newsfirstkannada.com

ಪ್ರತಿಮಾ ಕೊಲೆ ಪ್ರಕರಣ; ಓರ್ವನ ಬಂಧನ; ಕೆಲಸದಿಂದ ವಜಾಗೊಳಿಸಿದ್ದಕ್ಕೆ ನಡೆಯಿತೇ ಈ ಹತ್ಯೆ?

Share :

06-11-2023

    ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣ

    ಕೊಲೆಗೆ ಸಂಬಂಧಿಸಿದಂತೆ ಮೂವರನ್ನು ವಶಕ್ಕೆ ಪಡೆದು ವಿಚಾರಣೆ

    ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡಿರುವ ಸುಬ್ರಮಣ್ಯಪುರ ಪೊಲೀಸರು

ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣ ಸಂಭದಿಸಿದಂತೆ ಓರ್ವನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕಿರಣ್ ಎಂಬಾತನನ್ನು ಪೊಲೀಸರು ವಶಕ್ಕೆ ​ಪಡೆದಿದ್ದು, ಈತನೇ ಮಹಿಳಾ ಅಧಿಕಾರಿಯನ್ನು ಕೊಲೆ ಮಾಡಿದ್ದಾನೆ ಎಂಬ ಮಾಹಿತಿಯೊಂದು ಹೊರಬಿದ್ದಿದೆ.

ಸುಬ್ರಮಣ್ಯಪುರ ಪೊಲೀಸರು ಪ್ರತಿಮಾ ಕೊಲೆಗೆ ಸಂಬಂಧಿಸಿದಂತೆ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಅದರಲ್ಲಿ ಕಿರಣ್​ ಎಂಬಾತ ಪ್ರತಿಮಾ ಅವರ ಹಳೆ ಡ್ರೈವರ್​ ಆಗಿದ್ದನು ಎಂಬುದು ತಿಳಿದುಬಂದಿದೆ.

ಸದ್ಯ ಹೊರಬಿದ್ದ ಮಾಹಿತಿ ಪ್ರಕಾರ, ವಿಚಾರಣೆ ನಡೆಸಿದ್ದ ವೇಳೆ ಕೊಲೆ ಮಾಡಿದ್ದು ಒಬ್ಬನೇ ಎಂಬುದು ಬಯಲಿಗೆ ಬಂದಿದೆ. ಕಿರಣ್ ಎಂಬಾತನೇ ಈ ಕೊಲೆ ಮಾಡಿದ್ದಾನೆ ಎಂದು ಹೇಳಲಾಗುತ್ತಿದೆ. ಸದ್ಯ ಕಿರಣ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪ್ರತಿಮಾ ಒಂದು ವಾರದ ಹಿಂದೆ ಕಿರಣ್​ನನ್ನು ಕೆಲಸದಿಂದ ತೆಗೆದಿದ್ದರು. ಕೆಲ ವಿಚಾರಗಳಿಗೆ ಪ್ರತಿಮಾ ಮತ್ತು ಕಿರಣ್ ನಡುವೆ ಭಿನ್ನಾಭಿಪ್ರಾಯ ಬಂದಿತ್ತು. ಕೆಲಸದಿಂದ ವಜಾಗೊಳಿಸಿದ್ದಕ್ಕೆ ಕೋಪಗೊಂಡಿದ್ದ ಕಿರಣ್ ಈ ಕೃತ್ಯ ವೆಸಗಿದ್ದಾನೆ ಎನ್ನಲಾಗುತ್ತಿದೆ.

ಪ್ರತಿಮಾ ಮನೆಗೆ ಬಂದು ಕೊಲೆ ಮಾಡಿರುವುದಾಗಿ ಮಾಹಿತಿ ಹೊರಬಿದ್ದಿದೆ. ಸದ್ಯ ವಶಕ್ಕೆ ಪಡೆದಿರುವ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ನಂತರ ನ್ಯಾಯಾಲಯಕ್ಕೆ ಹಾಜರು ಪಡಿಸಲಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

 

ಪ್ರತಿಮಾ ಕೊಲೆ ಪ್ರಕರಣ; ಓರ್ವನ ಬಂಧನ; ಕೆಲಸದಿಂದ ವಜಾಗೊಳಿಸಿದ್ದಕ್ಕೆ ನಡೆಯಿತೇ ಈ ಹತ್ಯೆ?

https://newsfirstlive.com/wp-content/uploads/2023/11/Prathima-4.jpg

    ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣ

    ಕೊಲೆಗೆ ಸಂಬಂಧಿಸಿದಂತೆ ಮೂವರನ್ನು ವಶಕ್ಕೆ ಪಡೆದು ವಿಚಾರಣೆ

    ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡಿರುವ ಸುಬ್ರಮಣ್ಯಪುರ ಪೊಲೀಸರು

ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣ ಸಂಭದಿಸಿದಂತೆ ಓರ್ವನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕಿರಣ್ ಎಂಬಾತನನ್ನು ಪೊಲೀಸರು ವಶಕ್ಕೆ ​ಪಡೆದಿದ್ದು, ಈತನೇ ಮಹಿಳಾ ಅಧಿಕಾರಿಯನ್ನು ಕೊಲೆ ಮಾಡಿದ್ದಾನೆ ಎಂಬ ಮಾಹಿತಿಯೊಂದು ಹೊರಬಿದ್ದಿದೆ.

ಸುಬ್ರಮಣ್ಯಪುರ ಪೊಲೀಸರು ಪ್ರತಿಮಾ ಕೊಲೆಗೆ ಸಂಬಂಧಿಸಿದಂತೆ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಅದರಲ್ಲಿ ಕಿರಣ್​ ಎಂಬಾತ ಪ್ರತಿಮಾ ಅವರ ಹಳೆ ಡ್ರೈವರ್​ ಆಗಿದ್ದನು ಎಂಬುದು ತಿಳಿದುಬಂದಿದೆ.

ಸದ್ಯ ಹೊರಬಿದ್ದ ಮಾಹಿತಿ ಪ್ರಕಾರ, ವಿಚಾರಣೆ ನಡೆಸಿದ್ದ ವೇಳೆ ಕೊಲೆ ಮಾಡಿದ್ದು ಒಬ್ಬನೇ ಎಂಬುದು ಬಯಲಿಗೆ ಬಂದಿದೆ. ಕಿರಣ್ ಎಂಬಾತನೇ ಈ ಕೊಲೆ ಮಾಡಿದ್ದಾನೆ ಎಂದು ಹೇಳಲಾಗುತ್ತಿದೆ. ಸದ್ಯ ಕಿರಣ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪ್ರತಿಮಾ ಒಂದು ವಾರದ ಹಿಂದೆ ಕಿರಣ್​ನನ್ನು ಕೆಲಸದಿಂದ ತೆಗೆದಿದ್ದರು. ಕೆಲ ವಿಚಾರಗಳಿಗೆ ಪ್ರತಿಮಾ ಮತ್ತು ಕಿರಣ್ ನಡುವೆ ಭಿನ್ನಾಭಿಪ್ರಾಯ ಬಂದಿತ್ತು. ಕೆಲಸದಿಂದ ವಜಾಗೊಳಿಸಿದ್ದಕ್ಕೆ ಕೋಪಗೊಂಡಿದ್ದ ಕಿರಣ್ ಈ ಕೃತ್ಯ ವೆಸಗಿದ್ದಾನೆ ಎನ್ನಲಾಗುತ್ತಿದೆ.

ಪ್ರತಿಮಾ ಮನೆಗೆ ಬಂದು ಕೊಲೆ ಮಾಡಿರುವುದಾಗಿ ಮಾಹಿತಿ ಹೊರಬಿದ್ದಿದೆ. ಸದ್ಯ ವಶಕ್ಕೆ ಪಡೆದಿರುವ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ನಂತರ ನ್ಯಾಯಾಲಯಕ್ಕೆ ಹಾಜರು ಪಡಿಸಲಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

 

Load More