ಆಪರೇಷನ್ ಸಿಂಧೂರ್​ ಬೆನ್ನಲ್ಲೇ ರಾಜನಾಥ್ ಸಿಂಗ್​ ಟ್ವೀಟ್​.. ಕೇವಲ 4 ಪದದಲ್ಲಿ ಹೇಳಿದ್ದೇನು..?

author-image
Ganesh
Updated On
ಆಪರೇಷನ್ ಸಿಂಧೂರ್​ ಬೆನ್ನಲ್ಲೇ ರಾಜನಾಥ್ ಸಿಂಗ್​ ಟ್ವೀಟ್​.. ಕೇವಲ 4 ಪದದಲ್ಲಿ ಹೇಳಿದ್ದೇನು..?
Advertisment
  • ನಡುರಾತ್ರಿಯೇ ಉಗ್ರರ ಸಂಹಾರಕ್ಕಿಳಿದ ಭಾರತ
  • ಉಗ್ರರ 9 ನೆಲೆಗಳ ಮೇಲೆ ಭಾರತ ಭೀಕರ ದಾಳಿ
  • ಪಾಕ್ ಮೇಲೆ ‘ಆಪರೇಷನ್ ಸಿಂಧೂರ್’ ಆರಂಭ

ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆಯು ‘ಆಪರೇಷನ್ ಸಿಂಧೂರ್’ ಆರಂಭಿಸಿದೆ. ಪಾಕಿಸ್ತಾನದಲ್ಲಿರುವ ಒಟ್ಟು 9 ಭಯೋತ್ಪಾದಕ ಅಡಗುತಾಣಗಳ ಮೇಲೆ ಅಟ್ಯಾಕ್ ಮಾಡಲಾಗಿದೆ. ವರದಿಗಳ ಪ್ರಕಾರ ಸುಮಾರು 70ಕ್ಕೂ ಹೆಚ್ಚು ಉಗ್ರರು ಹತರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಆರೇಷನ್​ ಸಿಂಧೂರ್​ ಬೆನ್ನಲ್ಲೇ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಟ್ವೀಟ್ ಮಾಡಿದ್ದಾರೆ. ಭಾರತ್​ ಮಾತಾಕೀ ಜೈ ಎಂದು ​ ಸಿಂಗ್​ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: 26 ಅಮಾಯಕ ಹೆಣ್ಮಕ್ಕಳ ಸಿಂಧೂರ ಅಳಿಸಿದ ಪ್ರತೀಕಾರವೇ ‘ಆಪರೇಷನ್ ಸಿಂಧೂರ..’

ಏಪ್ರಿಲ್ 22 ರಂದು ಕಾಶ್ಮೀರದ ಪಹಲ್ಗಾಮ್​​ನಲ್ಲಿ ಭಯೋತ್ಪಾಕರು ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದರು. ಈ ವೇಳೆ ಒಟ್ಟು 26 ಮಂದಿ ಪ್ರವಾಸಿಗರು ಪ್ರಾಣ ಕಳೆದುಕೊಂಡಿದ್ದಾರೆ. ಭಾರತವು ಕಾಶ್ಮೀರದಲ್ಲಿ ನಡೆದಿರುವ ಭಯೋತ್ಪಾದಕ ದಾಳಿಗೆ ಪಾಕಿಸ್ತಾನ ಬೆಂಬಲಿತ ಭಯೋತ್ಪಾದಕ ಸಂಘಟನೆಗಳಾದ ಲಷ್ಕರ್-ಎ- ತೈಯ್ಬಾ (ಎಲ್‌ಇಟಿ)ಗೆ ಸಂಬಂಧವಿರುವ ‘ದಿ ರೆಸಿಸ್ಟೆನ್ಸ್ ಫ್ರಂಟ್’ (ಟಿಆರ್‌ಎಫ್) ಎಂಬ ಗುಂಪು ಕಾರಣ ಎಂದು ಹೇಳಿತ್ತು. ಭಯೋತ್ಪಾದಕ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಭಾರತ ಹೇಳಿತ್ತು. ಅಂತೆಯೇ ಇಂದು ರಾತ್ರಿಯಿಂದ ಭಾರತೀಯ ಸೇನೆ ಆಪರೇಷನ್ ಸಿಂಧೂರ್ ಆರಂಭಿಸಿದೆ. ಈ ಆಪರೇಷನ್ ಸಿಂಧೂರದಲ್ಲಿ ಭಾರತೀಯ ಭೂಸೇನೆ ಹಾಗೂ ವಾಯುಸೇನೆ ಜಂಟಿಯಾಗಿದೆ ನಡೆಸುತ್ತಿವೆ.

ಇದನ್ನೂ ಓದಿ: ಜಸ್ಟ್​​ 23 ನಿಮಿಷ..! ಆಪರೇಷನ್​​ ಸಿಂಧೂರಗೆ ನಡುಗಿದ ಪಾಕ್.. ಏನೆಲ್ಲ ಆಗೋಯ್ತು..?

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment