Advertisment

BREAKING: ನಟ ದರ್ಶನ್‌ ಗನ್‌ ಸೀಜ್‌ ಮಾಡಿದ ಪೊಲೀಸರು

author-image
Ganesh Nachikethu
Updated On
ಬಳ್ಳಾರಿಯಲ್ಲಿದ್ರೂ ಬಿಡದ ಪವಿತ್ರಾ ಗೌಡ.. ಕೊಲೆ ಕೇಸ್‌ಗೆ ಅತಿ ದೊಡ್ಡ ಟ್ವಿಸ್ಟ್; ದರ್ಶನ್‌ಗೆ ಹೊಸ ಟೆನ್ಷನ್‌; ಏನಾಯ್ತು?
Advertisment
  • ಜಾಮೀನು ಮೇಲೆ ಜೈಲಿನಿಂದ ಹೊರ ಬಂದಿರೋ ನಟ ದರ್ಶನ್​​!
  • ನಟ ದರ್ಶನ್​​ಗೆ ಮತ್ತೊಂದು ಆಘಾತ ಕೊಟ್ಟ ಬೆಂಗಳೂರು ಪೊಲೀಸರು
  • ಕಮಿಷನರ್ ದಯಾನಂದ್ ಆದೇಶದ ಬೆನ್ನಲ್ಲೇ ದರ್ಶನ್ ಗನ್ ಸೀಜ್

ಬೆಂಗಳೂರು: ಕೊಲೆ ಕೇಸ್​ನಲ್ಲಿ ಜೈಲು ಸೇರಿ ಜಾಮೀನು ಮೇಲೆ ಹೊರ ಬಂದಿರೋ ನಟ ದರ್ಶನ್​​ಗೆ ಮತ್ತೊಂದು ಆಘಾತ ಎದುರಾಗಿದೆ. ನಟ ದರ್ಶನ್​​ ಗನ್‌ ಸೀಜ್‌ ಆಗಿದೆ.

Advertisment

ಕಮಿಷನರ್ ದಯಾನಂದ್ ಅವರ ಆದೇಶದ ಬೆನ್ನಲ್ಲೇ ದರ್ಶನ್ ಗನ್ ಸೀಜ್ ಮಾಡಲಾಗಿದೆ. ಇಂದು ಖುದ್ದು ಪೊಲೀಸರು ದರ್ಶನ್ ಮನೆಗೆ ತೆರಳಿ ಗನ್ ಸೀಜ್ ಮಾಡಿದ್ದಾರೆ. ಚೆನ್ನಮ್ಮನಕೆರೆಯ ವಿಜಯಲಕ್ಷ್ಮಿ ಫ್ಲ್ಯಾಟ್‌ನಲ್ಲಿದ್ದ ದರ್ಶನ್ ಗನ್ ಸೀಜ್ ಆಗಿದೆ ಎಂದು ನ್ಯೂಸ್​ಫಸ್ಟ್​​ಗೆ ಪೊಲೀಸ್​ ಮೂಲಗಳಿಂದಲೇ ಮಾಹಿತಿ ಸಿಕ್ಕಿದೆ.

ಮೊದಲು ತಾತ್ಕಾಲಿಕವಾಗಿ ಗನ್ ಪರವಾನಗಿ ರದ್ದು ಮಾಡಲಾಗಿತ್ತು. ಪರವಾನಗಿ ರದ್ದು ಮಾಡಿದ್ದ ಬೆನ್ನಲ್ಲೆ ದರ್ಶನ್‌ಗೆ ರಾಜರಾಜೇಶ್ವರಿ ನಗರ ಪೊಲೀಸ್ರು ನೋಟಿಸ್​ ಜಾರಿ ಮಾಡಿದ್ರು. ನೋಟಿಸ್ ಜಾರಿ ಮಾಡಿದ್ರೂ ಗನ್​ ಪೊಲೀಸರಿಗೆ ನೀಡಲು ನಟ ದರ್ಶನ್​​ ಹಿಂದೇಟು ಹಾಕಿದ್ದರು.

ನಟ ದರ್ಶನ್​​​ ಜರ್ಮನ್​ ಮೇಡ್​ ಗನ್​​ ಬಳಸುತ್ತಿದ್ದರು. ಕಾರ್ಲ್ ವಾಲ್ತೇರ್ ವಾಫೆನ್ ಫ್ಯಾಬ್ರಿಕ್ ಕಂಪನಿ ಗನ್​​ ಇದಾಗಿದ್ದು, ಜತೆಗೆ 5 ಸಜೀವ ಗುಂಡುಗಳು ಸೀಜ್​ ಮಾಡಿದ್ದಾರೆ.

Advertisment

ಇದನ್ನೂ ಓದಿ:ದರ್ಶನ್​ಗೆ ಮತ್ತೊಂದು ಶಾಕ್​ ಕೊಟ್ಟ ಬೆಂಗಳೂರು ಪೊಲೀಸರು; ತಾತ್ಕಾಲಿಕವಾಗಿ ಗನ್​ ಲೈಸನ್ಸ್​ ಅಮಾನತು

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment