/newsfirstlive-kannada/media/post_attachments/wp-content/uploads/2025/06/Flight-Crashes15.jpg)
ಗುಜರಾತ್ನ ಅಹಮದಾಬಾದ್ನಲ್ಲಿ ಏರ್ ಇಂಡಿಯಾ ವಿಮಾನ ಪತನಗೊಂಡು ಬರೋಬ್ಬರಿ 265 ಮಂದಿ ಜೀವ ಕಳೆದುಕೊಂಡಿದ್ದಾರೆ. ಲಂಡನ್ಗೆ ಹೊರಟಿದ್ದ ಬೋಯಿಂಗ್ ಡ್ರೀಮ್ಲೈನರ್ ವಿಮಾನದಲ್ಲಿ 242 ಪ್ರಯಾಣಿಸುತ್ತಿದ್ದರು. ಅದರಲ್ಲಿ ಓರ್ವ ಪ್ರಯಾಣಿಕನ ಪ್ರಾಣ ಉಳಿದಿದೆ.
ಇದನ್ನೂ ಓದಿ:265 ಮಂದಿಯ ಜೀವ ತೆಗೆದ ಏರ್ ಇಂಡಿಯಾ ವಿಮಾನ.. ದುರಂತಕ್ಕೆ ಕಾರಣವಾಯ್ತಾ ಈ 8 ಸಂಗತಿಗಳು..?
ಏರ್ ಇಂಡಿಯಾ ವಿಮಾನ ಪತನವಾದ ವೇಳೆ ಬಿ.ಜೆ. ಮೆಡಿಕಲ್ ಕಾಲೇಜಿನ ಹಾಸ್ಟೆಲ್ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಟ್ಟಡ ಧ್ವಂಸವಾಗಿದೆ. ಇದ್ರಿಂದಾಗಿ ಹಾಸ್ಟೆಲ್ನ ಡೈನಿಂಗ್ ಹಾಲ್ನಲ್ಲಿ ಕುಳಿತು ಊಟ ಮಾಡ್ತಿದ್ದ ವಿದ್ಯಾರ್ಥಿಗಳ ಪೈಕಿ 24 ವಿದ್ಯಾರ್ಥಿಗಳು ದಾರುಣವಾಗಿ ಮೃತಪಟ್ಟಿದ್ದಾರೆ.
One passenger in the Air India flight was travelling with Bhagavad Gita , which is completely safe and has been found in the debris of the plane from the crash site. pic.twitter.com/tzR9xTYWta
— Jeet (@JeetN25)
One passenger in the Air India flight was travelling with Bhagavad Gita , which is completely safe and has been found in the debris of the plane from the crash site. pic.twitter.com/tzR9xTYWta
— Jeet (@JeetN25) June 13, 2025
">June 13, 2025
ವಿಮಾನ ದುರಂತ ನಡೆದ ಸ್ಥಳದಲ್ಲಿ ಭಗವದ್ಗೀತೆ ಪತ್ತೆಯಾಗಿದೆ. ರಕ್ಷಣಾ ಕಾರ್ಯಾಚರಣೆಯ ವೇಳೆ ಅವಶೇಷಗಳ ಅಡಿಯಲ್ಲಿ ಭಗವದ್ಗೀತೆಯೊಂದು ಸಿಕ್ಕಿದೆ. ಈ ದುರಂತದಲ್ಲಿ ಎಲ್ಲವೂ ಸುಟ್ಟುಕರಕಲಾದರೂ ಈ ಭಗವದ್ಗೀತೆ ಪುಸ್ತಕಕ್ಕೆ ಮಾತ್ರ ಏನು ಆಗಯೇ ಇದ್ದಿದ್ದನ್ನು ಕಂಡು ಎಲ್ಲರೂ ಆಶ್ಚರ್ಯಚಕಿತರಾಗಿದ್ದಾರೆ. ಸದ್ಯ ಇದೇ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ