/newsfirstlive-kannada/media/post_attachments/wp-content/uploads/2024/08/darshan7.jpg)
ಬೆಂಗಳೂರು: ಕೊಲೆ ಕೇಸ್ನಲ್ಲಿ ಜೈಲು ಸೇರಿ ಜಾಮೀನು ಮೇಲೆ ಹೊರ ಬಂದಿರೋ ನಟ ದರ್ಶನ್ಗೆ ಮತ್ತೊಂದು ಆಘಾತ ಎದುರಾಗಿದೆ. ನಟ ದರ್ಶನ್ ಗನ್ ಸೀಜ್ ಆಗಿದೆ.
ಕಮಿಷನರ್ ದಯಾನಂದ್ ಅವರ ಆದೇಶದ ಬೆನ್ನಲ್ಲೇ ದರ್ಶನ್ ಗನ್ ಸೀಜ್ ಮಾಡಲಾಗಿದೆ. ಇಂದು ಖುದ್ದು ಪೊಲೀಸರು ದರ್ಶನ್ ಮನೆಗೆ ತೆರಳಿ ಗನ್ ಸೀಜ್ ಮಾಡಿದ್ದಾರೆ. ಚೆನ್ನಮ್ಮನಕೆರೆಯ ವಿಜಯಲಕ್ಷ್ಮಿ ಫ್ಲ್ಯಾಟ್ನಲ್ಲಿದ್ದ ದರ್ಶನ್ ಗನ್ ಸೀಜ್ ಆಗಿದೆ ಎಂದು ನ್ಯೂಸ್ಫಸ್ಟ್ಗೆ ಪೊಲೀಸ್ ಮೂಲಗಳಿಂದಲೇ ಮಾಹಿತಿ ಸಿಕ್ಕಿದೆ.
ಮೊದಲು ತಾತ್ಕಾಲಿಕವಾಗಿ ಗನ್ ಪರವಾನಗಿ ರದ್ದು ಮಾಡಲಾಗಿತ್ತು. ಪರವಾನಗಿ ರದ್ದು ಮಾಡಿದ್ದ ಬೆನ್ನಲ್ಲೆ ದರ್ಶನ್ಗೆ ರಾಜರಾಜೇಶ್ವರಿ ನಗರ ಪೊಲೀಸ್ರು ನೋಟಿಸ್ ಜಾರಿ ಮಾಡಿದ್ರು. ನೋಟಿಸ್ ಜಾರಿ ಮಾಡಿದ್ರೂ ಗನ್ ಪೊಲೀಸರಿಗೆ ನೀಡಲು ನಟ ದರ್ಶನ್ ಹಿಂದೇಟು ಹಾಕಿದ್ದರು.
ನಟ ದರ್ಶನ್ ಜರ್ಮನ್ ಮೇಡ್ ಗನ್ ಬಳಸುತ್ತಿದ್ದರು. ಕಾರ್ಲ್ ವಾಲ್ತೇರ್ ವಾಫೆನ್ ಫ್ಯಾಬ್ರಿಕ್ ಕಂಪನಿ ಗನ್ ಇದಾಗಿದ್ದು, ಜತೆಗೆ 5 ಸಜೀವ ಗುಂಡುಗಳು ಸೀಜ್ ಮಾಡಿದ್ದಾರೆ.
ಇದನ್ನೂ ಓದಿ:ದರ್ಶನ್ಗೆ ಮತ್ತೊಂದು ಶಾಕ್ ಕೊಟ್ಟ ಬೆಂಗಳೂರು ಪೊಲೀಸರು; ತಾತ್ಕಾಲಿಕವಾಗಿ ಗನ್ ಲೈಸನ್ಸ್ ಅಮಾನತು
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ