ಬೆಂಗಳೂರಿನ ಯುವಕ ಜೋಗ ಜಲಪಾತದಲ್ಲಿ ಕಣ್ಮರೆ.. ಶೋಧ ಕಾರ್ಯ

author-image
Bheemappa
Updated On
ಬೆಂಗಳೂರಿನ ಯುವಕ ಜೋಗ ಜಲಪಾತದಲ್ಲಿ ಕಣ್ಮರೆ.. ಶೋಧ ಕಾರ್ಯ
Advertisment
  • ಪ್ರವಾಸಕ್ಕೆಂದು ಜೋಗ ಜಲಪಾತ ನೋಡಲು ಆಗಮಿಸಿದ್ದ ಯುವಕ
  • ಯುವಕನಿಗಾಗಿ ಶೋಧ ಕಾರ್ಯ ನಡೆಸ್ತಿರೋ ಕಾರ್ಗಲ್ ಪೊಲೀಸರು
  • ಜಲಪಾತದ ಬಳಿ ಯುವಕ ಕಣ್ಮರೆಯಾಗಿ ಎಷ್ಟು ದಿನಗಳು ಆಗಿವೆ..?

ಶಿವಮೊಗ್ಗ: ಬೆಂಗಳೂರಿನಿಂದ ಪ್ರವಾಸಕ್ಕೆಂದು ಬಂದಿದ್ದ ಯುವಕನೊರ್ವ ಜೋಗ ಜಲಪಾತದ ಬಳಿ ಕಣ್ಮರೆಯಾಗಿದ್ದಾನೆ. ಯುವಕನಿಗಾಗಿ ಕಳೆದ 6 ದಿನಗಳಿಂದ ಶೋಧಕಾರ್ಯ ನಡೆಯುತ್ತಿದೆ.

ಇದನ್ನೂ ಓದಿ:ಇಂದಿನಿಂದ ಪವಿತ್ರ ಶ್ರಾವಣ ತಿಂಗಳು ಆರಂಭ: ಶ್ರಾವಣದ ವಿಶೇಷತೆ, ಮಹತ್ವಗಳೇನು.?

ಗದಗ ಮೂಲದ ಆನಂದ್ (24) ನಾಪತ್ತೆಯಾಗಿರುವ ಯುವಕ. ಬೆಂಗಳೂರಿನಲ್ಲಿ ಟೀ ಅಂಗಡಿ ನಡೆಸುತ್ತಿದ್ದ ಈ ಯುವಕ ಜೋಗ ಜಲಪಾತ ನೋಡಲೆಂದು ಇದೇ ಜುಲೈ 15ರಂದು ಜಲಪಾತದ ಬಳಿ ಆಗಮಿಸಿದ್ದನು. ಯಾತ್ರಿ ನಿವಾಸದ ಸೀತಾಕಟ್ಟೆ ಸೇತುವೆ ಬಳಿಯಿಂದ ಬೇಲಿ ದಾಟಿ, ಜಲಪಾತದ ಬಳಿ ಹೋಗಿದ್ದನು. ಆದರೆ ಅಂದಿನಿಂದ ಯುವಕ ನಾಪತ್ತೆಯಾಗಿದ್ದಾನೆ. ಬ್ಯಾಗ್ ಮಾತ್ರ ಸಿಕ್ಕಿದ್ದು ಯುವಕ ಮಾತ್ರ ಎಲ್ಲಿದ್ದಾನೆ ಎಂದು ತಿಳಿದು ಬಂದಿಲ್ಲ.

ಇದನ್ನೂ ಓದಿ: ಅಮೆರಿಕದ ಅಧ್ಯಕ್ಷರಾಗ್ತಾರಾ ಭಾರತ ಮೂಲದ ಕಮಲಾ ಹ್ಯಾರಿಸ್.. ಜೋ ಬೈಡನ್​ ಹೇಳಿದ್ದೇನು?

ಕಾರ್ಗಲ್ ಠಾಣೆ ಪೊಲೀಸರು ನಾಪತ್ತೆ ಪ್ರಕರಣ ದಾಖಲಿಸಿಕೊಂಡು ಜಲಪಾತದ ಬಳಿ ಯುವಕನಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಜೋಗ ಜಲಪಾತದ ಬಳಿ ಬೀಳುತ್ತಿರುವ ಭಾರೀ ಮಳೆ ಹಾಗೂ ಮಂಜು ಮುಸುಕಿದ ವಾತಾವರಣ ಕೆಲಸಕ್ಕೆ ಅಡ್ಡಿ ಆಗುತ್ತಿದೆ. ಕಳೆದ 6 ದಿನಳಿಂದ ಈ ಹುಡುಕಾಟ ನಡೆಸಲಾಗುತ್ತಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment