Advertisment

ಪ್ರತಿಮಾ ಕೊಲೆ ಪ್ರಕರಣ; ಓರ್ವನ ಬಂಧನ; ಕೆಲಸದಿಂದ ವಜಾಗೊಳಿಸಿದ್ದಕ್ಕೆ ನಡೆಯಿತೇ ಈ ಹತ್ಯೆ?

author-image
AS Harshith
Updated On
ಪ್ರತಿಮಾ ಹತ್ಯೆ ಪ್ರಕರಣದ ಆರೋಪಿ ಹಿಸ್ಟರಿ ಭಯಾನಕ.. 2017ರಲ್ಲಿಯೇ ಅರೆಸ್ಟ್ ಆಗಿದ್ದ ರಾಕ್ಷಸ..!
Advertisment
  • ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣ
  • ಕೊಲೆಗೆ ಸಂಬಂಧಿಸಿದಂತೆ ಮೂವರನ್ನು ವಶಕ್ಕೆ ಪಡೆದು ವಿಚಾರಣೆ
  • ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡಿರುವ ಸುಬ್ರಮಣ್ಯಪುರ ಪೊಲೀಸರು

ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣ ಸಂಭದಿಸಿದಂತೆ ಓರ್ವನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕಿರಣ್ ಎಂಬಾತನನ್ನು ಪೊಲೀಸರು ವಶಕ್ಕೆ ​ಪಡೆದಿದ್ದು, ಈತನೇ ಮಹಿಳಾ ಅಧಿಕಾರಿಯನ್ನು ಕೊಲೆ ಮಾಡಿದ್ದಾನೆ ಎಂಬ ಮಾಹಿತಿಯೊಂದು ಹೊರಬಿದ್ದಿದೆ.

Advertisment

ಸುಬ್ರಮಣ್ಯಪುರ ಪೊಲೀಸರು ಪ್ರತಿಮಾ ಕೊಲೆಗೆ ಸಂಬಂಧಿಸಿದಂತೆ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಅದರಲ್ಲಿ ಕಿರಣ್​ ಎಂಬಾತ ಪ್ರತಿಮಾ ಅವರ ಹಳೆ ಡ್ರೈವರ್​ ಆಗಿದ್ದನು ಎಂಬುದು ತಿಳಿದುಬಂದಿದೆ.

ಸದ್ಯ ಹೊರಬಿದ್ದ ಮಾಹಿತಿ ಪ್ರಕಾರ, ವಿಚಾರಣೆ ನಡೆಸಿದ್ದ ವೇಳೆ ಕೊಲೆ ಮಾಡಿದ್ದು ಒಬ್ಬನೇ ಎಂಬುದು ಬಯಲಿಗೆ ಬಂದಿದೆ. ಕಿರಣ್ ಎಂಬಾತನೇ ಈ ಕೊಲೆ ಮಾಡಿದ್ದಾನೆ ಎಂದು ಹೇಳಲಾಗುತ್ತಿದೆ. ಸದ್ಯ ಕಿರಣ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪ್ರತಿಮಾ ಒಂದು ವಾರದ ಹಿಂದೆ ಕಿರಣ್​ನನ್ನು ಕೆಲಸದಿಂದ ತೆಗೆದಿದ್ದರು. ಕೆಲ ವಿಚಾರಗಳಿಗೆ ಪ್ರತಿಮಾ ಮತ್ತು ಕಿರಣ್ ನಡುವೆ ಭಿನ್ನಾಭಿಪ್ರಾಯ ಬಂದಿತ್ತು. ಕೆಲಸದಿಂದ ವಜಾಗೊಳಿಸಿದ್ದಕ್ಕೆ ಕೋಪಗೊಂಡಿದ್ದ ಕಿರಣ್ ಈ ಕೃತ್ಯ ವೆಸಗಿದ್ದಾನೆ ಎನ್ನಲಾಗುತ್ತಿದೆ.

Advertisment

ಪ್ರತಿಮಾ ಮನೆಗೆ ಬಂದು ಕೊಲೆ ಮಾಡಿರುವುದಾಗಿ ಮಾಹಿತಿ ಹೊರಬಿದ್ದಿದೆ. ಸದ್ಯ ವಶಕ್ಕೆ ಪಡೆದಿರುವ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ನಂತರ ನ್ಯಾಯಾಲಯಕ್ಕೆ ಹಾಜರು ಪಡಿಸಲಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment