Advertisment

Bengaluru: ಬೆಳಗ್ಗೆಯಿಂದ ಸುರಿಯುತ್ತಿರೋ ಮಳೆ.. ನೆಲಕ್ಕುರುಳಿದ ಮರ, ಹೊಳೆಯಂತಾದ ರಸ್ತೆ​​

author-image
AS Harshith
Updated On
ಮಳೆ ಆರ್ಭಟ.. 170ಕ್ಕೆ ಏರಿಕೆಯಾದ ಸಾವಿನ ಸಂಖ್ಯೆ, 64 ಮಂದಿ ನಾಪತ್ತೆ
Advertisment
  • ಬೆಳಗ್ಗೆಯಿಂದಲೇ ಸುರಿಯುತ್ತಿರುವ ಭಾರೀ ಮಳೆ
  • ಹಲವೆಡೆ ಧರೆಗುರುಳಿದ ಮರ, ವಾಹನ ಸವಾರರ ಪರದಾಟ
  • ನಿರಂತರ ಸುರಿದ ಮಳೆಯಿಂದಾಗಿ ಕಂಗೆಟ್ಟ ಸಿಲಿಕಾನ್​ ಸಿಟಿ ಮಂದಿ

ಬೆಂಗಳೂರು: ಬೆಳ್ಳಂಬೆಳಗ್ಗೆಯಿಂದಲೇ ಸಿಲಿಕಾನ್ ಸಿಟಿಯಲ್ಲಿ ವರುಣ ಅಬ್ಬರಿಸುತ್ತಿದ್ದಾನೆ. ಮುಂಜಾನೆಯಿಂದ ಸುರಿದ ಮಳೆಗೆ ಬೆಂಗಳೂರಿನ ಚಿತ್ರಣವೇ ಬದಲಾಗಿದೆ. ಹಲವೆಡೆ ಮರಗಳು ಧರೆಗುಳಿದಿದ್ದು, ಮತ್ತೆ ಹಲವೆಡೆ ರಸ್ತೆಗಳಲ್ಲಿ ನೀರು ನಿಂತಿವೆ. ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

Advertisment

ಸಾಲು ಸಾಲು ಅವಾಂತರಗಳು

ಮಳೆಯಿಂದಾಗಿ HMT ಲೇಔಟ್​​ನಲ್ಲಿ ಬೃಹದಾಕಾರದ ಮರ ಧರೆಗುರುಳಿದೆ. ಬೆಳಿಗ್ಗೆ 5 ಗಂಟೆ ಸುಮಾರಿಗೆ ಮರ ನೆಲಕ್ಕುರುಳಿದ್ದು, ಮರ ಬಿದ್ದ ಪರಿಣಾಮ ಮನೆ ಮುಂದೆ ನಿಲ್ಲಿಸಿದ್ದ ಕಾರು ಜಖಂಗೊಂಡಿದೆ. 3 ತಿಂಗಳ ಹಿಂದೆ ಮರ ತೆರವು ಮಾಡುವಂತೆ ಬಿಬಿಎಂಪಿಗೆ ದೂರು ನೀಡಿದ್ದರು ಕ್ಯಾರೆ ಎಂದಿಲ್ಲ ಎಂದು ಸ್ಥಳೀಯರು ದೂರಿದ್ದಾರೆ.

ಇದನ್ನೂ ಓದಿ: ತಮಿಳುನಾಡಲ್ಲಿ ರಣಭೀಕರ ಮಳೆಯ ಮುನ್ಸೂಚನೆ! ಶಾಲಾ ಕಾಲೇಜ್​ಗಳು ಬಂದ್​! ವರ್ಕ್​ ಫ್ರಮ್ ಹೋಮ್​ಗೆ ಸೂಚನೆ

publive-image

ಅರ್ಧಗಂಟೆಯಿಂದಳು ಮಳೆ ಸುರಿಯುತ್ತಿದೆ. ಮಳೆಯಿಂದಾಗಿ ಬರೋಬ್ಬರಿ 2 ಕಿಲೋಮೀಟರ್ ವರೆಗೂ ಟ್ರಾಫಿಕ್ ಜಾಮ್ ಆಗಿದೆ. ಮಳೆಯ ಅಬ್ಬರದಿಂದ ಸಿಟಿ ಮಂದಿ ತತ್ತರಿಸಿ ಹೋಗಿದ್ದಾರೆ. ಆಫೀಸ್ ಹೋಗುವವರು, ಶಾಲೆಗೆ ಹೋಗುವವರು ಪರದಾಡಿದ್ದಾರೆ.

Advertisment

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment