ಭವಾನಿ ರೇವಣ್ಣಗೆ ಬಂಧನದ ಭೀತಿ, ಎಲ್ಲಿಗೆ ಹೋದರು..?
ಕಿಡ್ನಾಪ್ ಪ್ರಕರಣದ ಬೆಳಕಿಗೆ ಬಂದ ಬಳಿಕ ನಾಪತ್ತೆ
ಅತ್ತ ಹಾಸನದಲ್ಲೂ ಇಲ್ಲ, ಇತ್ತ ಮೈಸೂರಲ್ಲೂ ಇಲ್ಲ
ಮೈಸೂರು: ಮಾಜಿ ಸಚಿವ ಹೆಚ್.ಡಿ.ರೇವಣ್ಣ ಕುಟುಂಬದಲ್ಲಿ ಇತ್ತೀಚೆಗೆ ನಡೆದ ಬೆಳವಣಿಗೆಗಳು ರಾಜ್ಯದಲ್ಲಿ ಭಾರೀ ಚರ್ಚೆ ಆಗ್ತಿದೆ. ಅಶ್ಲೀಲ ವಿಡಿಯೋ ಪ್ರಕರಣದ ಆರೋಪಿ ಪ್ರಜ್ವಲ್ ರೇವಣ್ಣ, ನಿನ್ನೆ ಎಸ್ಐಟಿಗೆ ಶರಣಾಗಿದ್ದು, ತನಿಖೆ ತೀವ್ರಗೊಂಡಿದೆ. ಇತ್ತ ಬಂಧನದ ಭೀತಿ ಎದುರಿಸುತ್ತಿರುವ ಭವಾನಿ ರೇವಣ್ಣ ಎಲ್ಲಿದ್ದಾರೆ ಅನ್ನೋದ್ರ ಬಗ್ಗೆ ಮಾಹಿತಿಯೇ ಇಲ್ಲ.
ಇದನ್ನೂ ಓದಿ:ಕೇರಳದಲ್ಲಿ ಗಗನಸಖಿ ಅರೆಸ್ಟ್.. ಭಾರೀ ಸಂಚಲನ ಮೂಡಿಸಿದ ಗಗನ ಸುಂದರಿ
ಈ ಮಧ್ಯೆ ಸಾಲಿಗ್ರಾಮದಲ್ಲಿರುವ ಭವಾನಿ ರೇವಣ್ಣರ ತವರು ಮನೆಗೂ ಬೀಗ ಹಾಕಲಾಗಿದೆ. ಮನೆಯ ಕುಟುಂಬದ ಸದಸ್ಯರು ಯಾರೂ ಇಲ್ಲ, ಬೃಹತ್ ಬಂಗಲೆ ಖಾಲಿಯಾಗಿದೆ. ತವರು ಮನೆಯಲ್ಲಿ ಭವಾನಿ ರೇವಣ್ಣ ಇದ್ದಾರೆ ಎಂದು ಹೇಳಲಾಗಿತ್ತು. ಆದರೆ ಅಲ್ಲಿಯೂ ಭವಾನಿ ರೇವಣ್ಣ ಇಲ್ಲ ಅನ್ನೋದು ಗೊತ್ತಾಗಿದೆ.
ಪ್ರಜ್ವಲ್ ಪ್ರಕರಣ ಬೆಳಕಿಗೆ ಬಂದಾಗ ಹೊಳೆನರಸೀಪುರದಲ್ಲಿ ವಾಸ್ತವ್ಯ ಹೂಡಿದ್ದರು. ಕಿಡ್ನಾಪ್ ಪ್ರಕರಣ ಬೆಳಕಿಗೆ ಬಂದ ಬಳಿಕ ಎಲ್ಲಿದ್ದಾರೆ ಅನ್ನೋದ್ರ ಬಗ್ಗೆ ಯಾವುದೇ ಸುಳಿವು ಇಲ್ಲ. ತಮ್ಮ ಅಣ್ಣ ಪ್ರಕಾಶ್ ಮೃತಪಟ್ಟಾಗ ಭವಾನಿ ರೇವಣ್ಣ ಇಲ್ಲಿಗೆ ಆಗಮಿಸಿದ್ದರು. ಇದೀಗ ಸಾಲಿಗ್ರಾಮದ ತವರು ಮನೆ ಕೂಡ ಖಾಲಿ, ಖಾಲಿಯಾಗಿದೆ. ಬಂಧನದ ಭೀತಿಯಲ್ಲಿರುವ ಭವಾನಿ ತವರು ಮನೆಯಿಂದಲೂ ಪರಾರಿಯಾಗಿದ್ದಾರೆ ಎಂದು ಹೇಳಲಾಗುತ್ತಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಭವಾನಿ ರೇವಣ್ಣಗೆ ಬಂಧನದ ಭೀತಿ, ಎಲ್ಲಿಗೆ ಹೋದರು..?
ಕಿಡ್ನಾಪ್ ಪ್ರಕರಣದ ಬೆಳಕಿಗೆ ಬಂದ ಬಳಿಕ ನಾಪತ್ತೆ
ಅತ್ತ ಹಾಸನದಲ್ಲೂ ಇಲ್ಲ, ಇತ್ತ ಮೈಸೂರಲ್ಲೂ ಇಲ್ಲ
ಮೈಸೂರು: ಮಾಜಿ ಸಚಿವ ಹೆಚ್.ಡಿ.ರೇವಣ್ಣ ಕುಟುಂಬದಲ್ಲಿ ಇತ್ತೀಚೆಗೆ ನಡೆದ ಬೆಳವಣಿಗೆಗಳು ರಾಜ್ಯದಲ್ಲಿ ಭಾರೀ ಚರ್ಚೆ ಆಗ್ತಿದೆ. ಅಶ್ಲೀಲ ವಿಡಿಯೋ ಪ್ರಕರಣದ ಆರೋಪಿ ಪ್ರಜ್ವಲ್ ರೇವಣ್ಣ, ನಿನ್ನೆ ಎಸ್ಐಟಿಗೆ ಶರಣಾಗಿದ್ದು, ತನಿಖೆ ತೀವ್ರಗೊಂಡಿದೆ. ಇತ್ತ ಬಂಧನದ ಭೀತಿ ಎದುರಿಸುತ್ತಿರುವ ಭವಾನಿ ರೇವಣ್ಣ ಎಲ್ಲಿದ್ದಾರೆ ಅನ್ನೋದ್ರ ಬಗ್ಗೆ ಮಾಹಿತಿಯೇ ಇಲ್ಲ.
ಇದನ್ನೂ ಓದಿ:ಕೇರಳದಲ್ಲಿ ಗಗನಸಖಿ ಅರೆಸ್ಟ್.. ಭಾರೀ ಸಂಚಲನ ಮೂಡಿಸಿದ ಗಗನ ಸುಂದರಿ
ಈ ಮಧ್ಯೆ ಸಾಲಿಗ್ರಾಮದಲ್ಲಿರುವ ಭವಾನಿ ರೇವಣ್ಣರ ತವರು ಮನೆಗೂ ಬೀಗ ಹಾಕಲಾಗಿದೆ. ಮನೆಯ ಕುಟುಂಬದ ಸದಸ್ಯರು ಯಾರೂ ಇಲ್ಲ, ಬೃಹತ್ ಬಂಗಲೆ ಖಾಲಿಯಾಗಿದೆ. ತವರು ಮನೆಯಲ್ಲಿ ಭವಾನಿ ರೇವಣ್ಣ ಇದ್ದಾರೆ ಎಂದು ಹೇಳಲಾಗಿತ್ತು. ಆದರೆ ಅಲ್ಲಿಯೂ ಭವಾನಿ ರೇವಣ್ಣ ಇಲ್ಲ ಅನ್ನೋದು ಗೊತ್ತಾಗಿದೆ.
ಪ್ರಜ್ವಲ್ ಪ್ರಕರಣ ಬೆಳಕಿಗೆ ಬಂದಾಗ ಹೊಳೆನರಸೀಪುರದಲ್ಲಿ ವಾಸ್ತವ್ಯ ಹೂಡಿದ್ದರು. ಕಿಡ್ನಾಪ್ ಪ್ರಕರಣ ಬೆಳಕಿಗೆ ಬಂದ ಬಳಿಕ ಎಲ್ಲಿದ್ದಾರೆ ಅನ್ನೋದ್ರ ಬಗ್ಗೆ ಯಾವುದೇ ಸುಳಿವು ಇಲ್ಲ. ತಮ್ಮ ಅಣ್ಣ ಪ್ರಕಾಶ್ ಮೃತಪಟ್ಟಾಗ ಭವಾನಿ ರೇವಣ್ಣ ಇಲ್ಲಿಗೆ ಆಗಮಿಸಿದ್ದರು. ಇದೀಗ ಸಾಲಿಗ್ರಾಮದ ತವರು ಮನೆ ಕೂಡ ಖಾಲಿ, ಖಾಲಿಯಾಗಿದೆ. ಬಂಧನದ ಭೀತಿಯಲ್ಲಿರುವ ಭವಾನಿ ತವರು ಮನೆಯಿಂದಲೂ ಪರಾರಿಯಾಗಿದ್ದಾರೆ ಎಂದು ಹೇಳಲಾಗುತ್ತಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ