BREAKING: ನಟ ದರ್ಶನ್‌ ಗನ್‌ ಸೀಜ್‌ ಮಾಡಿದ ಪೊಲೀಸರು

author-image
Ganesh Nachikethu
Updated On
ಬಳ್ಳಾರಿಯಲ್ಲಿದ್ರೂ ಬಿಡದ ಪವಿತ್ರಾ ಗೌಡ.. ಕೊಲೆ ಕೇಸ್‌ಗೆ ಅತಿ ದೊಡ್ಡ ಟ್ವಿಸ್ಟ್; ದರ್ಶನ್‌ಗೆ ಹೊಸ ಟೆನ್ಷನ್‌; ಏನಾಯ್ತು?
Advertisment
  • ಜಾಮೀನು ಮೇಲೆ ಜೈಲಿನಿಂದ ಹೊರ ಬಂದಿರೋ ನಟ ದರ್ಶನ್​​!
  • ನಟ ದರ್ಶನ್​​ಗೆ ಮತ್ತೊಂದು ಆಘಾತ ಕೊಟ್ಟ ಬೆಂಗಳೂರು ಪೊಲೀಸರು
  • ಕಮಿಷನರ್ ದಯಾನಂದ್ ಆದೇಶದ ಬೆನ್ನಲ್ಲೇ ದರ್ಶನ್ ಗನ್ ಸೀಜ್

ಬೆಂಗಳೂರು: ಕೊಲೆ ಕೇಸ್​ನಲ್ಲಿ ಜೈಲು ಸೇರಿ ಜಾಮೀನು ಮೇಲೆ ಹೊರ ಬಂದಿರೋ ನಟ ದರ್ಶನ್​​ಗೆ ಮತ್ತೊಂದು ಆಘಾತ ಎದುರಾಗಿದೆ. ನಟ ದರ್ಶನ್​​ ಗನ್‌ ಸೀಜ್‌ ಆಗಿದೆ.

ಕಮಿಷನರ್ ದಯಾನಂದ್ ಅವರ ಆದೇಶದ ಬೆನ್ನಲ್ಲೇ ದರ್ಶನ್ ಗನ್ ಸೀಜ್ ಮಾಡಲಾಗಿದೆ. ಇಂದು ಖುದ್ದು ಪೊಲೀಸರು ದರ್ಶನ್ ಮನೆಗೆ ತೆರಳಿ ಗನ್ ಸೀಜ್ ಮಾಡಿದ್ದಾರೆ. ಚೆನ್ನಮ್ಮನಕೆರೆಯ ವಿಜಯಲಕ್ಷ್ಮಿ ಫ್ಲ್ಯಾಟ್‌ನಲ್ಲಿದ್ದ ದರ್ಶನ್ ಗನ್ ಸೀಜ್ ಆಗಿದೆ ಎಂದು ನ್ಯೂಸ್​ಫಸ್ಟ್​​ಗೆ ಪೊಲೀಸ್​ ಮೂಲಗಳಿಂದಲೇ ಮಾಹಿತಿ ಸಿಕ್ಕಿದೆ.

ಮೊದಲು ತಾತ್ಕಾಲಿಕವಾಗಿ ಗನ್ ಪರವಾನಗಿ ರದ್ದು ಮಾಡಲಾಗಿತ್ತು. ಪರವಾನಗಿ ರದ್ದು ಮಾಡಿದ್ದ ಬೆನ್ನಲ್ಲೆ ದರ್ಶನ್‌ಗೆ ರಾಜರಾಜೇಶ್ವರಿ ನಗರ ಪೊಲೀಸ್ರು ನೋಟಿಸ್​ ಜಾರಿ ಮಾಡಿದ್ರು. ನೋಟಿಸ್ ಜಾರಿ ಮಾಡಿದ್ರೂ ಗನ್​ ಪೊಲೀಸರಿಗೆ ನೀಡಲು ನಟ ದರ್ಶನ್​​ ಹಿಂದೇಟು ಹಾಕಿದ್ದರು.

ನಟ ದರ್ಶನ್​​​ ಜರ್ಮನ್​ ಮೇಡ್​ ಗನ್​​ ಬಳಸುತ್ತಿದ್ದರು. ಕಾರ್ಲ್ ವಾಲ್ತೇರ್ ವಾಫೆನ್ ಫ್ಯಾಬ್ರಿಕ್ ಕಂಪನಿ ಗನ್​​ ಇದಾಗಿದ್ದು, ಜತೆಗೆ 5 ಸಜೀವ ಗುಂಡುಗಳು ಸೀಜ್​ ಮಾಡಿದ್ದಾರೆ.

ಇದನ್ನೂ ಓದಿ:ದರ್ಶನ್​ಗೆ ಮತ್ತೊಂದು ಶಾಕ್​ ಕೊಟ್ಟ ಬೆಂಗಳೂರು ಪೊಲೀಸರು; ತಾತ್ಕಾಲಿಕವಾಗಿ ಗನ್​ ಲೈಸನ್ಸ್​ ಅಮಾನತು

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment