newsfirstkannada.com

ದೇವತೆ ದರ್ಶನ ಮಾಡಿ ಬರುವಾಗ ಭಯಾನಕ ಕಾರು-ಬೈಕ್ ಆಕ್ಸಿಡೆಂಟ್.. ಓರ್ವ ಸಾವು, ಮತ್ತೋರ್ವ ಗಂಭೀರ

Share :

22-10-2023

    ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ, ಪ್ರಕರಣ ದಾಖಲು

    ರಭಸವಾಗಿ ಕಾರು ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವು

    ಸ್ವಗ್ರಾಮಕ್ಕೆ ಮರಳುತ್ತಿದ್ದ ವೇಳೆ ವೇಗವಾಗಿ ಬಂದು ಡಿಕ್ಕಿ ಹೊಡೆದ ಕಾರು

ಬೀದರ್: ದೇವರ ದರ್ಶನ ಮುಗಿಸಿಕೊಂಡು ಬರುತ್ತಿದ್ದ ಬೈಕ್​ಗೆ ವೇಗವಾಗಿ ಬಂದು ಕಾರು ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಈ ಘಟನೆ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಚಂಡಿಕಾಪೂರ ಗ್ರಾಮದಲ್ಲಿ ನಡೆದಿದೆ.

ಬಾಲ್ಕಿ ತಾಲೂಕಿನ ಎಣಿಕೂರ್ ಗ್ರಾಮದ ಬೈಕ್ ಸವಾರ ಬಾಲಾಜಿ ವಿಠಲ್ (41) ಸಾವನ್ನಪ್ಪಿದ ದುರ್ದೈವಿ. ಇನ್ನೊಬ್ಬ ಬೈಕ್ ಸವಾರ ಪ್ರಕಾಶ್ ಎನ್ನುವರ ಸ್ಥಿತಿ ಗಂಭೀರವಾಗಿದೆ. ಗಾಯಾಳುವನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಇಬ್ಬರು ಬಾಲ್ಕಿ ಮೂಲದ ಎಣಿಕೂರ್ ಗ್ರಾಮದವರಾಗಿದ್ದಾರೆ.

ಇವರು ಮಹಾರಾಷ್ಟ್ರದ ತುಳಜಾಪೂರ ಭವಾನಿ ಮಾತಾ ದರ್ಶನ ಮಾಡಿಕೊಂಡು ಸ್ವ ಗ್ರಾಮಕ್ಕೆ ವಾಪಸ್ ಆಗುತ್ತಿದ್ದರು. ಈ ವೇಳೆ ಚಂಡಿಕಾಪೂರ ಗ್ರಾಮದ ಬಳಿ ಆಗಮಿಸುತ್ತಿರುವಾಗ ಕಾರೊಂದು ವೇಗವಾಗಿ ಬಂದು ಬೈಕ್​​ಗೆ ಡಿಕ್ಕಿ ಹೊಡೆದಿದೆ. ಇದರಿಂದ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ರೆ, ಇನ್ನೊಬ್ಬ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಬಸವಕಲ್ಯಾಣ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ದೇವತೆ ದರ್ಶನ ಮಾಡಿ ಬರುವಾಗ ಭಯಾನಕ ಕಾರು-ಬೈಕ್ ಆಕ್ಸಿಡೆಂಟ್.. ಓರ್ವ ಸಾವು, ಮತ್ತೋರ್ವ ಗಂಭೀರ

https://newsfirstlive.com/wp-content/uploads/2023/10/BDR_CAR_ACCIDENT.jpg

    ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ, ಪ್ರಕರಣ ದಾಖಲು

    ರಭಸವಾಗಿ ಕಾರು ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವು

    ಸ್ವಗ್ರಾಮಕ್ಕೆ ಮರಳುತ್ತಿದ್ದ ವೇಳೆ ವೇಗವಾಗಿ ಬಂದು ಡಿಕ್ಕಿ ಹೊಡೆದ ಕಾರು

ಬೀದರ್: ದೇವರ ದರ್ಶನ ಮುಗಿಸಿಕೊಂಡು ಬರುತ್ತಿದ್ದ ಬೈಕ್​ಗೆ ವೇಗವಾಗಿ ಬಂದು ಕಾರು ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಈ ಘಟನೆ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಚಂಡಿಕಾಪೂರ ಗ್ರಾಮದಲ್ಲಿ ನಡೆದಿದೆ.

ಬಾಲ್ಕಿ ತಾಲೂಕಿನ ಎಣಿಕೂರ್ ಗ್ರಾಮದ ಬೈಕ್ ಸವಾರ ಬಾಲಾಜಿ ವಿಠಲ್ (41) ಸಾವನ್ನಪ್ಪಿದ ದುರ್ದೈವಿ. ಇನ್ನೊಬ್ಬ ಬೈಕ್ ಸವಾರ ಪ್ರಕಾಶ್ ಎನ್ನುವರ ಸ್ಥಿತಿ ಗಂಭೀರವಾಗಿದೆ. ಗಾಯಾಳುವನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಇಬ್ಬರು ಬಾಲ್ಕಿ ಮೂಲದ ಎಣಿಕೂರ್ ಗ್ರಾಮದವರಾಗಿದ್ದಾರೆ.

ಇವರು ಮಹಾರಾಷ್ಟ್ರದ ತುಳಜಾಪೂರ ಭವಾನಿ ಮಾತಾ ದರ್ಶನ ಮಾಡಿಕೊಂಡು ಸ್ವ ಗ್ರಾಮಕ್ಕೆ ವಾಪಸ್ ಆಗುತ್ತಿದ್ದರು. ಈ ವೇಳೆ ಚಂಡಿಕಾಪೂರ ಗ್ರಾಮದ ಬಳಿ ಆಗಮಿಸುತ್ತಿರುವಾಗ ಕಾರೊಂದು ವೇಗವಾಗಿ ಬಂದು ಬೈಕ್​​ಗೆ ಡಿಕ್ಕಿ ಹೊಡೆದಿದೆ. ಇದರಿಂದ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ರೆ, ಇನ್ನೊಬ್ಬ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಬಸವಕಲ್ಯಾಣ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More