Advertisment

ನಟ ದರ್ಶನ್‌ ಗ್ಯಾಂಗ್‌ಗೆ ಮತ್ತೆ ಸಂಕಷ್ಟ.. ಸುಪ್ರೀಂಕೋರ್ಟ್‌ನಲ್ಲಿ ಜಾಮೀನು ರದ್ದಾಗುತ್ತಾ?

author-image
Gopal Kulkarni
Updated On
ಪದೇ ಪದೇ ಸಿಗರೇಟ್‌ ಕೇಳಿದ್ದಕ್ಕೆ ದರ್ಶನ್‌ಗೆ ವಾರ್ನಿಂಗ್‌; ಕೊನೆಗೂ ಅಶ್ಲೀಲ ಮೆಸೇಜ್ ಸೀಕ್ರೆಟ್‌ ರಿವೀಲ್‌!
Advertisment
  • ನಟ ದರ್ಶನ್ ಮತ್ತು ಗ್ಯಾಂಗ್​ಗೆ ಮತ್ತೊಂದು ಕಾನೂನು ಸಂಕಷ್ಟ
  • ಹೈಕೋರ್ಟ್​ ಜಾಮೀನು ರದ್ದು ಕೋರಿ ಸುಪ್ರೀಂಕೋರ್ಟ್​ಗೆ ಅರ್ಜಿ
  • ವಕೀಲ ಅನಿಲ್ ಸಿ ನಿಶಾನಿಯವರ ಮೂಲಕ ಪೊಲೀಸರಿಂದ ಅರ್ಜಿ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ದರ್ಶನ್ ಹಾಗೂ ಏಳು ಜನರಿಗೆ ಕರ್ನಾಟಕ ಹೈಕೋರ್ಟ್​ ಜಾಮೀನು ನೀಡಿದೆ. ಪ್ರಕರಣದ ಎಲ್ಲಾ ಆರೋಪಿಗಳು ಸದ್ಯ ಜಾಮೀನಿನ ಮೇಲೆ ಆಚೆ ಇದ್ದಾರೆ. ಈಗ ಹೈಕೋರ್ಟ್​ ನೀಡಿರುವ ಜಾಮೀನು ರದ್ದು ಕೋರಿ ಈಗ ಸುಪ್ರೀಂಕೋರ್ಟ್​​ಗೆ ಅರ್ಜಿ ಸಲ್ಲಿಕೆಯಾಗಿದ್ದು. ದರ್ಶನ್​ಗೆ ಮತ್ತೆ ಸಂಕಷ್ಟ ಆರಂಭವಾದಂತಿದೆ.

Advertisment

ಇದನ್ನೂ ಓದಿ:ಮೈಸೂರಲ್ಲಿ ಮಹತ್ವದ ನಿರ್ಧಾರಕ್ಕೆ ಬಂದ ನಟ ದರ್ಶನ್.. ಏನದು..?

ದರ್ಶನ್ ಸೇರಿ ಏಳು ಆರೋಪಿಗಳ ಜಾಮೀನು ರದ್ದು ಕೋರಿ ಈಗಾಗಲೇ ಪೊಲೀಸರುಸುಪ್ರೀಂಕೋರ್ಟ್ ವಕೀಲ ಅನಿಲ್ ಸಿ ನಿಶಾನಿಯವರ ಮೂಲಕ ಅರ್ಜಿ ಸಲ್ಲಿಸಿದ್ದಾರೆ. ನಟ ದರ್ಶನ್, ಪವಿತ್ರಗೌಡ, ಲಕ್ಷ್ಮಣ್, ಪ್ರದೂಶ್​, ನಾಗರಾಜು, ಅನುಕುಮಾರ್ ಜಗದೀಶ್ ಇವರ ಜಾಮೀನು ರದ್ದು ಕೋರಿ ಅರ್ಜಿ ಸಲ್ಲಿಕೆಯಾಗಿದೆ.

ಇದನ್ನೂ ಓದಿ: ಗಂಡನ ಫ್ರೆಂಡ್‌ ಜೊತೆ ಲವ್ವಿಡವ್ವಿ.. ಇಬ್ಬರು ಮಕ್ಕಳ ತಾಯಿ ಪರಾರಿ; ಇದು ವಿಚಿತ್ರ ಪ್ರೇಮ ಕಹಾನಿ!

ಕಳೆದ ಡಿಸೆಂಬರ್​ 13 ರಂದು ಕರ್ನಾಟಕ ಹೈಕೋರ್ಟ್​ನಿಂದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಈ ಏಳು ಆರೋಪಿಗಳು ಜಾಮೀನು ಪಡೆದಿದ್ದರು. ಸದ್ಯ ಈ ಏಳು ಆರೋಪಿಗಳಿಗೆ ಮತ್ತೆ ಕಾನೂನಿನ ಸಂಕಷ್ಟ ಎದುರಾಗಿದೆ.

Advertisment

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment