/newsfirstlive-kannada/media/post_attachments/wp-content/uploads/2024/06/SCHOOL-RAIN.jpg)
ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಉಂಟಾದ ಹವಾಮಾನ ವೈಪರೀತ್ಯಕ್ಕೆ ಮಳೆಯ ಆರ್ಭಟ ಜೋರಾಗಿದೆ. ರಾಜ್ಯದ ಹಲವೆಡೆ ಇಂದು ಬೆಳಗ್ಗೆಯಿಂದ ಒಂದೇ ಸಮನೆ ಮಳೆಯಾಗುತ್ತಿದ್ದು, ವಾಹನ ಸವಾರರು ಹೈರಾಣಾಗಿದ್ದಾರೆ. ನಿರಂತರ ಸುರಿದ ಮಳೆಗೆ ಸಿಲಿಕಾನ್ ಸಿಟಿಯ ಹಲವೆಡೆ ಅನಾಹುತಗಳು ಸಂಭವಿಸಿದೆ.
ಬೆಂಗಳೂರು ನಗರದಲ್ಲಿ ಇಂದು ಮಾತ್ರವಲ್ಲ ಮುಂದಿನ 72 ಗಂಟೆಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆ ಈ ಬಗ್ಗೆ ಮಹತ್ವದ ಮುನ್ಸೂಚನೆ ನೀಡಿದೆ. ಕೇವಲ ಬೆಂಗಳೂರು ಮಾತ್ರವಲ್ಲ, ರಾಜ್ಯದ ಉತ್ತರ ಕರಾವಳಿ ಹಾಗೂ ದಕ್ಷಿಣ ಕರಾವಳಿ ಭಾಗದಲ್ಲಿ ಉತ್ತಮ ಮಳೆಯಾಗಲಿದೆ ಎನ್ನಲಾಗಿದೆ.
ನಾಳೆಯು ಬೆಂಗಳೂರು ನಗರದಾದ್ಯಂತ ಮಳೆಯಾಗುವ ಸಾಧ್ಯತೆ ಇದ್ದು ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಅಕ್ಟೋಬರ್ 20ರವರೆಗೆ ದಸರಾ ರಜೆ ಇದೆ. ಆದ್ರೆ ನಗರದ ಖಾಸಗಿ ಶಾಲೆಗಳು ಕಳೆದ ಸೋಮವಾರದಿಂದಲೇ ಆರಂಭ ಮಾಡಿವೆ.
ಇದನ್ನೂ ಓದಿ: Chennai Video: ರಸ್ತೆ ಪೂರ್ತಿ ನೀರು, ಫ್ಲೈ ಓವರ್ ಮೇಲೆ ಕಾರು! ಮಳೆ ನೀರಿನಿಂದ ರಕ್ಷಿಸಲು ಎಂಥಾ ಐಡಿಯಾ ಗುರೂ
ನಗರದಲ್ಲಿ ಇಂದು ನಿರಂತರವಾಗಿ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ಮಕ್ಕಳಿಗೆ ಶಾಲೆಗೆ ಬರಲು ಕಷ್ಟ ಎದುರಾಗಿದೆ. ಹೀಗಾಗಿ ರಾಜಧಾನಿಯ ಶಾಲೆಗಳಿಗೆ ರಜೆ ನೀಡಲು ಬೆಂಗಳೂರು ನಗರ ಡಿಸಿ ಜಗದೀಶ್ ಅವರು ಸೂಚನೆ ನೀಡಿದ್ದಾರೆ. ನಾಳೆ ಬೆಂಗಳೂರು ವ್ಯಾಪ್ತಿಯ ಶಾಲಾ ಕಾಲೇಜಿಗಳಿಗೆ ರಜೆ ಘೋಷಿಸಿ ಬೆಂಗಳೂರು ಜಿಲ್ಲಾಡಳಿತ ಆದೇಶ ನೀಡಿದೆ.
ನ್ಯೂಸ್ ಫಸ್ಟ್ ಚಾನೆಲ್ಗೆ ಬೆಂಗಳೂರು ಡಿಸಿ ಜಗದೀಶ್ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ನಾಳೆಯೂ ಮಳೆ ಮುಂದುವರೆದ್ರೆ ನಾಡಿದ್ದು ರಜೆ ನೀಡುವ ಬಗ್ಗೆ ನಾಳೆ ಸಂಜೆ ನಿರ್ಧಾರ ಮಾಡಲಾಗುವುದು ಎಂದಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ