/newsfirstlive-kannada/media/post_attachments/wp-content/uploads/2024/08/Thievse.jpg)
ವಿಮಾನದಲ್ಲಿ ಬಂದು ಕಳ್ಳತನ ಮಾಡುತ್ತಿದ್ದ ದಂಪತಿ ಸೇರಿ ಮೂವರು ಆರೋಪಿಗಳನ್ನು ಸಂಜಯನಗರ ಠಾಣೆ ಪೊಲೀಸರು ಅರೆಸ್ಟ್​ ಮಾಡಿದ್ದಾರೆ. ಬಂಧಿತರನ್ನು ಉತ್ತರ ಪ್ರದೇಶ ಮೂಲದ ಅಕ್ಬರ್​ (38), ಪತ್ನಿ ಮುಬೀನಾ (32) ಹಾಗೂ ಸೋನು ಯಾದವ್​ (39) ಎಂದು ಗುರುತಿಸಲಾಗಿದೆ.
ಮೂವರು ವಿಮಾನದಲ್ಲಿ ಬೆಂಗಳೂರಿಗೆ ಬಂದು ಬೀಗ ಹಾಕಿದ ಮನೆಗಳನ್ನು ಟಾರ್ಗೆಟ್​​ ಮಾಡುತ್ತಿದ್ದರು. ಬಳಿಕ ಮನೆಗಳ್ಳತನ ಮಾಡುತ್ತಿದ್ದರು. ಕೊನೆಗೂ ಮೂವರು ಕಳ್ಳರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 30.50 ಲಕ್ಷ ರೂಪಾಯಿ ಮೌಲ್ಯದ 405 ಗ್ರಾಂ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ.
[caption id="attachment_84011" align="alignnone" width="800"]
ಸೋನು ಯಾದವ್[/caption]
ಸಿಸಿಟಿವಿ ನೀಡಿದ ಸುಳಿವು
ಕಳೆದ ಮೇ 10ರಂದು ಎಇಸಿಎಸ್​​ ಲೇಔಟ್​​​​​ ನಿವಾಸಿಯೊಬ್ಬರ ಮನೆಯಲ್ಲಿ ಕಳ್ಳತನ ನಡೆದಿತ್ತು. ಹಾಡು ಹಗಲೇ ಮನೆಯಲ್ಲಿದ್ದ ಆಭರಣಗಳನ್ನು ಕಳ್ಳರು ದೋಚಿದ್ದರು. ಬೀಗ ಮುರಿದು ಎಲ್ಲವನ್ನು ಕಳವು ಮಾಡಿದ್ದರು. ಈ ಪ್ರಕರಣ ಸಂಬಂಧ ದೂರು ದಾಖಲಾಗಿತ್ತು. ದಾಖಲಾದ ದೂರಿನ ಮೇರೆಗೆ ಇನ್ಸ್​​ಪೆಕ್ಟರ್​​ ಭಾಗ್ಯವತಿ ಜೆ.ಬಂಟ ನೇತೃತ್ವದಲ್ಲಿ ಕಳ್ಳರನ್ನು ಹುಡುಕಲಾಗಿದೆ. ಈ ವೇಳೆ ಅಲ್ಲಿನ ಕಟ್ಟಡಗಳ ಸುತ್ತಮುತ್ತಲಿನ ಸಿಸಿಟಿವಿ ಪರಿಶೀಲಿಸಲಾಗಿದೆ.
/newsfirstlive-kannada/media/post_attachments/wp-content/uploads/2024/08/seena-1.jpg)
ಇದನ್ನೂ ಓದಿ: ಪ್ರೇಮಿಗಳಿಗೆ ಸಮಸ್ಯೆ ಉಂಟಾಗಬಹುದು, ಲಾಭವಿದ್ದರೂ ಎಚ್ಚರಿಕೆ ಇರಲಿ; ಇಲ್ಲಿದೆ ಇಂದಿನ ರಾಶಿ ಭವಿಷ್ಯ
ಸಿಸಿಟಿವಿ ದೃಶ್ಯದಲ್ಲಿ ಸುಳಿವೊಂದು ಸಿಕ್ಕಿದ್ದು, ಅದರ ಬೆನ್ನಟ್ಟಿದ ಪೊಲೀಸರಿಗೆ ಆರೋಪಿ ಸೋನು ಯಾದವ್​ ಮೆಜೆಸ್ಟಿಕ್​​ ಬಸ್​ ನಿಲ್ದಾಣದಲ್ಲಿ ಇರೋದು ಪತ್ತೆಹಚ್ಚಿ ಅರೆಸ್ಟ್ ಮಾಡುತ್ತಾರೆ. ನಂತರ ಆತನ ವಿಚಾರಣೆ ಮಾಡಿದಾಗ ಬಾಯಿ ಬಿಡುತ್ತಾನೆ.
[caption id="attachment_84015" align="alignnone" width="800"]
ಅಕ್ಬರ್​ ಮತ್ತು ಮುಬೀನಾ[/caption]
ಸೋನು ಬಾಯಿಬಿಟ್ಟ ಸಂಗತಿ ಆಧಾರದ ಮೇಲೆ ಪೊಲೀಸರು ದೆಹಲಿ ಮತ್ತು ಉತ್ತರ ಪ್ರದೇಶಕ್ಕೆ ತೆರಳಿ ಸ್ಥಳೀಯ ಪೊಲೀಸರ ನೆರವು ಪಡೆಯುತ್ತಾರೆ. ಈ ವೇಳೆ ಅಕ್ಬರ್​ ಮತ್ತು ಮುಬೀನಾಳನ್ನು ಬಂಧಿಸುತ್ತಾರೆ. ಬಂಧಿತರು ಗಾಜಿಯಾಬಾದ್​​ನಲ್ಲಿ ಪೊಲೀಸರ ವಶವಾಗುತ್ತಾರೆ.
ಇನ್ನು ಬಂಧಿತ ಮೂವರು ಕರ್ನಾಟಕ ಮಾತ್ರವಲ್ಲದೆ, ಮಹಾರಾಷ್ಟ್ರ, ಗುಜರಾತ್​​​ ಸೇರಿ ವಿವಿಧ ರಾಜ್ಯಗಳಲ್ಲಿ ಕಳ್ಳತನ ಮಾಡಿದ್ದಾರೆ. ಮೂವರು ರೈಲು ಮತ್ತು ವಿಮಾನದಲ್ಲಿ ಬಂದು ಬೀಗ ಹಾಕಿದ ಮನೆಗಳ ಬೀಗ ಮುರಿದು ಕಳ್ಳತನ ಮಾಡುತ್ತಿದ್ದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us