Advertisment

ತಾಯ್ನಾಡಿಗೆ ಬಂದ ಮಂಜುನಾಥ್, ಭರತ್ ಮೃತದೇಹ.. ಅಗಲಿದ ಪುತ್ರನ ನೋಡಿ ತಂದೆ-ತಾಯಿ ಕಣ್ಣೀರು

author-image
Ganesh
Updated On
ತಾಯ್ನಾಡಿಗೆ ಬಂದ ಮಂಜುನಾಥ್, ಭರತ್ ಮೃತದೇಹ.. ಅಗಲಿದ ಪುತ್ರನ ನೋಡಿ ತಂದೆ-ತಾಯಿ ಕಣ್ಣೀರು
Advertisment
  • ದಾಳಿಗೆ ಬಲಿಯಾದ ಕನ್ನಡಿಗರಿಗೆ ತವರಿನಲ್ಲಿ ಅಂತಿಮ ನಮನ
  • ಕಾಶ್ಮೀರದಿಂದ ಬಂದ ಮಂಜುನಾಥ್ ಮೃತದೇಹ ಶಿವಮೊಗ್ಗಕ್ಕೆ ರವಾನೆ
  • ಬೆಂಗಳೂರಿನ ಮನೆ ಬಳಿ ಭರತ್​ ಭೂಷಣ್​​​​ ಅಂತಿಮ ದರ್ಶನ

ಬೆಂಗಳೂರು: ಜಮ್ಮು-ಕಾಶ್ಮೀರದ ಪಹಲ್ಗಾಮ್​ನಲ್ಲಿ ನಡೆದ ಉಗ್ರರ ದಾಳಿಗೆ ಜೀವ ಕಳೆದುಕೊಂಡ ಕನ್ನಡಿಗರ ಮೃತದೇಹ ಬೆಂಗಳೂರಿಗೆ ಶಿಫ್ಟ್​ ಆಗಿವೆ. ಶಿವಮೊಗ್ಗದ ಮಂಜುನಾಥ್ ಹಾಗೂ ಹಾವೇರಿ ಮೂಲದ ಭರತ್ ಭೂಷಣ್ ಮೃತದೇಹಗಳು ತಾಯ್ನಾಡು ತಲುಪಿದ್ದು, ಬೆಂಗಳೂರು ಏರ್​​ಫೋರ್ಟ್​ಗೆ ಬಂದ ಮೃತದೇಹಗಳನ್ನು ಆ್ಯಂಬುಲೆನ್ಸ್​ ಮೂಲಕ ತವರೂರಿಗೆ ಕಳುಹಿಸಲಾಗಿದೆ.

Advertisment

ಇದನ್ನೂ ಓದಿ: ಪತ್ನಿ, ಮಗನ ಎದುರೇ ಜೀವಬಿಟ್ಟ US ಮೂಲದ ಟೆಕ್ಕಿ.. ದಾಳಿಗೂ ಮುನ್ನ ಸಹೋದರನಿಗೆ ಕರೆ ಮಾಡಿ ಹೇಳಿದ್ದೇನು?

publive-image

ಕಾರ್ಗೋ ವಿಮಾನದ ಮೂಲಕ ಮೃತದೇಹವನ್ನು ಬೆಂಗಳೂರಿಗೆ ತರಲಾಯಿತು. ಕೆಂಪೇಗೌಡ ಅಂತಾರಾಷ್ಟ್ರೀಯ ಏರ್‌ಪೋರ್ಟ್‌ನಲ್ಲಿ ಕೇಂದ್ರ ಸಚಿವ ವಿ.ಸೋಮಣ್ಣ, ಸಂಸದ ತೇಜಸ್ವಿ ಸೂರ್ಯ ನಮನ ಸಲ್ಲಿಸಿದರು. ಇದೇ ವೇಳೆ ಸಂತ್ರಸ್ತ ಕುಟುಂಬಸ್ಥರಿಗೆ ವಿ. ಸೋಮಣ್ಣ ಸಾಂತ್ವನ ಹೇಳಿದರು.

publive-image

ಬಳಿಕ ಮಾತನಾಡಿದ ಅವರು, ಉಗ್ರರು ಅಮಾಯಕ ಜನರನ್ನ ಬಲಿ ಪಡೆದಿದ್ದಾರೆ. ಮುಗ್ಧರ ಕೊಲೆ ಮಾಡಿರುವರನ್ನ ತಕ್ಕ ಶಿಕ್ಷೆ ಕೊಡ್ತೀವಿ. ಕುಟುಂಬಸ್ಥರಿಗೆ ನೋವು ಭರಿಸುವ ಶಕ್ತಿ ಭಗವಂತ ನೀಡಲಿ ಎಂದರು.

Advertisment

ಇದನ್ನೂ ಓದಿ:BREAKING; ಪಾಕ್​​ಗೆ ಸಿಂಧೂ ನದಿ ನೀರು ಹಂಚಿಕೆ ರದ್ದು.. PM ಮೋದಿ ನೇತೃತ್ವದ ಸಭೆಯಲ್ಲಿ ಮಹತ್ವದ 5 ನಿರ್ಧಾರ

publive-image

ಇನ್ನು ಮಂಜುನಾಥ್ ಮೃತದೇಹ ತವರೂರು ಶಿವಮೊಗ್ಗದತ್ತ ಹೊರಟಿದ್ದು, ಬೆಳಗ್ಗೆ 9 ಗಂಟೆಗೆ ಶಿವಮೊಗ್ಗ ತಲುಪಬಹುದು ಅಂತ ಶಾಸಕ ಚನ್ನಬಸಪ್ಪ ತಿಳಿಸಿದ್ದಾರೆ. ಮಂಜುನಾಥ್ ಪಾರ್ಥಿವ ಶರೀರದ ದರ್ಶನಕ್ಕೆ ಬರುವವರಿಗೆ ಎಲ್ಲಾ ವ್ಯವಸ್ಥೆ ಮಾಡಲಾಗಿದ್ದು, ಅರ್ಧ ದಿನ ಅಂಗಡಿ ಬಂದ್ ಮಾಡಿ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಜ್ಯುವೆಲ್ಲರಿ ಶಾಪ್, ಹೋಟೆಲ್, ವರ್ತಕರ ಸಂಘ ತೀರ್ಮಾನ ಮಾಡಿದೆ.. ಸ್ವಯಂ ಪ್ರೇರಿತವಾಗಿ ಶಿವಮೊಗ್ಗ ನಗರ ಬಂದ್ ಸಾಧ್ಯತೆ ಇದೆ ಅಂತ ಶಾಸಕ ಚನ್ನಬಸಪ್ಪ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಮಗನಿಗೆ ತಿಂಡಿ ತರೋಕೆ ಹೋದ ಪತಿ ಬರಲೇ ಇಲ್ಲ!​.. ಗಂಡನ ಸಾವು ಕಣ್ಣಾರೆ ಕಂಡ ಹೆಂಡತಿ ನರಕಯಾತನೆ

Advertisment

publive-image

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment