ ಆಗೋದು ಯಾರು? ಇಂದೇ ಹೊಸ ಟ್ವಿಸ್ಟ್! 

ಚರಿತ್ ಬಾಳಪ್ಪ ಕನ್ನಡದ ಮುದ್ದುಲಕ್ಷ್ಮಿ‌ ಸೀರಿಯಲ್‌ನಲ್ಲಿ ಅಷ್ಟೇ ಅಲ್ಲ ತೆಲುಗು ಕಿರುತೆರೆಯ ಅನೇಕ ಧಾರಾವಾಹಿಗಳಲ್ಲೂ ನಟಿಸಿದ್ದಾರೆ. ಕಿರುತೆರೆಯಲ್ಲಿ ಮಿಂಚಿದ ಈ ನಟನ ಮೇಲೆ ತನಗೆ ಪರಿಚಯವಿದ್ದ ಗೆಳತಿಗೆ ಲೈಂಗಿಕ ದೌರ್ಜನ್ಯ ಎಸಗಿರೋ ಆರೋಪ ಕೇಳಿ ಬಂದಿದೆ. ಪ್ರೀತಿಸುತ್ತೇನೆ ಅಂತ ಹೇಳಿ ದೈಹಿಕ ಸಂಪರ್ಕಕ್ಕೆ ಒತ್ತಾಯ, ಯುವತಿ ವಾಸ ಮಾಡುತ್ತಿದ್ದ ಮನೆಗೆ ನುಗ್ಗಿ ಸಹಚರರ ಜೊತೆ ಕಿರುಕುಳ ನೀಡದ ಆರೋಪ ಕೇಳಿ ಬಂದಿದೆ.

publive-image

ನಟ ಚರಿತ್ ಯುವತಿ ಬಳಿ ಹಣಕ್ಕೂ ಬೇಡಿಕೆ ಇಟ್ಟಿದ್ದರಂತೆ. ಹಣ ಕೊಡದಿದ್ದರೆ ಆಕೆಯ ಖಾಸಗಿ ಫೋಟೋ, ವಿಡಿಯೋ ಹರಿಬಿಡುವ ಬೆದರಿಕೆ ಹಾಕಿದ್ದರಂತೆ. ಈ ಆರೋಪದ ಹಿನ್ನೆಲೆಯಲ್ಲಿ ಚರಿತ್ ವಿರುದ್ಧ ಲೈಂಗಿಕ ದೌರ್ಜನ್ಯ, ಕೊಲೆ ಬೆದರಿಕೆ, ಹಲ್ಲೆ ಆರೋಪವನ್ನ ಯುವತಿ ಮಾಡಿದ್ದಾರೆ. ಈ ದೂರಿನ ಹಿನ್ನೆಲೆಯಲ್ಲಿ ಆರ್‌.ಆರ್ ನಗರ ಪೊಲೀಸರು ಆರೋಪಿ ಚರಿತ್ ಬಾಳಪ್ಪ ಅವರನ್ನ ಬಂಧಿಸಿ ವಿಚಾರಣೆ ನಡೆಸಿದ್ದಾರೆ.

Advertisment

publive-image

ಚರಿತ್ ಪತ್ನಿಯಿಂದಲೂ ದೂರು!
ನಟ ಚರಿತ್ ಬಾಳಪ್ಪ ಈಗಾಗಲೇ ಪತ್ನಿಯಿಂದ ಡಿವೋರ್ಸ್ ಪಡೆದಿದ್ದಾರೆ. ಈ ಹಿಂದೆ ಚರಿತ್ ವಿರುದ್ಧ ಪತ್ನಿ ದೂರು ನೀಡಿದ್ದರು. ಕೋರ್ಟ್ ಆಜ್ಞೆಯಂತೆ ಡಿವೋರ್ಸ್ ಪರಿಹಾರ ಹಣಕ್ಕೆ ನೋಟಿಸ್ ಕಳಿಸಿದ್ದಕ್ಕೆ ಬೆದರಿಕೆ ಹಾಕಿದ್ದಾರೆಂದು ದೂರು ನೀಡಿದ್ದು, ಕಳೆದ ಜೂನ್ ತಿಂಗಳಲ್ಲಿ ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ‌ NCR ದಾಖಲಾಗಿತ್ತು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment