2ನೇ ಕ್ರಾಸ್ನಲ್ಲಿ ನಡೆದುಕೊಂಡು ಹೋಗುವಾಗ ಬಿದ್ದ ಮರ
ಮರದ ಕೊಂಬೆ ಬಿದ್ದ ರಭಸಕ್ಕೆ ಬೆನ್ನು ಮೂಳೆ ಮುರಿದಿದೆ
ಮಳೆಯಲ್ಲಿ ನಡೆದುಕೊಂಡು ಹೋಗುವಾಗ ಟೆಕ್ಕಿಗೆ ಗಾಯ
ಬೆಂಗಳೂರು: ಮಳೆ ಸುರಿಯುವಾಗ ಮರದ ಕೊಂಬೆ ಬಿದ್ದು ರಸ್ತೆ ಮೇಲೆ ಹೋಗುತ್ತಿದ್ದ ಓರ್ವ ಟೆಕ್ಕಿಯ ಬೆನ್ನು ಮೂಳೆ ಮುರಿದ ಘಟನೆ ಸಿವಿ ರಾಮನ್ ನಗರದ ನಾಗವಾರಪಾಳ್ಯದ 2ನೇ ಕ್ರಾಸ್ನಲ್ಲಿ ನಡೆದಿದೆ.
ಇದನ್ನೂ ಓದಿ: ಮಹಿಳೆಗೆ ಚಾಕು ಇರಿದು ಬರ್ಬರವಾಗಿ ಹತ್ಯೆ ಮಾಡಿದ ಜೊತೆಗಾರ.. ಕಾರಣ..?
ಐಟಿ ಕಂಪನಿ ಉದ್ಯೋಗಿ ರವಿಕುಮಾರ್ (26) ಗಾಯಾಳು. ಮಳೆ ಸುರಿಯುತ್ತಿರುವಾಗ ಟೆಕ್ಕಿಯು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಇದೇ ಸಮಯಕ್ಕೆ ಸರಿಯಾಗಿ ಮರವೊಂದು ಮುರಿದು ಟೆಕ್ಕಿ ಮೇಲೆ ಬಿದ್ದಿದೆ. ಪರಿಣಾಮ ಬೆನ್ನು ಮೂಳೆ ಮುರಿದು ಹೋಗಿ ತೀವ್ರವಾಗಿ ಗಾಯಗೊಂಡಿದ್ದಾನೆ. ಸದ್ಯ ಗಾಯಾಳುವಿಗೆ ನಗರದ ಹೆಚ್ಎಎಲ್ನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮರ ಜೋರಾಗಿ ಬಿದ್ದಿದ್ದರಿಂದ ಟೆಕ್ಕಿಯ ಸ್ಪೈನ್ ಕಾರ್ಡ್ ಮುರಿದು ಹೋಗಿದೆ. ಬಿಬಿಎಂಪಿ ಉಸ್ತುವಾರಿಯಲ್ಲಿ ಗಾಯಾಳುವಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
2ನೇ ಕ್ರಾಸ್ನಲ್ಲಿ ನಡೆದುಕೊಂಡು ಹೋಗುವಾಗ ಬಿದ್ದ ಮರ
ಮರದ ಕೊಂಬೆ ಬಿದ್ದ ರಭಸಕ್ಕೆ ಬೆನ್ನು ಮೂಳೆ ಮುರಿದಿದೆ
ಮಳೆಯಲ್ಲಿ ನಡೆದುಕೊಂಡು ಹೋಗುವಾಗ ಟೆಕ್ಕಿಗೆ ಗಾಯ
ಬೆಂಗಳೂರು: ಮಳೆ ಸುರಿಯುವಾಗ ಮರದ ಕೊಂಬೆ ಬಿದ್ದು ರಸ್ತೆ ಮೇಲೆ ಹೋಗುತ್ತಿದ್ದ ಓರ್ವ ಟೆಕ್ಕಿಯ ಬೆನ್ನು ಮೂಳೆ ಮುರಿದ ಘಟನೆ ಸಿವಿ ರಾಮನ್ ನಗರದ ನಾಗವಾರಪಾಳ್ಯದ 2ನೇ ಕ್ರಾಸ್ನಲ್ಲಿ ನಡೆದಿದೆ.
ಇದನ್ನೂ ಓದಿ: ಮಹಿಳೆಗೆ ಚಾಕು ಇರಿದು ಬರ್ಬರವಾಗಿ ಹತ್ಯೆ ಮಾಡಿದ ಜೊತೆಗಾರ.. ಕಾರಣ..?
ಐಟಿ ಕಂಪನಿ ಉದ್ಯೋಗಿ ರವಿಕುಮಾರ್ (26) ಗಾಯಾಳು. ಮಳೆ ಸುರಿಯುತ್ತಿರುವಾಗ ಟೆಕ್ಕಿಯು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಇದೇ ಸಮಯಕ್ಕೆ ಸರಿಯಾಗಿ ಮರವೊಂದು ಮುರಿದು ಟೆಕ್ಕಿ ಮೇಲೆ ಬಿದ್ದಿದೆ. ಪರಿಣಾಮ ಬೆನ್ನು ಮೂಳೆ ಮುರಿದು ಹೋಗಿ ತೀವ್ರವಾಗಿ ಗಾಯಗೊಂಡಿದ್ದಾನೆ. ಸದ್ಯ ಗಾಯಾಳುವಿಗೆ ನಗರದ ಹೆಚ್ಎಎಲ್ನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮರ ಜೋರಾಗಿ ಬಿದ್ದಿದ್ದರಿಂದ ಟೆಕ್ಕಿಯ ಸ್ಪೈನ್ ಕಾರ್ಡ್ ಮುರಿದು ಹೋಗಿದೆ. ಬಿಬಿಎಂಪಿ ಉಸ್ತುವಾರಿಯಲ್ಲಿ ಗಾಯಾಳುವಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ