/newsfirstlive-kannada/media/post_attachments/wp-content/uploads/2025/06/Flight-Crashes15.jpg)
ಗುಜರಾತ್​ನ ಅಹಮದಾಬಾದ್​ನಲ್ಲಿ ಏರ್​ ಇಂಡಿಯಾ ವಿಮಾನ ಪತನಗೊಂಡು ಬರೋಬ್ಬರಿ 265 ಮಂದಿ ಜೀವ ಕಳೆದುಕೊಂಡಿದ್ದಾರೆ. ಲಂಡನ್​ಗೆ ಹೊರಟಿದ್ದ ಬೋಯಿಂಗ್​ ಡ್ರೀಮ್​ಲೈನರ್​ ವಿಮಾನದಲ್ಲಿ 242 ಪ್ರಯಾಣಿಸುತ್ತಿದ್ದರು. ಅದರಲ್ಲಿ ಓರ್ವ ಪ್ರಯಾಣಿಕನ ಪ್ರಾಣ ಉಳಿದಿದೆ.
ಇದನ್ನೂ ಓದಿ:265 ಮಂದಿಯ ಜೀವ ತೆಗೆದ ಏರ್ ಇಂಡಿಯಾ ವಿಮಾನ.. ದುರಂತಕ್ಕೆ ಕಾರಣವಾಯ್ತಾ ಈ 8 ಸಂಗತಿಗಳು..?
ಏರ್ ಇಂಡಿಯಾ ವಿಮಾನ ಪತನವಾದ ವೇಳೆ ಬಿ.ಜೆ. ಮೆಡಿಕಲ್​ ಕಾಲೇಜಿನ ಹಾಸ್ಟೆಲ್​ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಟ್ಟಡ ಧ್ವಂಸವಾಗಿದೆ. ಇದ್ರಿಂದಾಗಿ ಹಾಸ್ಟೆಲ್​ನ ಡೈನಿಂಗ್​ ಹಾಲ್​ನಲ್ಲಿ ಕುಳಿತು ಊಟ ಮಾಡ್ತಿದ್ದ ವಿದ್ಯಾರ್ಥಿಗಳ ಪೈಕಿ 24 ವಿದ್ಯಾರ್ಥಿಗಳು ದಾರುಣವಾಗಿ ಮೃತಪಟ್ಟಿದ್ದಾರೆ.
One passenger in the Air India flight was travelling with Bhagavad Gita , which is completely safe and has been found in the debris of the plane from the crash site. pic.twitter.com/tzR9xTYWta
— Jeet (@JeetN25)
One passenger in the Air India flight was travelling with Bhagavad Gita , which is completely safe and has been found in the debris of the plane from the crash site. pic.twitter.com/tzR9xTYWta
— Jeet (@JeetN25) June 13, 2025
">June 13, 2025
ವಿಮಾನ ದುರಂತ ನಡೆದ ಸ್ಥಳದಲ್ಲಿ ಭಗವದ್ಗೀತೆ ಪತ್ತೆಯಾಗಿದೆ. ರಕ್ಷಣಾ ಕಾರ್ಯಾಚರಣೆಯ ವೇಳೆ ಅವಶೇಷಗಳ ಅಡಿಯಲ್ಲಿ ಭಗವದ್ಗೀತೆಯೊಂದು ಸಿಕ್ಕಿದೆ. ಈ ದುರಂತದಲ್ಲಿ ಎಲ್ಲವೂ ಸುಟ್ಟುಕರಕಲಾದರೂ ಈ ಭಗವದ್ಗೀತೆ ಪುಸ್ತಕಕ್ಕೆ ಮಾತ್ರ ಏನು ಆಗಯೇ ಇದ್ದಿದ್ದನ್ನು ಕಂಡು ಎಲ್ಲರೂ ಆಶ್ಚರ್ಯಚಕಿತರಾಗಿದ್ದಾರೆ. ಸದ್ಯ ಇದೇ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us