Bengaluru: ಬೆಳಗ್ಗೆಯಿಂದ ಸುರಿಯುತ್ತಿರೋ ಮಳೆ.. ನೆಲಕ್ಕುರುಳಿದ ಮರ, ಹೊಳೆಯಂತಾದ ರಸ್ತೆ​​

author-image
AS Harshith
Updated On
ಮಳೆ ಆರ್ಭಟ.. 170ಕ್ಕೆ ಏರಿಕೆಯಾದ ಸಾವಿನ ಸಂಖ್ಯೆ, 64 ಮಂದಿ ನಾಪತ್ತೆ
Advertisment
  • ಬೆಳಗ್ಗೆಯಿಂದಲೇ ಸುರಿಯುತ್ತಿರುವ ಭಾರೀ ಮಳೆ
  • ಹಲವೆಡೆ ಧರೆಗುರುಳಿದ ಮರ, ವಾಹನ ಸವಾರರ ಪರದಾಟ
  • ನಿರಂತರ ಸುರಿದ ಮಳೆಯಿಂದಾಗಿ ಕಂಗೆಟ್ಟ ಸಿಲಿಕಾನ್​ ಸಿಟಿ ಮಂದಿ

ಬೆಂಗಳೂರು: ಬೆಳ್ಳಂಬೆಳಗ್ಗೆಯಿಂದಲೇ ಸಿಲಿಕಾನ್ ಸಿಟಿಯಲ್ಲಿ ವರುಣ ಅಬ್ಬರಿಸುತ್ತಿದ್ದಾನೆ. ಮುಂಜಾನೆಯಿಂದ ಸುರಿದ ಮಳೆಗೆ ಬೆಂಗಳೂರಿನ ಚಿತ್ರಣವೇ ಬದಲಾಗಿದೆ. ಹಲವೆಡೆ ಮರಗಳು ಧರೆಗುಳಿದಿದ್ದು, ಮತ್ತೆ ಹಲವೆಡೆ ರಸ್ತೆಗಳಲ್ಲಿ ನೀರು ನಿಂತಿವೆ. ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಸಾಲು ಸಾಲು ಅವಾಂತರಗಳು

ಮಳೆಯಿಂದಾಗಿ HMT ಲೇಔಟ್​​ನಲ್ಲಿ ಬೃಹದಾಕಾರದ ಮರ ಧರೆಗುರುಳಿದೆ. ಬೆಳಿಗ್ಗೆ 5 ಗಂಟೆ ಸುಮಾರಿಗೆ ಮರ ನೆಲಕ್ಕುರುಳಿದ್ದು, ಮರ ಬಿದ್ದ ಪರಿಣಾಮ ಮನೆ ಮುಂದೆ ನಿಲ್ಲಿಸಿದ್ದ ಕಾರು ಜಖಂಗೊಂಡಿದೆ. 3 ತಿಂಗಳ ಹಿಂದೆ ಮರ ತೆರವು ಮಾಡುವಂತೆ ಬಿಬಿಎಂಪಿಗೆ ದೂರು ನೀಡಿದ್ದರು ಕ್ಯಾರೆ ಎಂದಿಲ್ಲ ಎಂದು ಸ್ಥಳೀಯರು ದೂರಿದ್ದಾರೆ.

ಇದನ್ನೂ ಓದಿ: ತಮಿಳುನಾಡಲ್ಲಿ ರಣಭೀಕರ ಮಳೆಯ ಮುನ್ಸೂಚನೆ! ಶಾಲಾ ಕಾಲೇಜ್​ಗಳು ಬಂದ್​! ವರ್ಕ್​ ಫ್ರಮ್ ಹೋಮ್​ಗೆ ಸೂಚನೆ

publive-image

ಅರ್ಧಗಂಟೆಯಿಂದಳು ಮಳೆ ಸುರಿಯುತ್ತಿದೆ. ಮಳೆಯಿಂದಾಗಿ ಬರೋಬ್ಬರಿ 2 ಕಿಲೋಮೀಟರ್ ವರೆಗೂ ಟ್ರಾಫಿಕ್ ಜಾಮ್ ಆಗಿದೆ. ಮಳೆಯ ಅಬ್ಬರದಿಂದ ಸಿಟಿ ಮಂದಿ ತತ್ತರಿಸಿ ಹೋಗಿದ್ದಾರೆ. ಆಫೀಸ್ ಹೋಗುವವರು, ಶಾಲೆಗೆ ಹೋಗುವವರು ಪರದಾಡಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment